ರಾಜ್ಯ

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ಹೆಬ್ರಿ ಬಳಿ ನಕ್ಸಲ್‌ ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲರು ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್‌ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.ಒಂದೂವರೆ ದಶಕದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್‌ ನಿಗ್ರಹ ಪಡೆಯವರು ಸತತವಾಗಿ ಪ್ರಯತ್ನಿಸುತ್ತಿದ್ದರು. ನಿನ್ನೆ ರಾತ್ರಿ ಹೆಬ್ರಿ ಸಮೀಪ ಸೀತಾಂಬೈಲು ಎಂಬಲ್ಲಿ ಎಎನ್‌ಎಫ್‌ ಪಡೆಗೆ ನಕ್ಸಲರು ಎದುರಾಗಿದ್ದು, […]

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ Read More »

ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ | ಬಾಯಿಕ್ಯಾನ್ಸರ್‌ಗೆ ಮುಖ್ಯ ಕಾರಣ ಅಡಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ

ಮಂಗಳೂರು : ಕರಾವಳಿ ಜನರ ಆರ್ಥಿಕತೆಯ ಜೀವನಾಡಿಯಾಗಿರುವ ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ ನೇತಾಡಲಾರಂಭಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಂಗ ಸಂಸ್ಥೆ ಇಂಟರ್‌ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆ್ಯಂಡ್‌ ಕ್ಯಾನ್ಸರ್‌(ಐಎಆರ್‌ಸಿ) ಅಡಿಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ. ಈ ವರದಿ ಅಡಿಕೆ ಬಳಕೆ ಮೇಲೆ ನಿಯಂತ್ರಣ ಹೇರಲು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬೆಳೆಗಾರರಲ್ಲಿ ಆತಂಕ ಮೂಡಿದೆ. ಇಂಟರ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆ್ಯಂಡ್‌

ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ | ಬಾಯಿಕ್ಯಾನ್ಸರ್‌ಗೆ ಮುಖ್ಯ ಕಾರಣ ಅಡಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ Read More »

ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಬಂದ ಪತ್ರದಲ್ಲಿದೆ ಬೇರೆಯೇ ಮಾಹಿತಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ಆರೋಪಿಯಾಗಿರುವ ಪ್ರಕರಣಕ್ಕೆ ತಿರುವು ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನ.5ರಂದು ಸಂಭವಿಸಿದ ಎಸ್‌ಡಿಎ ರುದ್ರೇಶ್ (ರುದ್ರಣ್ಣ ಯಡವಣ್ಣವರ) ಆತ್ಮಹತ್ಯೆ ಕೊಲೆ ಪ್ರಕರಣ ಎಂಬುದಾಗಿ ರಾಜ್ಯಪಾಲರಿಗೆ ಅನಾಮಧೇಯ ಪ್ರತವೊಂದು ಬರುವುದರೊಂದಿಗೆ ಈ ಪ್ರಕರಣ ತಿರುವು ಪಡೆದುಕೊಂಡಿದೆ. ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರವೊಂದು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ, ಪ್ರಕರಣದ ತನಿಖಾಧಿಕಾರಿ ಸೇರಿ ಹಲವರಿಗೆ ಬಂದಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ

ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಬಂದ ಪತ್ರದಲ್ಲಿದೆ ಬೇರೆಯೇ ಮಾಹಿತಿ Read More »

ಅಬಕಾರಿ ಇಲಾಖೆ ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚಿಸಿ : ಅಶೋಕ್‌ ಆಗ್ರಹ | ಮದ್ಯ ಮಾರಾಟಗಾರರ ಆರೋಪ ಸುಳ್ಳಾದರೆ ಲೈಸೆನ್ಸ್‌ ರದ್ದುಮಾಡಿ ಎಂದು ಸವಾಲು

