ರಾಜ್ಯ

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಟಿಕೆಟ್‌ ದೊರೆಯದೇ ಇರುವುದಕ್ಕಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೆಂಕಟ್ ವಳಲಂಬೆ ಹೇಳಿದ್ದಾರೆ. ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ, ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ […]

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಪಂಜಾಬ್‌ನ ಭಠಿಂಡ ಮಿಲಿಟರಿ ಸ್ಟೇಷನ್‌ನಲ್ಲಿ ಗುಂಡು ಹಾರಾಟ : ನಾಲ್ಕು ಯೋಧರ ಬಲಿ

ಭಯೋತ್ಪಾದಕ ದಾಳಿ ಅಲ್ಲ ಎಂದ ಪೊಲೀಸ್‌ ವರಿಷ್ಠ ಭಠಿಂಡ : ಪಂಜಾಬ್‌ನ ಭಠಿಂಡದಲ್ಲಿರುವ ಸೇನಾ ನೆಲೆ ʼಭಠಿಂಡ ಮಿಲಿಟರಿ ಸ್ಟೇಷನ್‌ʼನಲ್ಲಿ ಇಂದು ಸಂಭವಿಸಿದ ಗುಂಡು ಹಾರಾಟ ಪ್ರಕರಣದಲ್ಲಿ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇದು ಭಯೋತ್ಪಾದಕ ದಾಳಿಯೇ ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದರೆ ಪಂಜಾಬ್‌ ಪೊಲೀಸ್‌ ವರಿಷ್ಠರು ಭಯೋತ್ಪಾದಕ ದಾಳಿ ಅಲ್ಲ ಎಂದಿದ್ದಾರೆ.ನಸುಕಿನ 4.35ರ ವೇಳೆಗ ಗುಂಡಿನ ದಾಳಿಯಾಗಿದೆ. ಕೂಡಲೇ ಕ್ಡಿಕ್‌ ರೆಸ್ಪಾನ್ಸ್‌ ಫೋರ್ಸ್‌ ಕಾರ್ಯಾಚರಣೆಗಿಳಿದಿದೆ. ದಾಳಿ ಭಯೋತ್ಪಾದನೆ ಕೃತ್ಯದಂತೆ ಕಾಣಿಸುತ್ತಿಲ್ಲ, ಯಾರೋ ಹತಾಶ ಮನಸ್ಥಿತಿಯವರು ಎಸಗಿದ ಕೃತ್ಯವಾಗಿರುವ

ಪಂಜಾಬ್‌ನ ಭಠಿಂಡ ಮಿಲಿಟರಿ ಸ್ಟೇಷನ್‌ನಲ್ಲಿ ಗುಂಡು ಹಾರಾಟ : ನಾಲ್ಕು ಯೋಧರ ಬಲಿ Read More »

ಸಹಜ ಮುಂಗಾರು ಸಾಧ್ಯತೆ : ಹವಾಮಾನ ಇಲಾಖೆ

ದೂರವಾದ ಜನರ ಆತಂಕ ದೆಹಲಿ : ಈ ವರ್ಷ ಮಳೆ ಕೊರತೆಯಾಗಲಿದೆ ಎಂಬ ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್‌ನ ಭವಿಷ್ಯವನ್ನು ಸರಕಾರಿ ಹವಾಮಾನ ಸಂಸ್ಥೆ ಅಲ್ಲಗಳೆದಿದೆ. ಶೇ.20 ರಷ್ಟು ಮಳೆ ಕೊರತೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್‌ ಭವಿಷ್ಯ ನುಡಿದಿತ್ತು. ಅದಕ್ಕೆ ವ್ಯತಿರಿಕ್ತವಾಗಿ ಭಾರತೀಯ ಹವಾಮಾನ ಇಲಾಖೆ ಈ ಮುಂಗಾರಿನಲ್ಲಿ ‘ಎಲ್‌ ನಿನೋ’ ಹವಾಮಾನ ಸ್ಥಿತ್ಯಂತರ ಉಂಟಾಗದು. ವಾಡಿಕೆಯಂತೆ ಈ ಸಲವೂ ಸಾಮಾನ್ಯ ಮುಂಗಾರು ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆಯ ಮುನ್ಸೂಚನೆಯನ್ನೇ ರೈತಾಪಿ

