ರಾಜ್ಯ

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ

ಭಿನ್ನಮತೀಯ ಚಟುವಟಿಕೆ ನಡೆಸಿದ್ದಕ್ಕೆ ಶೋಕಾಸ್‌ ನೋಟಿಸ್‌ ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರಿದ ಬೆನ್ನಲ್ಲೇ ಹೈಕಮಾಂಡ್ ಜಗಳ ಬಗೆಹರಿಸಲು ಮುಂದಾಗಿದೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು […]

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ Read More »

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌

ಸೋಲು, ಒಳಜಗಳದಿಂದ ಕಳೆಗುಂದಿರುವ ಬಿಜೆಪಿ ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಬಾಕಿಯಿರುವ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆ ಮುಂದಿನ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಡಿ.5ರಂದು ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದ ಕುರಿತು ಮಾಹಿತಿ ನೀಡುವ ವೇಳೆ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ

ಡಿ.31ರೊಳಗೆ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸೂಚನೆ ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಈಗ ಡಿಸೆಂಬರ್ 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಇಷ್ಟರ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ Read More »

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ

ಪಕ್ಷದಿಂದ ಉಚ್ಚಾಟಿಸಲು ವಿಜಯೇಂದ್ರ ಬಣದ ಬಿಗಿಪಟ್ಟು ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡೂ ವಕ್ಫ್‌ ವಿರುದ್ಧ ತನ್ನದೇ ಪ್ರತ್ಯೇಕ ಹೋರಾಟ ನಡೆಸುತ್ತಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಯಡಿಯೂರಪ್ಪ ಬಣದ ಕೂಗು ಜೋರಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.ಸದಾ ಯಡಿಯೂರಪ್ಪ ಪರಿವಾರವನ್ನು ಟೀಕಿಸುತ್ತಾ ಬಿಜೆಪಿಗೆ ತಲೆನೋವಾಗಿದ್ದ ಯತ್ನಾಳ್‌ ವಿರುದ್ಧ ಉಪಚುನಾವಣೆ ಸೋಲಿನ ಬಳಿಕ ಯಡಿಯೂರಪ್ಪ ನಿಷ್ಠರು ಸಿಡಿದೆದ್ದಾರೆ. ಸೋಲಿಗೆ ಯತ್ನಾಳ್‌ ಹೇಳಿಕೆಗಳೇ ಕಾರಣ ಎಂದು ಸೋಲನ್ನು ಅವರ ತಲೆಗೆ ಕಟ್ಟಿದ್ದು ಮಾತ್ರವಲ್ಲದೆ

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

ಬೆಳಗಾವಿಯಲ್ಲಿ ಹಾಡುಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ !

ಬೆಳಗಾವಿ: ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಡುಹಗಲೇ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಸೋಹಿಲ್ ಅಹ್ಮದ್ ಕಿತ್ತೂರು (17) ಚಾಕು ಇರಿತದಿಂದ ಹತ್ಯೆಯಾದವ. ಸೋಹಿಲ್ ಗ್ರಾಮದಲ್ಲಿ ಎಗ್‌ ರೈಸ್ ಅಂಗಡಿ ಇಟ್ಟುಕೊಂಡಿದ್ದು, ಆತನನ್ನು ಐದು ಮಂದಿಯ ತಂಡ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ

ಬೆಳಗಾವಿಯಲ್ಲಿ ಹಾಡುಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ ! Read More »

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು?