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿರುವ 700 ಕೋಟಿ ರೂ. ಭ್ರಷ್ಟಾಚಾರ ಆರೋಪ ಕುರಿತು ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊರಿಸಿದ್ದ ಶೇ.40ರಷ್ಟು ಕಮಿಷನ್ ಆರೋಪವನ್ನು ಲೋಕಾಯುಕ್ತ ಸಂಸ್ಥೆ ಸುಳ್ಳೆಂದು ಸಾಬೀತು ಮಾಡಿದೆ. ರಾಜ್ಯದ ಜನರಿಗೆ ಶೇ.40 ಪರ್ಸೆಂಟ್‌ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 100 ಪರ್ಸೆಂಟ್‌ ಭ್ರಷ್ಟರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.18 ತಿಂಗಳ ಕಾಂಗ್ರೆಸ್ ಸರ್ಕಾರದ

ಅಬಕಾರಿ ಇಲಾಖೆ ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚಿಸಿ : ಅಶೋಕ್‌ ಆಗ್ರಹ | ಮದ್ಯ ಮಾರಾಟಗಾರರ ಆರೋಪ ಸುಳ್ಳಾದರೆ ಲೈಸೆನ್ಸ್‌ ರದ್ದುಮಾಡಿ ಎಂದು ಸವಾಲು Read More »

ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ತಪ್ಪು ಎಂದ ಸಿದ್ದರಾಮಯ್ಯ

ಅನರ್ಹ ಕಾರ್ಡ್‌ಗಳು ಮಾತ್ರ ರದ್ದು ಎಂದು ಸ್ಪಷ್ಟನೆ ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ.ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿರುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ತಪ್ಪು ಎಂದ ಸಿದ್ದರಾಮಯ್ಯ Read More »

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ

ಹೋರಾಟಗಾರರ ವಿರುದ್ಧ ಛೇಲಾಗಳನ್ನು ಛೂ ಬಿಡುತ್ತಿರುವ ಸಿದ್ದರಾಮಯ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ದೂರುಗಳನ್ನು ದಾಖಲಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಜಯೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ.ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ Read More »

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ

ವರದಿ ತಿರಸ್ಕರಿಸಲು ಸರಕಾರ ನಿರ್ಧಾರ ಉಡುಪಿ : ಕಸ್ತೂರಿ ರಂಗನ್‌ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಹೀಗಾಗಿ ಕಾಡಿನಂಚಿನ ಜನರು ಕಸ್ತೂರಿ ರಂಗನ್‌ ವರದಿ ಬಗ್ಗೆ ವಿನಾ ಕಾರಣ ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಡಾ.ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ Read More »

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ

ಸದ್ದಿಲ್ಲದೆ 11 ಲಕ್ಷ ಕಾರ್ಡ್‌ ರದ್ದು ಎಂದು ಸುನಿಲ್‌ ಆರೋಪ ಬೆಂಗಳೂರು: ಮಹಿಳೆಯರ ಖಾತೆಗೆ ನೇರವಾಗಿ ತಿಂಗಳಿಗೆ 2 ಸಾವಿರ ರೂ. ಹಣ ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯಿಂದ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್​ಗಳನ್ನೇ ಕಡಿಮೆ ಮಾಡಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 11 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ Read More »

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ ಎಂದು ವರದಿ ಸಲ್ಲಿಸಿದ ಲೋಕಾಯುಕ್ತ ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಮಾಡಿದ್ದ 40 ಪರೆಂಟ್‌ ಕಮಿಷನ್‌ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ

ಖುದ್ದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ತನಿಖಾಧಿಕಾರಿಯಿಂದ ನೋಟಿಸ್‌ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿ.3ರಂದು ವಿಚಾರಣೆಗೆ ಖುದ್ದು ಹಾಜರಾಗಲು ಸಚಿವ ಜಮೀರ್‌ ಅಹ್ಮದ್‌ ಖಾನ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಜಮೀರ್‌ ಮನೆಗೆ ಹೋಗಿ ಲೋಕಾಯುಕ್ತ ಇನ್‌ಸ್ಪೆಕ್ಟ‌ರ್ ಸಚಿವರಿಗೆ ನೋಟಿಸ್‌ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಎಸಿಬಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ Read More »

error: Content is protected !!
Scroll to Top