ಸಹಜ ಮುಂಗಾರು ಸಾಧ್ಯತೆ : ಹವಾಮಾನ ಇಲಾಖೆ Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ

ಉಡುಪಿಯಿಂದ ಯಶ್‌ಪಾಲ್‌ ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ ಕಣಕ್ಕೆ ಪುತ್ತೂರು, ಸುಳ್ಯ ಟಿಕೆಟ್‌ ಮಹಿಳೆಯರಿಗೆ ದೆಹಲಿ : ಗಜಪ್ರಸವದಂತಾಗಿದ್ದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರು.ನಿರೀಕ್ಷೆಯಂತೆಯೇ ಬಿಜೆಪಿ ಹಲವು ಪ್ರಯೋಗಗಳನ್ನು ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ Read More »

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವರು ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಎ. 10 ರಂದು ಸಂಭವಿಸಿದೆ. ನಂದಕುಮಾರ್ (50) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 20 ವರ್ಷಗಳ ಹಿಂದೆ ಪುತ್ತೂರಿಗೆ ಬಂದು ಬೊಳುವಾರಿನಲ್ಲಿ ತನ್ನ ಸಂಸಾರದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಎ. 3 ರಂದು ನಂದಕುಮಾರ್ ರವರ ಪತ್ನಿ ಗೋಮತಿಯವರು ಮಗನೊಂದಿಗೆ ಸ್ವಂತ ಊರಿಗೆ ಹೋಗುವಾಗ ಅರಿವಳಗನ್(ನಂದಕುಮಾರ್‌ ರವರ ಗೆಳೆಯ) ಅವರಲ್ಲಿ ನಂದಕುಮಾರ್ ರವರನ್ನು ನೋಡಿಕೊಳ್ಳುವಂತೆ ತಿಳಿಸಿದ್ದರು. ಎ.10 ರಂದು ಗೋಮತಿಯವರು

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು Read More »

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಗುಮ್ಮಟಗದ್ದೆ ಎಂಬಲ್ಲಿ ಸಂಭವಿಸಿದೆ. ಪುಣ್ಯಶ್ರೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಎ. 4 ರಂದು ಇವರು ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ. 10 ರಂದು ರಾತ್ರಿ ಸುಮಾರು ಸಂಜೆ 3.55 ರ ವೇಳೆಗೆ ತನ್ನ ಪತಿ ಪುರುಷೋತ್ತಮ ರವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ತಮ್ಮ ಮನೆಯ ಬಳಿಗೆ ಬಂದು

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌

ಬೆಂಗಳೂರು : ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಮತ್ತು ಲಿಖಿತ ಪರೀಕ್ಷೆ ರದ್ದುಪಡಿಸಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ 145 ಮಂದಿ ಅಭ್ಯರ್ಥಿಗಳ ಪೈಕಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಜೂ.15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಎನ್‌.ವಿ. ಚಂದನ್‌, ವಸಂತ್‌ ನಾಯಕ್‌, ಆಶಾ ಸಣಕಲ್ಲ ಮತ್ತು ರಾಜೇಶ್ವರಿ ಸೇರಿದಂತೆ 145 ಮಂದಿ ಅಭ್ಯರ್ಥಿಗಳು ಪ್ರತ್ಯೇಕವಾಗಿ ಸಲ್ಲಿಸಿರುವ

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌ Read More »

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ಡಿಜಿಟಲ್ ವೇದಿಕೆ ಒದಗಿಸುವ ಮಾರ್ಗವಾಗಿ UUCMS ಅನ್ನು ಕಳೆದ ವರ್ಷ ಜಾರಿಗೆ ತರಲಾಯಿತು. ಶಿಕ್ಷಣ ಇಲಾಖೆಯು ಈ ವ್ಯವಸ್ಥೆಯ ಅಡಿಯಲ್ಲಿ 10 ಮಾಡ್ಯೂಲ್‌ಗಳನ್ನು

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ Read More »

ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು : ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ತೆರವುಗೊಳಿಸಿ ಆದೇಶ ನೀಡಿದೆ. ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶಿಸಿದೆ. ಈಗ ರೂಪಾ ಮೌದ್ಗಿಲ್‌ ಅವರಿಗೆ

ಡಿ ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವು : ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ Read More »

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?!

ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ- ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ- ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ?! Read More »

error: Content is protected !!
Scroll to Top