ನಡುರಾತ್ರಿ ದಟ್ಟ ಕಾಡಿನ ನಡುವೆ ಕಾಣಿಸಿದ ಟಾರ್ಚ್‌ ಬೆಳಕಿನ ಹಿನ್ನೆಲೆಯಲ್ಲಿ ಅನುಮಾನ ಕಾರ್ಕಳ : ನಕ್ಸಲರು ಇನ್ನೂ ಕೊಪ್ಪ, ಶೃಂಗೇರಿ ಭಾಗದಲ್ಲೇ ಇರುವ ಅನುಮಾನವಿದ್ದು, ಈ ಹಿನ್ನೆಲೆಯಲ್ಲಿ ಕೂಂಬಿಂಗ್‌ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಶುಕ್ರವಾರ ನಡುರಾತ್ರಿ ವೇಳೆ ಕುದುರೆಮುಖ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಕೆರೆಕಟ್ಟೆ ಪರಿಸರದಲ್ಲಿ ದಟ್ಟ ಕಾಡಿನ ನಡುವೆ ಟಾರ್ಚ್‌ ಬೆಳಕು ಕಂಡುಬಂದಿದೆ. ಇದು ನಕ್ಸಲರ ಓಡಾಟ ಇರಬಹುದು ಎಂಬ ಅನುಮಾನದಲ್ಲಿ ನಕ್ಸಲ್‌ ನಿಗ್ರಹ ಪಡೆ ಕೂಂಬಿಂಗ್‌ ತೀವ್ರಗೊಳಿಸಿದೆ.ಹೆಬ್ರಿಯ ನಾಡ್ಪಾಲು ಸಮೀಪ ಪೀತಬೈಲಿನಲ್ಲಿ ನಕ್ಸಲ್‌ ಮುಖಂಡ ವಿಕ್ರಂ

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು? Read More »

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ

ಬೆಂಗಳೂರು : ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ  ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು.  ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ಗಳ ಮಾರಾಟದ

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ Read More »

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ

ಈ ವರ್ಷ ದಿವ್ಯಾಂಗರಿಗೆ ಬರೀ 10 ಕೋ. ರೂ. ಅನುದಾನ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ದಿವ್ಯಾಂಗರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಕಳೆದ ವರ್ಷಕ್ಕಿಂತ ವಿಕಲಚೇತರ ಅನುದಾನದಲ್ಲಿ ಶೇ.80ರಷ್ಟು ಹಣ ಕಡಿತ ಮಾಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಇದನ್ನೂ ಓದಿ: ಸಭೆಗಳನ್ನು ರದ್ದು ಮಾಡಿ ದಿಢೀರ್‌ ಸ್ವಗ್ರಾಮಕ್ಕೆ ತೆರಳಿದ ಏಕನಾಥ್‌ ಶಿಂಧೆ ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ ಶೇ.80 ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ ಮತ್ತು

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ Read More »

ಎಲ್ಲಿ ಹೋದರು ಅಳಿದುಳಿದ ನಕ್ಸಲರು?

ಮರಳಿ ಕೇರಳದ ಕಾಡು ಸೇರಿಕೊಂಡಿರುವ ಶಂಕೆ ಕಾರ್ಕಳ : ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿಯಾದ ಬಳಿಕ ಅಳಿದುಳಿದ ನಕ್ಸಲರೆಲ್ಲ ಮರಳಿ ಕೇರಳದತ್ತ ಪಲಾಯನ ಮಾಡಿರುವ ಶಂಕೆಯಿದೆ. ವಿಕ್ರಂ ಗೌಡ ಎನ್‌ಕೌಂಟರ್‌ ಆದ ಬಳಿಕ ಕಾರ್ಕಳ, ಚಿಕ್ಕಮಗಳೂರು ಮತ್ತಿತರೆಡೆ ನಕ್ಸಲ್‌ ನಿಗ್ರಹ ಪಡೆಯವರು ಪೊಲೀಸರೊಂದಿಗೆ ತೀವ್ರ ಹುಡುಕಾಟ ನಡೆಸಿದರೂ ನಕ್ಸಲರ ಜಾಡು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಕಾಡಿನಿಂದ ನಾಡಿಗಿಳಿದು ವಾಹನದ ಮೂಲಕ ಪರಾರಿಯಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಸಂಪಾಜೆ, ಕೊಪ್ಪ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ನಾಕಾಬಂಧಿ ಹಾಕಿ ತಪಾಸಣೆಯನ್ನೂ

ಎಲ್ಲಿ ಹೋದರು ಅಳಿದುಳಿದ ನಕ್ಸಲರು? Read More »

error: Content is protected !!
Scroll to Top