ರಾಜ್ಯ

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು

ಬೆಂಗಳೂರು : ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ. ಜೆಸಿಬಿ ಹರಿದು ಮೃತ ಪಟ್ಟ ಮಗು ಥವನ್ ರೆಡ್ಡಿ (2) ಎನ್ನಲಾಗಿದೆ. ಮಂಗಳವಾರ ಸಂಜೆ 6.30ಕ್ಕೆ ಘಟನೆ ನಡೆದಿದ್ದು, ಜೆಸಿಬಿ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ಈ ದುರ್ಘಟನೆ ನಡೆದಿದೆ. ಮೃತ ಮಗು ಥವನ್ ರೆಡ್ಡಿ ಮನೆ ಮುಂದೆ ಆಟವಾಡುತ್ತಿದ್ದಾಗ ವೇಗವಾಗಿ ಬಂದ ಜೆಸಿಬಿ ಮಗುವಿನ ತಲೆಯ ಮೇಲೆ ಹರಿದು ಹೋಗಿದೆ.  ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ […]

ಜೆಸಿಬಿ ಹರಿದು 2 ವರ್ಷದ ಮಗು ಮೃತ್ಯು Read More »

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ

ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀಯನ್ನು ವರಿಸಲಿರುವ ತೇಜಸ್ವಿ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.5ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯಕಿಯಾಗಿ ಖ್ಯಾತರಾಗಿದ್ದಾರೆ. ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. 5ರಂದು ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ

ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ Read More »

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ

ಬೆಂಗಳೂರು : ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಾಳೆ. ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ ತುಂಬಾ ವಯಸ್ಸಾಗಿದೆ ಹೀಗಾಗಿ ಏನಾದ್ರೂ ಹೇಳುತ್ತೀರಾ ಅವರನ್ನು ಹೇಗೆ ಸಾಯಿಸೋದು ಅಂತ ಎಂದು ವೈದ್ಯರಿಗೆ ಮೆಸೇಜ್ ಮಾಡಿದ್ದಾರೆ. ಜೊತೆಗೆ ಒಂದೆರಡು ಮಾತ್ರೆ ತಗೊಂಡ್ರೆ ಸಾಯುತ್ತಾರೆ ಅಲ್ವಾ ಅದು ಹೇಳಿ ಎಂದು ಕೇಳಿಕೊಂಡಿದ್ದಾಳೆ. ಇದಕ್ಕೆ ವೈದ್ಯರು

ಅತ್ತೆಯನ್ನು ಸಾಯಿಸಲು ಡಾಕ್ಟರ್ ಬಳಿ ಮಾತ್ರೆ ಕೇಳಿದ ಸೊಸೆ Read More »

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

26 ಕಿ.ಮೀ. ಯೋಜನೆಯಲ್ಲಿ 3.8 ಕಿ.ಮೀ. ಸುರಂಗ ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಹಾಸನ ಜಿಲ್ಲೆಯ ಮಲೆನಾಡು ಭಾಗದ ಶಾಸಕರು ಮತ್ತು ಋಾಜ್ಯ

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ Read More »

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ

ಮಹಾರಾಷ್ಟ್ರದಲ್ಲಿ ಹುಲಿ, ಚಿರತೆ, ಕಾಗೆಗಳಿಗೂ ಹಕ್ಕಿಜ್ವರ ಬೆಂಗಳೂರು: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ Read More »

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು 119 ಕೆಜಿ ಗಾಂಜಾ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡಿನ ಮೊಹಿಯುದ್ದೀನ್ ಶಬ್ಬೀರ್ (38), ಮಹಾರಾಷ್ಟ್ರದ ಥಾಣೆಯ ಮಹೇಶ್ ದ್ವಾರಕಾನಾಥ್ ಪಾಂಡೆ (30), ಕೇರಳದ ಅಜಯ್ ಕೃಷ್ಣನ್ (30) ಮತ್ತು ಹರಿಯಾಣದ ಜೀವನ್ ಸಿಂಗ್ (35) ಸೆರೆಯಾಗಿರುವ ಆರೋಪಿಗಳು. ಆರೋಪಿಗಳಿಂದ ಆಲ್ಟೋ ಕಾರು ಹಾಗೂ ಟೆಂಪೋ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು

119 ಕೆಜಿ ಗಾಂಜಾ, ಕಾರು, ಟೆಂಪೋ ವಶ: ನಾಲ್ವರ ಬಂಧನ Read More »

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು : ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಮ್ಮನಹಳ್ಳಿಯಲ್ಲಿ ಸೋಮವಾರ ರಾತ್ರಿ ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಹೋದರ ಜೋಬಿ ಆ್ಯಂಟೋನಿ (45) ಹಾಗೂ ಜೋಬಿ ಅವರ ಪತ್ನಿ ಶರ್ಮಿಳಾ (40) ಶವ ವಿಜಯನಗರದ ಸಾರ್ವಜನಿಕ ಕ್ರೀಡಾಂಗಣದ ನೀರಿನ ಟ್ಯಾಂಕ್‌ನ ಏಣಿಯಲ್ಲಿ ಮಂಗಳವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೆಸ್ಸಿ ಆ್ಯಂಟೋನಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಾಡಿದ ವಿಡಿಯೋದಲ್ಲಿ ‘ಜೋಬಿಯಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ನನ್ನ ತಂಗಿ

ಆನ್‌ಲೈನ್‌ ಬೆಟ್ಟಿಂಗ್‌ ಚಟ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ

ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ. ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ

ಸ್ಕ್ಯಾಮ್‌ ಗ್ರೇಸ್‌ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್‌ ಲೇವಡಿ Read More »

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ!

ಜಲಕ್ಷಾಮ ಎದುರಿಸಲು ನೀರಿನ ಮಿತ ಬಳಕಗೆ ಸೂಚನೆ ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನಲ್ಲಿ ಕಾರು ತೊಳೆದರೆ ಬರೋಬ್ಬರಿ 5 ಸಾವಿರ ರೂ. ದಂಡ ಬೀಳಲಿದೆ. ಈ ಬಾರಿ ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಸೇರಿದಂತೆ ಹಲವು ಮಹತ್ವದ ಸೂಚನೆಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶನ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ! Read More »

error: Content is protected !!
Scroll to Top