ರಾಜ್ಯ

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ

ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ – ರಾಜಕೀಯದಲ್ಲಿ ಸಂಚಲನ ಬೆಂಗಳೂರು: ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್‌ನಲ್ಲಿ ಈ ನಡೆಗೆ ತೀವ್ರ ಅಪಸ್ವರ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಬಹಿರಂಗವಾಗಿಯೇ ಅಸಮಾಧಾನ‌ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಹಾಗೂ ರಾಹುಲ್ ಗಾಂಧಿ […]

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ Read More »

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌

ಪ್ರಣಾಳಿಕೆ ಸಿದ್ಧಪಡಿಸಿದ್ದು ನೀವೇ ಎಂದ ಶಿವಕುಮಾರ್‌ ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿವೆ ಎಂಬುದನ್ನು ಈಗ ಕಾಂಗ್ರೆಸ್‌ ಸಚಿವರೇ ಹೇಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರೂ

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌ Read More »

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ

ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ

ವಾರ್ಷಿಕ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತವಾಗಿ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ Read More »

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ

ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.ಓಮಾನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು!

ಆರೋಪಿಗಳ ಖರ್ಚಿನಲ್ಲೇ ಗುಜರಾತ್‌ಗೆ ಹೋಗಿ ಮೋಜುಮಸ್ತಿ ಮಾಡಿದ ಫೋಟೊ ಬಹಿರಂಗ ಮಂಗಳೂರು : ಅಮೆಜಾನ್‌ ಆನ್‌ಲೈನ್‌ ಕಂಪನಿಗೆ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಇಬ್ಬರು ಸೈಬರ್‌ ವಂಚಕರಿಂದಲೇ ಮಂಗಳೂರು ಪೊಲೀಸರು ಕಾನೂನು ವಿದ್ಯಾರ್ಥಿಗಳಿಗೆ ಸೈಬರ್‌ ವಂಚನೆ ಜಾಗೃತಿಯ ಪಾಠ ಮಾಡಿಸಿ ಯಡವಟ್ಟು ಮಾಡಿಕೊಂಡಿರುವುದು ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಈ ಆರೋಪಿಗಳ ಖರ್ಚಿನಲ್ಲಿ ಪೊಲೀಸರು ತಿರುಗಾಡಿ ಮೋಜು ಮಸ್ತಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದು ಕೂಡ ಬಹಿರಂಗವಾಗಿ ಪೊಲೀಸ್‌ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಮಂಗಳೂರಿನ ಉರ್ವ ಠಾಣೆಯ ಪೊಲೀಸರ ವಿರುದ್ಧ ಇಂಥದ್ದೊಂದು ಗಂಭೀರ

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು! Read More »

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ

ಪ್ರಯಾಣ ದೂರ, ಸಮಯವನ್ನು ಕಡಿಮೆಗೊಳಿಸಲು ಷಟ್ಪಥ ನಿರ್ಮಾಣಕ್ಕೆ ಪ್ರಸ್ತಾವ ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಬೇಡಿಕೆಯ ಕೇಂದ್ರ ಸರಕಾರ ಸ್ಪಂದಿಸಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಯೋಜನೆ ಪ್ರಕಾರ ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಈಗ ಬೆಂಗಳೂರು-ಮಂಗಳೂರು ನಡುವಿನ ಸುಮಾರು 400 ಕಿ.ಮೀ ದೂರ ಕ್ರಮಿಸಲು 7-8 ಗಂಟೆ ಸಮಯ ಹಿಡಿಯುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ Read More »

ಶಿರೂರು ಗುಡ್ಡ ಕುಸಿತ : ಕಾಮಗಾರಿ ಮಾಡಿದ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜು.16ರಂದು 11 ಜನರ ಸಾವಿಗೆ ಕಾರಣವಾಗಿದ್ದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.ಶಿರೂರು ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದ ಕಂಪನಿಯೇ ಹೊಣೆ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದರು.ಅವೈಜ್ಞಾನಿಕ ರೀತಿಯಲ್ಲಿ ಗುಡ್ಡ ಕೊರೆದಿದ್ದರಿಂದ ಅವಘಡ ಸಂಭವಿಸಿದೆ. ಅವಘಡ

ಶಿರೂರು ಗುಡ್ಡ ಕುಸಿತ : ಕಾಮಗಾರಿ ಮಾಡಿದ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ Read More »

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆಯಾಗಬೇಕಿರುವುದರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ

ಈ ಬಾರಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ ಎಂದು ಲೇವಡಿ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಲ್ಕು ಪುಟಗಳ ಬಹಿರಂಗ ಪತ್ರ ಬರೆದಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ. ನೌಕರರಿಗೆ ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ, ಗುತ್ತಿಗೆದಾರರ ಬಾಕಿ ಪಾವತಿಸಲಾಗದ ದಾರುಣ

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ Read More »

error: Content is protected !!
Scroll to Top