ರಾಜ್ಯ

ನಾಳೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಹೋರಾಟ : ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ನೌಕರರು ಬೆಂಗಳೂರು: ಸಾರಿಗೆ ನೌಕರರು ತಮ್ಮ ದೀರ್ಘಾಕಾಲದ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಜ.29ರಿಂದ ನಿರ್ಣಾಯಕ ಹೋರಾಟಕ್ಕೆ ಮುಂದಾಗಿದ್ದಾರೆ. ಎಲ್ಲ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಹೀಗಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಸಂಘಟನೆಗಳು ನಾಳೆ ತನಕ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ದರೆ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ನೀಡಿವೆ. ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ […]

ನಾಳೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಹೋರಾಟ : ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ Read More »

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಆರೋಪಿಗೆ ಅಡಗಿಕೊಳ್ಳಲು ಮಂಗಳೂರಿನಲ್ಲಿ ಆಶ್ರಯ ನೀಡಿದ ಉದ್ಯಮಿ ಮಂಗಳೂರು : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಮಂಗಳೂರಿನ ಉದ್ಯಮಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಮಂಗಳವಾರ ರಾಜೀವ್‌ ಗೌಡನ ಜೊತೆಗೆ ಉದ್ಯಮಿಯನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ರಾಜೀವ್‌ ಗೌಡನಿಗೆ 14 ದಿನಗಳ ಕಸ್ಟಡಿ ವಿಧಿಸಿದೆ. ಉದ್ಯಮಿ ಮೈಕಲ್ ಜೋಸೇಫ್ ರೆಗೋಗೆ ಜಾಮೀನು ನೀಡಿದೆ. ಮೈಕಲ್ ಜೋಸೇಫ್ ರೆಗೋಗೆ ಸೇರಿದ್ದ ಪಚ್ಚನಾಡಿಯ

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ Read More »

ಪತ್ನಿ ಮತ್ತೊಬ್ಬನ ಜೊತೆ ಪರಾರಿ: ಪತಿ ನೇಣಿಗೆ ‌ಶರಣು

ದಾವಣಗೆರೆ: ವಿವಾಹವಾದ ಎರಡೇ ತಿಂಗಳಿಗೆ ಪತ್ನಿ ಮತ್ತೊಬ್ಬನ ಜೊತೆ ಪರಾರಿಯಾಗಿದ್ದು, ಘಟನೆಯಿಂದ ಮನನೊಂದ ಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್ (32) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹರೀಶ್ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಪತ್ನಿ ಮತ್ತೊಬ್ಬನ ಜೊತೆಗೆ ಓಡಿ ಹೋಗಿರುವುದನ್ನು ಉಲ್ಲೇಖ ಮಾಡಿದ್ದಾರೆ. ಹಾಗೆಯೇ ತನ್ನ ಸಾವಿಗೆ ಪತ್ನಿ, ಅತ್ತೆ, ಮಾವ ಮತ್ತು ಅವಳನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಹೇಳಿದ್ದಾರೆ. ಹರೀಶ್ ಮೇಲೆ ಪತ್ನಿ

ಪತ್ನಿ ಮತ್ತೊಬ್ಬನ ಜೊತೆ ಪರಾರಿ: ಪತಿ ನೇಣಿಗೆ ‌ಶರಣು Read More »

ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ: ಡಿ. ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯತ್‌ಗಳಿಗೆ ಗಾಂಧೀಜಿ ಅವರ ಹೆಸರನ್ನು ಮರು ನಾಮಕರಣ ಮಾಡುವ ಮೂಲಕ ಅವರ ತತ್ವಗಳನ್ನು ಶಾಶ್ವತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿ ಸಿ ಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಅವರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಮನ್‌ರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲು ಪ್ರಯತ್ನ ನಡೆಸುತ್ತಿದೆ. ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಇದರ

ಬಡವರ ಉದ್ಯೋಗ ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ: ಡಿ. ಕೆ. ಶಿವಕುಮಾರ್ Read More »

