ರಾಜ್ಯ

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ

ಫೆ.1ರಿಂದಲೇ ಜಾರಿಗೆ ಬರಲಿದೆ ಹೊಸ ಮೇಲ್ತೆರಿಗೆ ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದಾಗಿ ಖಜಾನೆ ಖಾಲಿಯಾಗಿ ಪರದಾಡುತ್ತಿರುವ ಕಾಂಗ್ರೆಸ್‌ ಸರಕಾರ ಈಗ ಸಂಪನ್ಮೂಲ ಕ್ರೋಡೀಕರಣಕ್ಕೆ ವಾಹನ ಖರೀದಿಸುವವರಿಗೆ ಬರೆ ಹಾಕಲು ಮುಂದಾಗಿದೆ. ಫೆಬ್ರವರಿ 1ರಿಂದಲೇ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ ಸೆಸ್‌ ಹಾಕಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್ ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ […]

ಕಾರು, ಬೈಕ್‌ ಖರೀದಿಸುವವರಿಗೆ ಸೆಸ್‌ ಬರೆ Read More »

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು

ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋದ ಕಾರಿನ ನಂಬರ್‌ ಪ್ಲೇಟ್‌ ನಕಲಿ ಕಾರವಾರ: ಅಂಕೋಲಾ ಸಮೀಪ ರಾಮನಗುಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿರ್ಜನ ಪ್ರದೇಶದಲ್ಲಿ ಉಪೇಕ್ಷಿಸಿ ಹೋಗಿದ್ದ ಕ್ರೆಟಾ ಕಾರಿನೊಳಗೆ ಕಂತೆ ಕಂತೆ ಹಣ ಪತ್ತೆಯಾಗಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಕಾರನ್ನು ಪೊಲೀಸ್‌ ಠಾಣೆಗೆ ಒಯ್ದಿದ್ದಾರೆ. ಕಾರು ಮಂಗಳೂರು ಮೂಲದ್ದು ಎಂಬ ಸಂಶಯ ವ್ಯಕ್ತವಾಗಿದೆ.ಕಾರಿನ ನಂಬರ್‌ ಪ್ಲೇಟ್‌ ನಕಲಿಯಾಗಿದ್ದು, ಹೀಗಾಗಿ ಈ ಕಾರು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಿನೊಳಗಿದ್ದ ಬ್ಯಾಗಿನಲ್ಲಿ 1,14,99,500 ರೂಪಾಯಿ

ಹೆದ್ದಾರಿ ಬದಿ ನಿಲ್ಲಿಸಿದ್ದ ಕಾರಿನಲ್ಲಿತ್ತು ಕಂತೆ ಕಂತೆ ನೋಟು Read More »

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ

ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ Read More »

ಮೈಕ್ರೊ ಫೈನಾನ್ಸ್‌ ಕಿರುಕುಳ : ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

ಬರೀ ಒಂದು ಕಂತು ಬಾಕಿಯಿಟ್ಟದ್ದಕ್ಕೆ ಶಿಕ್ಷಕ ದಂಪತಿಯನ್ನು ಪೀಡಿಸಿದ್ದ ಮೈಕ್ರೊ ಫೈನಾನ್ಸ್‌ ಸಿಬ್ಬಂದಿ ಬೆಂಗಳೂರು: ಮೈಕ್ರೊ ಫೈನಾನ್ಸ್‌ನವರ ಕಿರುಕುಳ ತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೊ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಎರಡು ದಿನಗ ಹಿಂದೆ ತುಂಗಭದ್ರಾ ನದಿಗೆ ಹಾರಿದ್ದರು. ಮೃತದೇಹ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ. ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ

ಮೈಕ್ರೊ ಫೈನಾನ್ಸ್‌ ಕಿರುಕುಳ : ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ Read More »

ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌

ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 201 ರಲ್ಲಿ ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ವಜಾ ಮಾಡಲಾಗಿದೆ. ಕ್ರಿಸ್

ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌ Read More »

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ.

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ

ಸನಾತನ ಧರ್ಮ ರಕ್ಷಣೆ, ಪ್ರಕೃತಿ ವಿಕೋಪ ತಡೆಗೆ ದೇವರಿಗೆ ಮೊರೆ ಉಡುಪಿ: ಸನಾತನ ಧರ್ಮದ ರಕ್ಷಣೆ, ಕಡಲ್ಕೊರೆತದಂಥ ಪ್ರಕೃತಿ ವಿಕೋಪಗಳು ನಡೆಯದಿರಲು ಭಾನುವಾರ ಕೇರಳದ ಕಾಸರಗೋಡಿನಿಂದ ಬೈಂದೂರು ಸಮೀಪದ ಶಿರೂರು ತನಕ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಠಣ ಅಭಿಯಾನ ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯ ಕೆಲವೆಡೆಗಳಲ್ಲೂ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಿಸಲಾಗಿದೆ. ಅರಬ್ಬಿ ಸಮುದ್ರದ 108 ಸ್ಥಳಗಳಲ್ಲಿ ಏಕಕಾಲದಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ ಮಾಡಲಾಗಿದೆ. 20

ಕಾಸರಗೋಡಿನಿಂದ ಶಿರೂರು ತನಕ ಕಡಲ ಕಿನಾರೆಯಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮ ಪಠಣ Read More »

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ

ಮೈಸೂರು: ಕಳೆದ ಕೆಲ ಸಮಯದಿಂದ ಜನರನ್ನು ಇನ್ನಿಲ್ಲದಂತೆ ಕಾಡಿ ಜೀವ ಹಿಂಡುತ್ತಿರುವ ಮೈಕ್ರೊ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರಕಾರ ಅಬ್ಬರಿಸುತ್ತಿದ್ದರೂ ಈ ಫೈನಾನ್ಸ್‌ ಸಂಸ್ಥೆಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಫೈನಾನ್ಸ್‌ನವರ ಕಾಟಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್ ಫೈವ್ ಸ್ಟಾರ್ ಮೈಕ್ರೊ ಫೈನಾನ್ಸ್‌

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ Read More »

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್‌ಮೇಲ್‌ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್‌ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌ Read More »

error: Content is protected !!
Scroll to Top