ರಾಜ್ಯ

ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ

ಚಕ್ರವರ್ತಿ ಸೂಲಿಬೆಲೆಗೆ ಎಸ್‌ಡಿಪಿಐಯಿಂದ ಎಚ್ಚರಿಕೆ ಮಂಗಳೂರು: ಹಿಂದೂ ಹುಡುಗರಿಗೆ ಮದುವೆಯಾಗಲು ಹುಡುಗಿ ಸಿಗದಿದ್ದರೆ ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂದಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ ನಾಯಕರು ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಚಕ್ರವರ್ತಿ ಸೂಲಿಬೆಲೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಹೇಳಿಕೆಗೆ ಸದಾ ಬದ್ಧನಾಗಿರುತ್ತೇನೆ ಎಂದಿದ್ದಾರೆ. ವಿಶ್ವ ಹಿಂದೂ ಪರಿಷತ್ ಭಾನುವಾರ ಮಂಗಳೂರಿನಲ್ಲಿ ನಡೆದಿದ್ದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ […]

ಅನ್ಯಧರ್ಮದ ಹುಡುಗಿಯರನ್ನು ಮದುವೆಯಾಗಿ ಹೇಳಿಕೆಗೆ ಭಾರಿ ವಿರೋಧ Read More »

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ.ವಾಗಿದ್ದು, ಇದು ಬಹಳ ದುಃಖಕರ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಸದನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೇಮಕವಾಗಿರುವ ಸಿಬ್ಬಂದಿಗಳ ಬಗ್ಗೆ ಪ್ರಶ್ನಿಸಿದಾಗ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ನೇಮಕವಾಗುವಂತೆ ಪ್ರೋತ್ಸಾಹಿಸಲು ಅಗತ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಸರಕಾರ ಕ್ರಮ ಕೈಗೊಳ್ಳಬೇಕೆಂದು

ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕವಾದ ಸ್ಥಳೀಯರ ಸಂಖ್ಯೆ ಕೇವಲ 10 ಶೇ. | ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು Read More »

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ

ಜಲಮೂಲ ಮಲಿನಗೊಳಿಸುವುದನ್ನು ತಡೆಯಲು ಸರಕಾರ ಸೂಚನೆ ಬೆಂಗಳೂರು: ಪುಣ್ಯಕ್ಷೇತ್ರಗಳ ಬಳಿಯಿರುವ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳಿಗೆ ತ್ಯಾಜ್ಯ ಎಸೆದು ಅಪವಿತ್ರಗೊಳಿಸುವುದನ್ನು ತಡೆಯಲು ಸರಕಾರ ಮುಂದಾಗಿದ್ದು, ಇಂಥ ಸ್ಥಳಗಳ 500 ಮೀಟರ್ ವ್ಯಾಪ್ತಿಯ ಸುತ್ತಮುತ್ತ ಸೋಪ್‌, ಶ್ಯಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ Read More »

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ

ಶತಮಾನಗಳಿಂದ ನಡೆಯುತ್ತಿರುವ ದೈವಾರಾಧನೆಗೆ ಅಡ್ಡಿಯಾಗದಂತೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ನಿಂದ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ತೊಡಕುಂಟಾಗಿರುವ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯಕ್ಕೆ ಅಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ. ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ. ಲಿಖಿತವಾಗಿ ಅನುಮತಿ ಪಡೆಯದಿದ್ದರೆ ಅವಕಾಶ ಇಲ್ಲ ಎಂದಿದ್ದರಿಂದ ಗೊಂದಲಕ್ಕೆ ಕಾರಣವಾಗಿದೆ. ಶಾಶ್ವತ ಪರಿಹಾರ ಸಿಗುವವರೆಗೂ ಯಥಾಸ್ಥಿತಿ ಕಾಪಾಡಲು ಸೂಚಿಸಲಾಗಿದೆ ಎಂದು

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ

ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢ, ಬ್ಯಾನ್‌ಗೆ ಶಿಫಾರಸ್ಸು ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್‌ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬಳಿಕ ಈಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗಿ ಇಡ್ಲಿಯನ್ನು ಸೇರಿಕೊಳ್ಳುತ್ತಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಯ ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ Read More »

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌?

ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ​ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್‌ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್‌ ಖಾದರ್‌ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್‌ನನ್ನು ನಿನ್ನೆ ಉಡುಪಿಯ ಡಿಮಾರ್ಟ್‌ ಮಾಲ್‌ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌? Read More »

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು

ಕನಕಗಿರಿ :  ಮಗುವಿಗೆ ಅನಾರೋಗ್ಯವಾಗಿದ್ದರಿಂದ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದರೆ ಗುಣಮುಖವಾಗಬಹುದೆಂದು ತಿಳಿದು ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದ್ದು, ಬಳಿಕ ಗುಣ ಪಡಿಸಲು ಮನೆಮದ್ದು ಮಾಡಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗು ಮೃತಪಟ್ಟ ವೇಳೆ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ‘ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ’ ಎಂದು ತಿಳಿಸಿದ್ದಾರೆ. ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು Read More »

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಹೊಸ ಯೋಜನೆಗಳೇ ಇಲ್ಲ. ನಕ್ಸಲ್ ಪ್ರಭಾವಿತ ಗ್ರಾಮಗಳಿಗೆ ಸಹಾಯ ಪ್ಯಾಕೇಜ್ ನೀಡುವ ಬದಲು ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ಈ ಬಜೆಟ್ ಕನ್ನಡಿಗರ ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಇದು

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ Read More »

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ

ಗುತ್ತಿಗೆಯಲ್ಲಿ ಮೀಸಲಾತಿ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಬೆಂಗಳೂರು : ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ತನ್ನ ಮತಬ್ಯಾಂಕನ್ನು ಭದ್ರಗೊಳಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣ, ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗದ ಪ್ರಾರಂಭ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಸೇರಿದಂತೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ Read More »

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ

ಮದ್ಯದ ಬೆಲೆ ಮತ್ತೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು: ಅಬಕಾರಿ ಇಲಾಖೆಗೆ 40,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿಯನ್ನು ಸಿದ್ದರಾಮಯ್ಯ ಈ ಸಾಲಿನ ಬಜೆಟ್‌ನಲ್ಲಿ ನೀಡಿದ್ದಾರೆ. ಇಷ್ಟು ಮೊತ್ತ ಸಂಗ್ರಹವಾಗಬೇಕಾದರೆ ಅಬಕಾರಿ ಇಲಾಖೆ ಮದ್ಯ ಮಾರಾಟವನ್ನು ಹೆಚ್ಚು ಮಾಡಬೇಕು ಮತ್ತು ಜೊತೆಗೆ ಮದ್ಯದ ಬೆಲೆಯನ್ನು ಹೆಚ್ಚಿಸಬೇಕು. ಹೀಗಾಗಿ ರಾಜ್ಯದಲ್ಲಿ ಮದ್ಯ ಮತ್ತೆ ದುಬಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವ ನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ Read More »

error: Content is protected !!
Scroll to Top