ಆಸ್ತಿಗಾಗಿ ಹೆತ್ತ ತಾಯಿಗೆ ಚಟ್ಟ ‌ಕಟ್ಟಿದ ನೀಚ ಪುತ್ರ

ಲಿಂಗಸೂಗೂರು: ಮೂರು ಎಕರೆ ಜಮೀನಿಗಾಗಿ ಮಗನೇ ಹೆತ್ತಮ್ಮನನ್ನು ಕಲ್ಲು ಎತ್ತಿ ಹಾಕಿ ಕೊಂದ ಘಟನೆ ಜಕ್ಕೇರುಮಡು ಗ್ರಾಮದಲ್ಲಿ ನಡೆದಿದೆ. ಕುಮಾರ ಎಂಬಾತನೇ ಆರೋಪಿ. ಚಂದವ್ವ (55) ಎಂಬವರೇ ‌ಮೃತ ದುರ್ದೈವಿ. ಕುಮಾರ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿ ಬಂದಿದ್ದ. ಈತನಿಗೆ ತನ್ನ ತಾಯಿಯ ಹೆಸರಿನಲ್ಲಿದ್ದ ಆಸ್ತಿಯ ಮೇಲೆ ಕಣ್ಣಿತ್ತು. ಆ ಜಮೀನನ್ನು ತನಗೆ ಮತ್ತು ಅಣ್ಣನಿಗೆ ಭಾಗ ಮಾಡಿ ಕೊಡುವಂತೆ ಆಗಾಗ್ಗೆ ಜಗಳ ಮಾಡುತ್ತಿದ್ದ. ಆದರೆ ಇದಕ್ಕೆ ತಾಯಿ ಒಪ್ಪುತ್ತಿರಲಿಲ್ಲ. ತಾಯಿಯನ್ನು ಕೊಲ್ಲುವ ದಿನ

ಆಸ್ತಿಗಾಗಿ ಹೆತ್ತ ತಾಯಿಗೆ ಚಟ್ಟ ‌ಕಟ್ಟಿದ ನೀಚ ಪುತ್ರ Read More »

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌

ಎರಡು ತಂಡವಾಗಿ ಹಣ ಎಗರಿಸಿಕೊಂಡು ಪಲಾಯನ ಮಾಡಿದ ಸಿಬ್ಬಂದಿ ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ನಡೆಸಿದ್ದ ಎಟಿಎಂ ದರೋಡೆ ಪ್ರಕರಣಮಾದರಿಯಲ್ಲೇ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿ ಎಟಿಎಂಗೆ ತುಂಬಲು ಕೊಟ್ಟಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು ಎಸ್ಕೇಪ್ ಆಗಿದ್ದಾರೆ.

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌ Read More »

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು?

ಪೊಲೀಸರ ಕಣ್ತಪ್ಪಿಸಿ ಮೂರು ದಿನಗಳಿಂದ ಮಂಗಳೂರಿನಲ್ಲಿ ಅಡಗಿಕೊಂಡಿದ್ದ ಕಾಂಗ್ರೆಸ್‌ ನಾಯಕ ಮಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಸಂಬಂಧಿಸಿ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್‌ ನಾಯಕ ರಾಜೀವ್ ಗೌಡನನ್ನೂ ಕೊನೆಗೂ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿ ಈಗ

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು? Read More »

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು

ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರಿನಲ್ಲಿ ನಡೆದಿದೆ. ನವಮಿ (30) ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ಗಾಡಿಯನ್ನು ‌ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ನವಮಿ ಅವರು ಆಲ್ದೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಡಿಕ್ಕಿ ಹೊಡೆದ ಗಾಡಿ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು Read More »

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು

ಅಧಿವೇಶನ ವಿವಾದದ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ಅನುಸರಿಸಿದ ರಾಜ್ಯ ಸರ್ಕಾರ ಬೆಂಗಳೂರು : ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ ಯಾವುದೇ ವಿವಾದವಿಲ್ಲದೆ ಪೂರ್ಣಗೊಂಡಿದೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನೇ ಓದಿದರೂ ಅದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ವಾಕ್ಯಗಳು ಇರಲಿಲ್ಲ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

error: Content is protected !!
Scroll to Top