ರಾಜ್ಯ

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಬರೆದಿಟ್ಟ ಪತ್ರದಲ್ಲಿದೆ ಸ್ಫೋಟಕ ಮಾಹಿತಿ ಬೆಂಗಳೂರು : ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳುತ್ತಿದ್ದರೂ ಸಚಿನ್‌ ಪಾಂಚಾಲ್‌ ಬರೆದಿಟ್ಟಿದ್ದ ಆರು ಪುಟಗಳ ಡೆತ್‌ನೋಟ್‌ನಲ್ಲಿ ಹಲವು ಬಾರಿ ಪ್ರಿಯಾಂಕ್‌ ಖರ್ಗೆ ಹೆಸರು ಉಲ್ಲೇಖಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಿಯಾಂಕ್‌ ಖರ್ಗೆಯ ಆಪ್ತ ರಾಜು ಕಪನೂರ್ (ಗುತ್ತಿಗೆದಾರನಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿ) ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದನ್ನು […]

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು Read More »

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ !

ಖಾಸಗಿ ಬಸ್‌ ವಿರುದ್ಧ ಹೋರಾಡಿ ಗೆದ್ದ ಮಹಿಳೆ ಮಂಗಳೂರು : ಖಾಸಗಿ ಬಸ್‌ನಲ್ಲಿ ತಿಗಣೆ ಕಡಿದು ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರಿಗೆ ಬರೋಬ್ಬರಿ 1.29 ಲ.ರೂ. ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ನಲ್ಲಿ ರಾತ್ರಿ ವೇಳೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ತಿಗಣೆ ಕಚ್ಚಿ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಪಟ್ಟು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ಬಸ್ ಮಾಲಕರಿಗೆ ಈ ಆದೇಶ ನೀಡಿದೆ. ಘಟನೆ ಬಗ್ಗೆ ಮಹಿಳೆ

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ ! Read More »

ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ

ಹುಬ್ಬಳ್ಳಿ: ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ವ್ರತಧಾರಿಗಳ ಪೈಕಿ ಇನ್ನಿಬ್ಬರು ಕೊನೆಯುಸಿರೆಳೆಯುವುದರೊಂದಿಗೆ ಸಾವಿನ ಸಂಖ್ಯೆ 8ಕ್ಕೇರಿದೆ. ಈ ಅವಘಡದಲ್ಲಿ ಈಗ ಒಬ್ಬ ಗಾಯಾಳು ಮಾತ್ರ ಬಾಕಿ ಉಳಿದಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಳಗಳು ತಿಳಿಸಿವೆ. ಪ್ರಕಾಶ ಬಾರಕೇರ (42) ಎಂಬವರು ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ತೇಜಸ್ವರ್ (27)​​ ಎಂಬವರು ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ವ್ರತಧಾರಿಗಳ ಸಾವಾಗಿದ್ದು,

ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ Read More »

2025ರ ಸಾರ್ವತ್ರಿಕ ರಜೆಗಳ ಪಟ್ಟಿ

ಬೆಂಗಳೂರು: ಇನ್ನು ಕೆಲವೇ ತಾಸುಗಳಲ್ಲಿ 2024 ಮರೆಗೆ ಸರಿದು 2025ನೇ ವರ್ಷ ಶುರುವಾಗಲಿದೆ. ಪ್ರತಿ ವರ್ಷದಂತೆ 2025ರ ಸಾರ್ವತ್ರಿಕ ಮತ್ತು ಪರಿಮಿತ ರಜೆ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರ ಸರಕಾರಿ ರಜೆ ಇರುತ್ತದೆ. ಸಾರ್ವತ್ರಿಕ ರಜಾ ದಿನಗಳ ಪಟ್ಟಿ

2025ರ ಸಾರ್ವತ್ರಿಕ ರಜೆಗಳ ಪಟ್ಟಿ Read More »

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ

ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಇಲ್ಲ ಎಂದು ವಾದ ಬೆಂಗಳೂರು: ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರಿಗೆ

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ Read More »

ಹಿಂದು ಹೆಸರಿನಲ್ಲಿ ಯುವತಿಗೆ ವಂಚನೆ | ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ತೋರಿಸಿ ಯುವತಿಗೆ ಬೆದರಿಕೆ

ಮಧ್ಯಪ್ರದೇಶದ : ಮುಸ್ಲಿಂ ವ್ಯಕ್ತಿಯೋರ್ವ ಪ್ರದೀಪ್ ಸೋಲಂಕಿ ಎಂದು ಹಿಂದೂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದು ಮಾತ್ರವಲ್ಲದೆ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಮೊಕ್ಸಿನ್ ಎಂಬ ಮುಸ್ಲಿಂ ಯುವಕ ತನ್ನ ಹೆಸರನ್ನು ಪ್ರದೀಪ್ ಎಂದು ಬದಲಾಯಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದಾನೆ. ಈತ  ಪ್ರದೀಪ್ ಸೋಲಂಕಿ ಎಂದು ಹೇಳಿಕೊಂಡು ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಆರೋಪಿ ಮೂರು ವರ್ಷಗಳಿಂದ ಆಕೆಗೆ ಲೈಂಗಿಕವಾಗಿ ಶೋಷಿಸುತ್ತಿದ್ದ. ಸಂತ್ರಸ್ತೆ ಕುಟುಂಬ ಸಮೇತ ಪೊಲೀಸ್ ಠಾಣೆಗೆ

ಹಿಂದು ಹೆಸರಿನಲ್ಲಿ ಯುವತಿಗೆ ವಂಚನೆ | ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ತೋರಿಸಿ ಯುವತಿಗೆ ಬೆದರಿಕೆ Read More »

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಪರವಾಗಿ ಮಾತನಾಡಿದ ವದಂತಿಗಳಿಗೆ ಸ್ಪಷ್ಟೀಕರಣ ಮೈಸೂರು: ಕಾಂಗ್ರೆಸ್‌ ಸೇರುವ ಉದ್ದೇಶ ಖಂಡಿತ ತನಗೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವದ ಕುರಿತು ಇತ್ತೀಚೆಗೆ ಪ್ರತಾಪ್‌ ಸಿಂಹ ಹೇಳಿದ ಮಾತೊಂದು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ವದಂತಿ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅಸವರು ಸ್ಪಷ್ಟೀಕರಣ ನೀಡಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ವಂಚಿತರಾದ ಬಳಿಕ ಪ್ರತಾಪ ಸಿಂಹ ನಡೆಗಳು ತುಸು ನಿಗೂಢವಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ Read More »

ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್‌

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ‌ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿತ್ತು. ಆದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ‌ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.

ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್‌ Read More »

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್​

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌

ಕಾಡಿಗೆ ಹೋಗುವವರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಶಿವಮೊಗ್ಗ : ದಶಕಗಳಿಂದ ಕಾಡುತ್ತಿರುವ ಮಂಗನಕಾಯಿಲೆ ಮಲೆನಾಡಿನಲ್ಲಿ ಮತ್ತೆ ಕಾಣಿಸಿರುವುದು ಆತಂಕವುಂಟು ಮಾಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್‌ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರನ್ನು ಕಾಡಿ ಅನೇಕ ಸಾವುನೋವುಗಳಿಗೆ ಕಾರಣವಾಗಿದ್ದ ಕೆಎಫ್‌ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ವೈರಸ್ ಈ ಬಾರಿ ಮತ್ತೆ ಬಂದಿದೆ.ಬೆಟ್ಟಬಸವಾನಿ

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌ Read More »

error: Content is protected !!
Scroll to Top