ರಾಜ್ಯ

ಶಿರೂರು ಭೂಕುಸಿತ ದುರಂತ : ಐದು ತಿಂಗಳು ಕಳೆದರೂ ಸಿಕ್ಕಿಲ್ಲ ಎರಡು ಶವ

ಪರಿಹಾರ ಕಾರ್ಯಾಚರಣೆಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಭೀಕರ ಭೂಕುಸಿತ ಸಂಭವಿಸಿ ಐದು ತಿಂಗಳೇ ಕಳೆದು ಹೋದರೂ ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ಕಳೆದ ಜುಲೈ 16ರಂದು ಭೀಕರ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಇಡೀ ಒಂದು ಬೆಟ್ಟವೇ ಜಾರಿ ಹೆದ್ದಾರಿಗೆ ಬಿದ್ದು, ರಸ್ತೆ ಬದಿಯಲ್ಲಿದ್ದ ಒಂದು ಚಿಕ್ಕ ಚಹಾದಂಗಡಿ, ಅದರ ಪಕ್ಕ ನಿಂತಿದ್ದ ಲಾರಿ ಸಮೇತ ಪಂಚಗಂಗಾವಳಿ ನದಿಗೆ ದೂಡಿ ಹಾಕಿತ್ತು. ಈ ದುರಂತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಕೇರಳದ ಲಾರಿಯೊಂದು […]

ಶಿರೂರು ಭೂಕುಸಿತ ದುರಂತ : ಐದು ತಿಂಗಳು ಕಳೆದರೂ ಸಿಕ್ಕಿಲ್ಲ ಎರಡು ಶವ Read More »

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ

ಸಿದ್ದರಾಮಯ್ಯ, ಪ್ರಹ್ಲಾದ್‌ ಜೋಶಿ ಸಹಿತ ಗಣ್ಯರಿಂದ ಅಂತಿಮ ನಮನ ಬೆಂಗಳೂರು : ನಿನ್ನೆ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗ ಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ,

ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ Read More »

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು

ಮಧ್ಯಪ್ರದೇಶ: ಉದ್ಯೋಗ ಕೊಡಿಸುವುದಾಗಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯನ್ನು ವಿಶ್ರಾಂತಿ ಕೊಠಡಿಗೆ ಕರೆಸಿಕೊಂಡು ಕಿರುಕುಳ ನೀಡಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿನಡೆದಿದೆ. ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಎಂದು ಆತನ ನಿಜಾಂಶ ತಿಳಿದು ಚಪ್ಪಲಿಯಿಂದ ಹಿಗ್ಗಾಮುಗ್ಗವಾಗಿ ಭಾರಿಸಿದ್ದಾಳೆ. ಈ ಘಟನೆಯ ವೀಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ಬಾರಿ ವೈರಲ್‍ ಆಗಿದ್ದು, ಈಕೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂದು

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು Read More »

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ

ಸರಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಗೌರವ ಸಲ್ಲಿಕೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​.ಎಂ ಕೃಷ್ಣ ನಿಧನಕ್ಕೆ ಸರ್ಕಾರ ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು

ಎಸ್‌.ಎಂ ಕೃಷ್ಣ ನಿಧನಕ್ಕೆ ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬುಧವಾರ ರಜೆ Read More »

ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್‌ನಲ್ಲಿ ಶೋಕ ಸಂದೇಶ ಫೋಸ್ಟ್‌ ಮಾಡಿದ ಸಿದ್ದರಾಮಯ್ಯ, ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅಜಾತಶತ್ರುವಾದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌

ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ Read More »

ಮೂಡುಬಿದಿರೆ : ಇಂದಿನಿಂದ ಆಳ್ವಾಸ್‌ ವಿರಾಸತ್‌ ವೈಭವ

30ನೇ ವರ್ಷದವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು, ಮೇಳಗಳ ಬೆರಗು ಮೂಡುಬಿದಿರೆ: ಮೋಹನ್‌ ಆಳ್ವ ನೇತೃತ್ವದ ವಿರಾಸತ್‌ ಸಾಂಸ್ಕೃತಿಕ ವೈಭವಕ್ಕೆ 30ನೇ ವರ್ಷದ ಸಂಭ್ರಮ. ಈ ವರ್ಷದ ವಿರಾಸತ್‌ ಇಂದಿನಿಂದ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಅನಾವರಣಗೊಳ್ಳಲಿದೆ. ಈ ರಾಷ್ಟ್ರೀಯ ಸಾಂಸ್ಕೃತಿಕ ಹಬ್ಬಕ್ಕಾಗಿ ವಿದ್ಯಾಗಿರಿ ಸರ್ವಾಲಂಕಾರಗೊಂಡು ಸಜ್ಜಾಗಿದೆ. ಇಂದಿನಿಂದ ಭಾನುವಾರದವರೆಗೆ ಆರು ದಿನಗಳ ಮಹಾಮೇಳಗಳ ಜೊತೆ ಸಾಂಸ್ಕೃತಿಕ ರಸದೌತಣ ವಿದ್ಯಾಗಿರಿಯಲ್ಲಿ ಸಿಗಲಿದೆ.ಈ ಬಾರಿ ಡಿ.10ರಿಂದ 14ರವರೆಗೆ ಮೇಳಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಲಿದ್ದರೆ, ಡಿ.15ರ ಭಾನುವಾರದ ಪೂರ್ಣ ದಿನವನ್ನು ಜನ ಮೇಳಗಳಲ್ಲಿ

