ರಾಜ್ಯ

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ

ಜ್ವರ, ಶೀತ ಇದ್ದರೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಬೆಂಗಳೂರು: ಚೀನದಲ್ಲಿ ಹ್ಯೂಮನ್ ಮೆಟಾ ನ್ಯೂಮೊ ವೈರಸ್ (ಎಚ್‌ಎಂಪಿವಿ) ಹಾವಳಿ ತೀವ್ರಗೊಂಡು ಆತಂಕ ಸೃಷ್ಟಿಸಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಚೀನದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್‌ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ […]

ಎಚ್‌ಎಂಪಿವಿ ಆತಂಕ : ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರಕಾರ Read More »

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ

ಶಿವಮೊಗ್ಗ: ಕೆಲವು ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.ಗುತ್ತಿಗೆದಾರ ಸಚಿವ್ ಪಾಂಚಾಳ್ ಡೆತ್‌ನೋಟ್‌ನಲ್ಲಿ ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬರೆದಿದ್ದಾರೆ. ಪ್ರಭಾವಿ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಸಚಿನ್ ಅವರು ಪ್ರಕರಣನ್ನು ಕೇಂದ್ರೀಯ ತನಿಖಾ

ಸ್ವಾಮೀಜಿಗಳ ಹತ್ಯೆಗೆ ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ : ವಿಜಯೇಂದ್ರ ಆರೋಪ Read More »

ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದುಬಾರಿ

ವೇಗದೂತದಲ್ಲಿ ಮಂಗಳೂರು-ಬೆಂಗಳೂರು ನಡುವೆ 56 ರೂ. ಹೆಚ್ಚಳ ಬೆಂಗಳೂರು : ವಿರೋಧ, ಟೀಕೆಗಳನ್ನೆಲ್ಲ ಲೆಕ್ಕಿಸದೆ ಕಾಂಗ್ರೆಸ್‌ ಸರಕಾರ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಿದ್ದು, ಶನಿವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ. ಪರಿಣಾಮವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪುರುಷರು ಇಂದಿನಿಂದ ಹೆಚ್ಚುವರಿ ಹಣ ಖರ್ಚು ಮಾಡುವುದು ಅನಿವಾರ್ಯ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಹೆಚ್ಚಳವಾಗಿದೆ. ಬಿಎಂಟಿಸಿಯ ಸಾಮಾನ್ಯ ಬಸ್ ದರ 1 ರೂ.ನಿಂದ 6

ಇಂದಿನಿಂದ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದುಬಾರಿ Read More »

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ

2 ಅಂತಸ್ತಿನ ಶ್ರೀ ಸಾನ್ನಿಧ್ಯ ಭವನ ನಿರ್ಮಾಣ, ಜ.7ರಂದು ಲೋಕಾರ್ಪಣೆ ಧರ್ಮಸ್ಥಳ : ದೇಶ-ವಿದೇಶಗಳಿಂದ ಭಕ್ತರು ಆಗಮಿಸುವ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ತೆರಳಲು ತಿರುಪತಿ ಮಾದರಿಯಲ್ಲಿ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ತಯಾರಾಗಿದೆ. ಕರ್ನಾಟಕದಲ್ಲಿ ಈ ಮಾದರಿಯ ಕ್ಯೂ ವ್ಯವಸ್ಥೆ ಜಾರಿಗೆ ತರುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ

ಧರ್ಮಸ್ಥಳದಲ್ಲಿನ್ನು ತಿರುಪತಿ ಮಾದರಿ ಕ್ಯೂ ವ್ಯವಸ್ಥೆ Read More »

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

ಕಂಬಳಕ್ಕೂ ಬಂತು ಕ್ರಿಕೆಟ್‌, ಫುಟ್‌ಬಾಲ್‌ನ ಕಠಿಣ ನಿಯಮ ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ Read More »

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ

ಲೀಟರಿಗೆ 8-10 ರೂ. ಹೆಚ್ಚಿಸಲು ಪ್ರಸ್ತಾವ ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ Read More »

