ರಾಜ್ಯ

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ

ಬೆಂಬಲಿಗರಿಂದ ಆಸ್ಪತ್ರೆ ಎದುರು ಮಚ್ಚು, ಲಾಂಗ್‌ ಪ್ರದರ್ಶಿಸಿ ಭೀತಿ ಸೃಷ್ಟಿ ಬೆಂಗಳೂರು : ಕಾಂಗ್ರೆಸ್‌ ಮುಖಂಡರೊಬ್ಬರು ನಿನ್ನೆ ತಡರಾತ್ರಿ ಬೆಂಗೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಅಶೋಕನಗರದ ಗರುಡ ಮಾಲ್ ಬಳಿ ತಡರಾತ್ರಿ 1 ಗಂಟೆ ವೇಳೆಗೆ ಕಾಂಗ್ರೆಸ್​ ಮುಖಂಡ ಹೈದರ್ ಅಲಿ ಎಂಬವರನ್ನು ಕೊಲೆ ಮಾಡಲಾಗಿದೆ. ಹೈದರ್ ಅಲಿ ಶನಿವಾರ ರಾತ್ರಿ ಲೈವ್‌ಬ್ಯಾಂಡ್​ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ […]

ಬೆಂಗಳೂರಿನಲ್ಲಿ ನಡುರಾತ್ರಿ ಕಾಂಗ್ರೆಸ್‌ ಮುಖಂಡನ ಹತ್ಯೆ Read More »

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ

ಸರಕಾರದ ಮೇಲೆ ದಾಳಿ ಮಾಡಲು ವಿಪಕ್ಷದ ಬಳಿಯಿದೆ ಸಾಕಷ್ಟು ಅಸ್ತ್ರ ಬೆಂಗಳೂರು: ಮಾರ್ಚ್ 3ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಹಲವಾರು ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ತಿನ

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ Read More »

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ

ಬೆಂಗಳೂರಿನ ಅಶೋಕ್ ನಗರದ ಸ್ಮಶಾನದ ಕಾಳಿಕಾಂಬ ಗುಡಿಯಲ್ಲಿ ರಕ್ತಾಭಿಷೇಕ ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಿಸಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಈ ಇಬ್ಬರು ಆರೋಪಿಗಳು ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.ಸ್ನೇಹಮಯಿ ಕೃಷ್ಣ, ಗಂಗರಾಜು,

ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ : ಇನ್ನಿಬ್ಬರು ಸೆರೆ Read More »

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ

ಮಾ.31ರೊಳಗೆ ಹೊಸ ನಂಬರ್‌ ಪ್ಲೇಟ್‌ ಅಳವಡಿಸಲು ಸೂಚನೆ ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್‌ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಕೆಗೆ ಆಗಸ್ಟ್‌ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌

ಎಚ್‌ಎಸ್‌ಆರ್‌ಪಿ ಗಡುವು ಮತ್ತೆ ವಿಸ್ತರಣೆ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ

ಸಿಬಿಎಸ್‌ಎ, ಐಸಿಎಸ್‌ಯ ಬೋರ್ಡ್‌ ಮಾದರಿಯಲ್ಲಿ ಅಂಕ ನಿಗದಿಗೆ ಆಗ್ರಹ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಕುರಿತು ಪತ್ರ ಬರೆದಿರುವ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. ಸರಕಾರ ಸರಕಾರಿ ಮತ್ತು ಅನುದಾನಿತ ಶಾಲೆಗಳ ಎಸ್‌ಎಸ್‌ಎಲ್‌ಸಿ ಮಕ್ಕಳ ತೇರ್ಗಡೆಗೆ ಕನಿಷ್ಠ ಶೇ.35 ಅಂಕ ಗಳಿಕೆ

ಎಸ್‌ಎಸ್‌ಎಲ್‌ಸಿ ತೇರ್ಗಡೆ ಕನಿಷ್ಠ ಅಂಕ ಶೇ.33ಕ್ಕಿಳಿಸಲು ಖಾಸಗಿ ಶಾಲೆಗಳ ಒತ್ತಾಯ Read More »

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ

ಲಾರಿಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಅಪಘಾತ ಲಖನೌ: ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ ಒಂದೇ ಕುಟುಂಬದ 6 ಜನ ಭೀಕರ ಅಪಘತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಾಜಾಪುರ ಜಿಲ್ಲೆಯ ರೂಪಾಪುರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌

ಮಹಾಕುಂಭಮೇಳಕ್ಕೆ ಹೋಗಿದ್ದ ಬೀದರ್‌ನ 6 ಮಂದಿ ಭೀಕರ ಅಪಘಾತಕ್ಕೆ ಬಲಿ Read More »

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ

ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿಗೆ ತಡರಾತ್ರಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ

ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಸತತ ಟೀಕೆಗಳ ಬಳಿಕ ಎಚ್ಚೆತ್ತ ಸರಕಾರ ಬೆಂಗಳೂರು: ಮಹಿಳೆಯರು ಕಳೆದ ಮೂರು ತಿಂಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಹಣ ಇಂದು ಬಿಡುಗಡೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ವ್ಯಕ್ತವಾದ ನಂತರ ಎಚ್ಚೆತ್ತ ಸರಕಾರ ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಹಣ ಜಮೆ ಪ್ರಕ್ರಿಯೆಗೆ ಶುಕ್ರವಾರದಿಂದ ಚಾಲನೆ ನೀಡಲಿದೆ. ಶುಕ್ರವಾರ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ. ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ಸತತವಾಗಿ

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ Read More »

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

error: Content is protected !!
Scroll to Top