ರಾಜ್ಯ

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು

7 ವಿದ್ಯಾರ್ಥಿನಿಯರು ಅಸ್ವಸ್ಥ; ನಾಲ್ಕು ಮಂದಿ ಗಂಭೀರ ಬೆಂಗಳೂರು: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಏಳು ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್)ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು Read More »

ಕುಸಿದು ಬಿದ್ದು 7ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಕೊಡಗು : ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಪೂರ್ವಿಕಾ ಎಂಬ ಕುಸಿದು ಬಿದ್ದು ಮೃತಪಟ್ಟವಳು. . ಕೂಡಲೇ ಶಿಕ್ಷಕರು ಕೂಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರದ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕುಸಿದು ಬಿದ್ದು 7ನೇ ತರಗತಿ ವಿದ್ಯಾರ್ಥಿನಿ ಮೃತ್ಯು Read More »

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌

ಖುದ್ದು ಹಾಜರಾತಿ, ಸಮನ್ಸ್‌ಗೆ ಹೈಕೋರ್ಟಿನಿಂದ ತಡೆ ಬೆಂಗಳೂರು: ಪೋಕ್ಸೊ ಪ್ರಕರಣದ ಸಂಬಂಧ ಮಾರ್ಚ್​ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಿ.ಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.2024ರ ಫೆ‌ಬ್ರವರಿ 2ರಂದು ನಡೆದಿದೆ ಎನ್ನಲಾದ ಘಟನೆ ಕುರಿತು 1 ತಿಂಗಳು 12 ದಿನ ತಡವಾಗಿ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಘಟನೆ

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌ Read More »

ಡಿಕ್ಕಿಯ ಬಿರುಸಿಗೆ ಕಾಂಪೌಂಡ್‌ನ ಬೇಲಿಯಲ್ಲಿ ಸಿಲುಕಿ ನೇತಾಡಿದ ಮಹಿಳೆ

ಮಂಗಳೂರಿನಲ್ಲಿ ಸಂಭವಿಸಿದ ಎದೆ ಝಲ್‌ ಎನಿಸುವ ಅಪಘಾತದ ವೀಡಿಯೊ ಭಾರಿ ವೈರಲ್‌ ಮಂಗಳೂರು: ಬೈಕ್ ಸವಾರನನ್ನು ಗುದ್ದಿ ಸಾಯಿಸಲೆಂದು ಧಾವಿಸಿ ಬಂದ ಕಾರು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು, ಈ ಮಹಿಳೆ ಪಕ್ಕದ ಕಂಪೌಂಡ್‌ಗೆ ಎಸೆಯಲ್ಪಟ್ಟು ಕಬ್ಬಿಣದ ಬೇಲಿಯಲ್ಲಿ ಸಿಲುಕಿಕೊಂಡು ನೇತಾಡಿದ ವಿಲಕ್ಷಣ ಅಪಘಾತವೊಂದು ನಿನ್ನೆ ಸಂಜೆ ಮಂಗಳೂರಿನ ಕಾಪಿಕಾಡ್‌ನಲ್ಲಿ ಸಂಭವಿಸಿದ್ದು, ಇದರ ವೀಡಿಯೊ ಎಲ್ಲೆಡೆ ಹರಿದಾಡಿ ಭಾರಿ ವೈರಲ್‌ ಆಗಿದೆ. ಕಾರು ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿರುವ ದೃಶ್ಯ ಎದೆ

ಡಿಕ್ಕಿಯ ಬಿರುಸಿಗೆ ಕಾಂಪೌಂಡ್‌ನ ಬೇಲಿಯಲ್ಲಿ ಸಿಲುಕಿ ನೇತಾಡಿದ ಮಹಿಳೆ Read More »

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ನಿನ್ನೆ ಕರಾವಳಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಪ್ರತ್ಯೇಕ ರಾಜ್ಯದ ಕುರಿತು ಪರೋಕ್ಷವಾಗಿ ಮಾಡಿದ ಉಲ್ಲೇಖ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕರವಾಳಿ ಭಾಗದ ಶಾಸಕರು ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ನಿನ್ನೆ ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದ ಕುರಿತು ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಪಾರವಾದ ಅವಕಾಶಗಳಿದ್ದರೂ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಶಾಸಕರು ಒಕ್ಕೂರಲಿನಿಂದ ಹೇಳಿದ್ದಾರೆ.ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ Read More »

ಉಚಿತ ಕೊಡುಗೆಗಳನ್ನು ನೀಡೋದ್ರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ , ಉದ್ಯೋಗ ಸೃಷ್ಟಿಯೇ ಮುಖ್ಯ : ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ

