ರಾಜ್ಯ

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌

ಡಿಕೆಶಿ ವಿದೇಶದಲ್ಲಿರುವಾಗ ಆಪ್ತರೊಂದಿಗೆ ಗೂಢಾಲೋಚನೆ ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ನಡೆಸಿದ ಡಿನ್ನರ್ ಮೀಟಿಂಗ್‌ನಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಂಪುಟ ಪುನರ್‌ ರಚನೆಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ಪಡಸಾಲೆಯಲ್ಲಿ ಈ ಡಿನ್ನರ್‌ ಮೀಟಿಂಗ್‌ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಆಪ್ತರ […]

ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ Read More »

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ

ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಶೇ.15ರಂತೆ ಹೆಚ್ಚಳ; ಜ.5ರಿಂದ ಜಾರಿ ಬೆಂಗಳೂರು: ನಿರೀಕ್ಷೆಯಂತೆಯೇ ಹೊಸ ವರ್ಷದಲ್ಲಿ ಸರಕಾರ ಜನರಿಗೆ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆಯ ಬರೆ ಎಳೆದಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣದ ಕೊಡುಗೆ ನೀಡಿ ಅದರ ಮೂರುಪಟ್ಟು ದರವನ್ನು ಪುರುಷರಿಂದ ವಸೂಲು ಮಾಡಲು ಮುಂದಾಗಿದೆ. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಬಸ್‌ ಟಿಕೆಟ್‌ ದರ ಶೇ.15 ಏರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಸಂಕ್ರಾಂತಿ ನಂತರ ಟಿಕೆಟ್‌ ದರ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ Read More »

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ

ಧರ್ಮಸ್ಥಳದಲ್ಲಿ ನೇತ್ರಾವತಿ ಸೇರುವ ಉಪನದಿಯನ್ನು ಮಲಿನಗೊಳಿಸಿದ ದುಷ್ಕರ್ಮಿಗಳು ಧರ್ಮಸ್ಥಳ : ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹುನ್ನಾರ ಇದೆ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.ಧರ್ಮಸ್ಥಳದ ಪುಣ್ಯನದಿಯಾಗಿರುವ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ. ಇದರ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ ಇದೆ ಎಂದು

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ Read More »

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ

ಜ.31ರ ತನಕ ಗ್ರಾಮ ಒನ್‌ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ಬೆಂಗಳೂರು : ರೇ‌ಷನ್ ಕಾರ್ಡ್‌ ತಿದ್ದುಪಡಿ ಅಂತಿಮ ಗಡುವನ್ನು ಸರಕಾರ ಒಂದು ತಿಂಗಳು ವಿಸ್ತರಣೆ ಮಾಡಿದೆ. ರೇಷನ್ ಕಾರ್ಡ್‌ ತಿದ್ದುಪಡಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇನ್ನೂ ಅನೇಕ ಕಾರ್ಡ್‌ಗಳ ತಿದ್ದುಪಡಿ ಬಾಕಿ ಇರುವುದರಿಂದ ಜ.31ರ ತನಕ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಮೊದಲು ರೇಷನ್‌ ಕಾರ್ಡ್‌ ತಿದ್ದುಪಡಿಗೆ ಡಿ.31 ಅಂತಿಮ ಗಡುವು ನೀಡಿತ್ತು. ಆದರೆ ತಿದ್ದಪಡಿಯಲ್ಲೇ ಸಾಕಷ್ಟು

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ Read More »

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು

ಶೋರೂಮ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತ ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ 60ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ. ತಕ್ಷಣ

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು Read More »

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ

ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಉಳಿಸಲು ಟಿಕೆಟ್‌ ದರ ಏರಿಕೆ ಅನಿವಾರ್ಯ ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ಕೆಎಸ್‌ಆರ್‌ಟಿಸಿ ಬಸ್‌ಗಳ ಟಿಕೆಟ್‌ ದರ ಹೆಚ್ಚಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಸಾರಿಗೆ ಮುಖಂಡರ ‌ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನಾಲ್ಕು ನಿಗಮಗಳಡಿಯಲ್ಲಿರುವ ಬಸ್​ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಮನವಿ ಮಾಡಲು ಈಗಾಗಲೇ ‌ಅಂಕಿಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ Read More »