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ

ಒಂದು ವರ್ಷದಿಂದ ಬಿಲ್‌ಗಾಗಿ ಅಲೆದಾಡುತ್ತಿರುವ ಗುತ್ತಿಗೆದಾರ ಬೆಂಗಳೂರು: ಬಿಲ್‌ ಪಾಸ್‌ ಆಗದೆ ಕಂಗಾಲಾಗಿರುವ ಸರಕಾರಿ ಗುತ್ತಿಗೆದಾರರೊಬ್ಬರು ಒಂದೋ ಬಿಲ್‌ ಪಾಸ್‌ ಮಾಡಿಸಿ ಇಲ್ಲವೇ ದಯಾಮರಣವನ್ನಾದರೂ ಕರುಣಿಸಿ ಎಂದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮನವರಿಗೆ ಪತ್ರ ಬರೆದಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗಿದ್ದು, ಕಾಮಗಾರಿ ಮಾಡಲು ಸರಕಾರದ ಬಳಿ ಹಣ ಇಲ್ಲ ಎಂಬ ಕೂಗು ಕೇಳಿಸುತ್ತಿರುವಾಗಲೇ ನಡೆದಿರುವ ಈ ಬೆಳವಣಿಗೆ ವಿಪಕ್ಷದ ಕೈಗೆ ಇನ್ನೊಂದು ಅಸ್ತ್ರವಾಗಿ ಸಿಕ್ಕಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಕ್ಲಾಸ್‌ ಒನ್‌ ಗುತ್ತಿಗೆದಾರ ಮೊಹಮ್ಮದ್‌ ಮಝರ್‌ ಎಂಬವರು ಈ

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ Read More »

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ

ಹೊಸವರ್ಷದ ಗ್ರೀಟಿಂಗ್‌ ಜೊತೆಗೆ ವಿಷಪೂರಿತ ಸಿಹಿತಿಂಡಿ ರವಾನಿಸಿದ ದುಷ್ಕರ್ಮಿಗಳು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಹಿತಿಂಡಿಗಳ ಬಾಕ್ಸ್‌ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ. ಜನವರಿ 1ರಂದು ಅಜ್ಞಾತ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, ಡಿಟಿಡಿಸಿ ಕೊರಿಯರ್ ಮೂಲಕ

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ Read More »

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ ತುಮಕೂರು : ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜೊತೆ ಡಿವೈಎಸ್‌ಪಿ ದರ್ಜೆಯ ಪೊಲೀಸ್‌ ಅಧಿಕಾರಿಯೇ ಅಸಭ್ಯವಾಗಿ ವರ್ತಿಸಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ವೀಡಿಯೊ ವೈರಲ್‌ ಆದ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ Read More »

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌

ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ದಾಖಲೆಯಾಗಿ ಸ್ಮಾರ್ಟ್‌ಕಾರ್ಡ್‌ ಬಳಕೆ ಬೆಂಗಳೂರು: ಶಕ್ತಿ ಯೋಜನೆಯಡಿ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಪ್ರತಿಸಲ ಆಧಾರ್‌ ಕಾರ್ಡ್‌ ಒಯ್ದು ನಿರ್ವಾಹಕರಿಗೆ ತೋರಿಸುವ ಕಷ್ಟವನ್ನು ತಪ್ಪಿಸುವ ಸಲುವಾಗಿ ಸರಕಾರ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಿದೆ. ಶಕ್ತಿ ಯೋಜನೆಯನ್ನು ಸರಳೀಕರಿಸುವ ಪ್ರಕ್ರಿಯೆಯಂಗವಾಗಿ ಶೀಘ್ರದಲ್ಲೇ ಎಲ್ಲ ಫಲಾನುಭವಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಪ್ರತಿ ಸಲ ಸರಕಾರಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯರು ತಮ್ಮ ಆಧಾರ್‌ ಕಾರ್ಡ್‌ ತೋರಿಸಬೇಕಾಗುತ್ತದೆ.

ಮಹಿಳೆಯರಿಗೆ ಸಿಗಲಿದೆ ಶಕ್ತಿ ಸ್ಮಾರ್ಟ್‌ಕಾರ್ಡ್‌ Read More »

error: Content is protected !!
Scroll to Top