ಮೂಡುಬಿದಿರೆ : ಇಂದಿನಿಂದ ಆಳ್ವಾಸ್‌ ವಿರಾಸತ್‌ ವೈಭವ Read More »

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ

ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ Read More »

ಡಿವೈಡರ್‌ಗೆ  ಕಾರು ಡಿಕ್ಕಿ | ಐವರು ಸೇರಿ 7 ಮಂದಿ ವಿದ್ಯಾರ್ಥಿಗಳ ದಾರುಣ ಸಾವು

ಗುಜರಾತ್‍ : ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿದ  ಘಟನೆ ಗುಜರಾತ್‌ನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಹಿನ್ನಲೆ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ವಿದ್ಯಾರ್ಥಿಗಳ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿದೆ. ಅದೇ ಸಮಯದಲ್ಲಿ ಅಭಿಮುಖವಾಗಿ ವೇಗವಾಗಿ ಬಂದ ಎರಡನೇ ಕಾರಿಗೆ ಡಿಕ್ಕಿ ಹೊಡೆದಿದೆ . ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ

ಡಿವೈಡರ್‌ಗೆ  ಕಾರು ಡಿಕ್ಕಿ | ಐವರು ಸೇರಿ 7 ಮಂದಿ ವಿದ್ಯಾರ್ಥಿಗಳ ದಾರುಣ ಸಾವು Read More »

ಹುಷಾರ್‌! ಇಡೀ ಮೊಬೈಲನ್ನೇ ಹ್ಯಾಕ್‌ ಮಾಡಿ ಹಣ ಎಗರಿಸುತ್ತಾರೆ

ಎಪಿಕೆ ಮಾದರಿಯ ಫೈಲ್ ಕಳುಹಿಸಿ ಮಂಗಳೂರಿನ ವ್ಯಕ್ತಿಗೆ ವಂಚನೆ ಮಂಗಳೂರು : ಪೊಲೀಸರು ಚಾಪೆ ಕೆಳಗೆ ತೂರಿದರೆ ಸೈಬರ್‌ ವಂಚಕರು ರಂಗೋಲಿ ಕೆಳಗೆ ತೂರುವ ಕಲೆಯನ್ನು ಕರಗತಮಾಡಿಕೊಳ್ಳುತ್ತಿದ್ದಾರೆ. ಇಷ್ಟರ ತನಕ ಮೊಬೈಲ್‌ನಲ್ಲಿರುವ ಕೆಲವು appಗಳನ್ನು ಹ್ಯಾಕ್‌ ಮಾಡಿ ಬ್ಯಾಂಕ್‌ ಖಾತೆಗಳಲ್ಲಿರುವ ಹಣ ಲಪಟಾಯಿಸುತ್ತಿದ್ದ ವಂಚಕರು ಈಗ ಇಡೀ ಮೊಬೈಲನ್ನೇ ಹ್ಯಾಕ್‌ ಮಾಡುವ ಹೊಸ ತಂತ್ರವನ್ನು ಕಂಡುಕೊಂಡಿದ್ದಾರೆ. ಮಂಗಳೂರಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಇಂಥ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ವಾಟ್ಸಪ್‌ಗೆ ನಕಲಿ ಎಪಿಕೆ ಮಾದರಿಯ

ಹುಷಾರ್‌! ಇಡೀ ಮೊಬೈಲನ್ನೇ ಹ್ಯಾಕ್‌ ಮಾಡಿ ಹಣ ಎಗರಿಸುತ್ತಾರೆ Read More »

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ

ಮೊದಲ ದಿನವೇ ಕೋಲಾಹಲದ ನಿರೀಕ್ಷೆ ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ. ಮುಡಾ, ವಾಲ್ಮೀಕಿ ನಿಗಮ, ವಕ್ಫ್‌ನಿಂದ ರೈತರ ಭೂ ಕಬಳಿಕೆ ವಿವಾದ, ಬಾಣಂತಿಯರ ಸಾವು ಪ್ರಕರಣ ಹೀಗೆ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ವಿರೋಧ ಪಕ್ಷದವರು ಸಜ್ಜಾಗಿದ್ದಾರೆ. ಬಿಜೆಪಿ ಅಸ್ತ್ರಗಳಿಗೆ ಕಾಂಗ್ರೆಸ್ ಕೊರೊನ ಅಸ್ತ್ರ ಜೊತೆಗೆ ಯತ್ನಾಳ್ ಬಣ ಬಡಿದಾಟವನ್ನು ತಿರುಗುಬಾಣವಾಗಿ ಬಿಡಲು ಸಜ್ಜಾಗಿದೆ. ಬಿಜೆಪಿ ವಕ್ಫ್

ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ Read More »

error: Content is protected !!
Scroll to Top