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ

ಹೊಸವರ್ಷವನ್ನು ದೇವರ ದರ್ಶನ ಪಡೆದು ಪ್ರಾರಂಭಿಸುವ ಪರಂಪರೆ ಮಂಗಳೂರು : ಹೊಸ ವರ್ಷದ ಆಗಮನ ಸಂದರ್ಭದಲ್ಲಿ ಕರಾವಳಿಯ ಪ್ರಮುಖ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಧರ್ಮಸ್ಥಳ, ಕಟೀಲು, ಸುಬ್ರಹ್ಮಣ್ಯ , ಕದ್ರಿ, ಉಡುಪಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ರಾತ್ರಿ ತನಕ ಭಕ್ತರ ವಿಪರೀತ ಸಂಣಿಯಿತ್ತು. ಜನರು ಹೊಸವರ್ಷವನ್ನು ಪಬ್‌, ಬಾರ್‌, ಹೋಟೆಲ್‌ಗಳಲ್ಲಿ ಮೋಜು ಮುಸ್ತಿ ಮಾಡಿ ಸ್ವಾಗತಿಸುವ ಪರಂಪರೆ ಬಿಟ್ಟು ದೇವಸ್ಥಾನಗಳಿಗೆ ಹೋಗಲಾರಂಭಿಸಿದ್ದಾರೆ. ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ. ಧರ್ಮಸ್ಥಳ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಾರಿ ಭಕ್ತ ಸಂದಣಿ Read More »

ಉಡುಪಿ ಕೃಷ್ಣ ಮಠದಲ್ಲಿ ಅಯ್ಯಪ್ಪ ವ್ರತಧಾರಿಗಳ ಪುಂಡಾಟಿಕೆ : ಎಂಟು ಮಂದಿ ಬಂಧನ

ಮಠದ ಸಿಬ್ಬಂದಿ, ದಿವಾನ, ಕಾನ್‌ಸ್ಟೆಬಲ್‌ ಮೇಲೆ ಹಲ್ಲೆಗೆ ಯತ್ನ ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಂಟು ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧಿಸಲಾಗಿದೆ. ಡಿ.29ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣ ಮಠದ ಒಳಗೆ ಹಾಗೂ ಹೊರಗೆ

ಉಡುಪಿ ಕೃಷ್ಣ ಮಠದಲ್ಲಿ ಅಯ್ಯಪ್ಪ ವ್ರತಧಾರಿಗಳ ಪುಂಡಾಟಿಕೆ : ಎಂಟು ಮಂದಿ ಬಂಧನ Read More »

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ

ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಹೆಣ್ಣು-ಗಂಡು ಇಬ್ಬರೂ ಸಮಾನರು ಎನ್ನುವ ಈ ಕಾಲದಲ್ಲಿ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಗಂಡ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಮಹಿಳೆ ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು, ಕೋಪಗೊಂಡ ಪತಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಆಕೆ ಹೆರುವ ಮೊದಲೆ ಮುಂದೆ ಯು ಹೆಣ್ಣು ಮಗುವಿಗೆ

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ Read More »

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ

ಕರ್ನಾಟಕದ ಸಿಎಂ ಬಳಿ ಎಷ್ಟು ಸಂಪತ್ತು ಇದೆ ಗೊತ್ತೇ? ಹೊಸದಿಲ್ಲಿ: ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿರಿವಂತ ಸಿಎಂಗಳ ಸಾಲಿನಲ್ಲಿ ಮೊದಲ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು 931 ಕೋಟಿ ರೂ. ಹಾಗೂ ಪೆಮಾ

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ Read More »

error: Content is protected !!
Scroll to Top