ಉಚಿತ ಕೊಡುಗೆಗಳನ್ನು ನೀಡೋದ್ರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ, ಅವಿಷ್ಕಾರದ ಮೂಲಕ ಉದ್ಯೋಗ ಸೃಷ್ಟಿಯೇ ಮುಖ್ಯ ಎಂದು ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿಯವರು ಹೇಳಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಸನ್ ಸೆಂಟರ್‌ನಲ್ಲಿ ಮಾ.12ರಂದು ನಡೆದ ಟ್ರೈ ಕಾನ್ ಮುಂಬೈ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆಗಳಿಂದ ಬಡತನ ನಿವಾರಣೆಯಾಗುವುದಿಲ್ಲ ಎಂದರು. ಅವಿಷ್ಕಾರದಿಂದ ಹೆಚ್ಚು ಉದ್ಯೋಗ ಸೃಷ್ಟಿಯಾದಾಗ ಮಾತ್ರ ಬಡತನ ದೂರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಮಾಜಿ NASSCOM ಅಧ್ಯಕ್ಷ ಹರೀಶ್ ಮೆಹ್ರಾ ಉಪಸ್ಥಿತರಿದ್ದರು. “ಉಚಿತ ಕೊಡುಗೆಗಳಿಂದ

ಉಚಿತ ಕೊಡುಗೆಗಳನ್ನು ನೀಡೋದ್ರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ , ಉದ್ಯೋಗ ಸೃಷ್ಟಿಯೇ ಮುಖ್ಯ : ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ Read More »

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು

ದೈವಾರಾಧನೆಗೆ ಅಡ್ಡಿಪಡಿಸಿದವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ಮಂಗಳೂರು : ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ದೈವದ ಆರಾಧನೆಗೆ ಅಡ್ಡಿಪಡಿಸಿದ ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ದ ವಿರುದ್ಧ ಮಾ.18ರಂದು ನಡೆಸುದ್ದೇಶಿಸಿದ್ದ ಬೃಹತ್‌ ಪಾದಯಾತ್ರೆ ತಾತ್ಕಾಲಿಕವಾಗಿ ರದ್ದಾಗಿದೆ. ಬಜ್ಪೆಯ ಪೇಜಾವರ ಮಾಗಣೆಯ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ಸರಕಾರಿ ಕಂಪನಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಮಾ. 18ರಂದು ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಆದರೆ, ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ

ನೆಲ್ಲಿದಡಿ ಗುತ್ತು ಉಳಿಸಿ ಪಾದಯಾತ್ರೆ ತಾತ್ಕಾಲಿಕ ರದ್ದು Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ

ಸಿಐಡಿ ತನಿಖೆ ದಿಢೀರ್‌ ಹಿಂದೆಗೆದುಕೊಂಡ ಕುರಿತು ನಾನಾ ಅನುಮಾನ ಬೆಂಗಳೂರು : ಕನ್ನಡ ಚಿತ್ರನಟಿ ರನ್ಯಾ ರಾವ್‌ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇಬ್ಬರ ಸಚಿವರ ಹೆಸರು ಈ ಪ್ರಕರಣದಲ್ಲಿ ತುಳುಕು ಹಾಕುತ್ತಿರುವ ಬೆನ್ನಲ್ಲೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಒಂದು ಫೋಟೊ ಕಾಂಗ್ರೆಸ್‌ನ ಆಕ್ರೋಶಕ್ಕೆ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿ ರನ್ಯಾ ರಾವ್‌ ಜೊತೆ ಇರುವ ಫೋಟೊವನ್ನು ಬಿಜೆಪಿಯ ಸೋಷಿಯಲ್‌ ಮೀಡಿಯಾ ವಿಭಾಗ ಅಪ್‌ಲೋಡ್‌ ಮಾಡಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ರನ್ಯಾ ಜೊತೆ ಸಿದ್ದರಾಮಯ್ಯ, ಪರಮೇಶ್ವರ್‌ ಇರುವ ಫೋಟೊ ಹಾಕಿ ಕಾಲೆಳೆದ ಬಿಜೆಪಿ Read More »

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು

ಉಡುಪಿ: ಪೊಲೀಸರಿಗೆ ಅಪಘಾತ ನಡೆಸಿ ಪರಾರಿಯಾಗಿದ್ದವರನ್ನು ಹಾಸನದಲ್ಲಿ ಬಂಧಿಸಿ ಮಣಿಪಾಲಕ್ಕೆ ಕರೆತರುತ್ತಿದ್ದ ಗರುಡ ಗ್ಯಾಂಗ್‌ ನ ಇಸಾಕ್‌ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇಸಾಕ್ ಕಾಲಿಗೆ ಗುಂಡೇಟು ತಗಲಿದ್ದು, ಇಬ್ಬರು ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಸಾಕ್ ಹಾಗೂ ಇತರರ ಬಂಧನಕ್ಕಾಗಿ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ, ಮಲ್ಪೆ ವೃತ್ತ ನಿರೀಕ್ಷಕರು ಹಾಗೂ ಇತರ ಅಧಿಕಾರಿ

ದರೋಡೆ ಪ್ರಕರಣ : ಹಾಸನದಲ್ಲಿ ಇಸಾಕ್‌ ಸಹಿತ ನಾಲ್ವರ ಬಂಧನ | ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದ ಇಸಾಕ್‌ ಕಾಲಿಗೆ ಪೊಲೀಸರಿಂದ ಗುಂಡೇಟು Read More »

error: Content is protected !!
Scroll to Top