ರಾಜ್ಯ

ಮುರುಡೇಶ್ವರ- ಬೆಂಗಳೂರು ರೈಲು ಮೇ ತನಕ ವಿಸ್ತರಣೆ

ಮೂರು ಜಿಲ್ಲೆಗಳ ಜನರಿಗೆ ಅನುಕೂಲ ಮಂಗಳೂರು: ಪ್ರಯಾಣಿಕರ ಬೇಡಿಕೆಗೆ ಮಣಿದು ರೈಲ್ವೆ ಇಲಾಖೆ ಮುರುಡೇಶ್ವರ- ಬೆಂಗಳೂರು ರೈಲು ಸೇವೆಯನ್ನು 2023ರ ಮೇ ತಿಂಗಳ ಕೊನೆಯ ತನಕ ವಿಸ್ತರಿಸಿ ಆದೇಶ ಹೊರಡಿಸಿದೆ. ಚಳಿಗಾಲದ ಅವಧಿಗಾಗಿ ಜನವರಿ ಅಂತ್ಯದ ತನಕ ಮಾತ್ರ ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ ಮಾಡಲಾಗಿತ್ತು.ಆದರೆ ಈ ರೈಲು ಜನರಿಗೆ ಬಹಳ ಅನುಕೂಲಕರವಾಗಿರುವುದರಿಂದ ವಿಸ್ತರಿಸಲು ಒತ್ತಾಯವಿತ್ತು. ಕರಾವಳಿ ಜನರಿಗೆ ಬೆಂಗಳೂರಿಗೆ ಹೋಗಿ ಬರಲು ಈ ರೈಲು ಅನುಕೂಲಕರವಾಗಿದೆ. ಮೂರು ಜಿಲ್ಲೆಗಳ ಜನರು […]

ಮುರುಡೇಶ್ವರ- ಬೆಂಗಳೂರು ರೈಲು ಮೇ ತನಕ ವಿಸ್ತರಣೆ Read More »

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ

ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಗುರುವಂದನೆ, ತುಲಾಭಾರ ಸಮಾರಂಭ ವೈಭವದಿಂದ ಜರಗಿತು. ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯತಿವರೇಣ್ಯರ ಉಪಸ್ಥಿತಿಯಲ್ಲಿ ನಡೆದ ಸಮಾರಂಭಕ್ಕೆ ಸಾವಿರಾರು ಮಂದಿ ಭಕ್ತರು ಸಾಕ್ಷಿಯಾದರು. ರಾಜಕೀಯ ನಾಯಕರ ಸಹಿತ, ಅನೇಕ ಗಣ್ಯರು ಆಗಮಿಸಿ ಗುರುಗಳ ಆಶೀರ್ವಾದ ಸ್ವೀಕರಿಸಿದರು. ಬೆಳಿಗ್ಗೆ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ದರ್ಬೆಯಿಂದ ಭವ್ಯ ಶೋಭಾಯಾತ್ರೆ ನಡೆಯಿತು. ಶ್ರೀಗಳ ಉಪಸ್ಥಿತಿಯಲ್ಲಿ ಗಣ್ಯರು ಚೆಂಡೆ,

 ವೈಭವಕ್ಕೆ ಸಾಕ್ಷಿಯಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ, ಗುರುವಂದನೆ, ತುಲಾಭಾರ, ಗ್ರಂಥ ಬಿಡುಗಡೆ Read More »

ಮಕ್ಕಳಿಗೆ ಕಾಂಡೋಮ್‌ ಮಾರಿದರೆ ಕಾನೂನು ಕ್ರಮ

ರಾಜ್ಯ ಔಷಧ ನಿಯಂತ್ರಣ ಇಲಾಖೆ ಸೂಚನೆ ಬೆಂಗಳೂರು : ಶಾಲಾ ಮಕ್ಕಳ ಬ್ಯಾಗುಗಳಲ್ಲಿ ಕೆಲ ಸಮಯದ ಹಿಂದೆ ಕಾಂಡೋಮ್‌, ಗರ್ಭ ನಿರೋಧಕ ಗುಳಿಗೆಯಂಥ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೆಡಿಕಲ್‌ ಶಾಪ್‌ಗಳು ಮಕ್ಕಳಿಗೆ ಕಾಂಡೋಮ್‌ ಮತ್ತು ಗರ್ಭ ನಿರೋಧಕಗಳನ್ನು ಮಾರುವುದಿಲ್ಲ ಎಂಬ ಫಲಕ ಹಾಕಲು ರಾಜ್ಯ ಔಷಧ ನಿಯಂತ್ರಣ ಇಲಾಖೆ ಸೂಚನೆ ನೀಡಿದೆ.ಕಾಂಡೋಮ್‌ ಮತ್ತು ಗರ್ಭನಿರೋಧಕ ಮಾತ್ರೆ ಕುರಿತು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಮಟ್ಟದ ಔಷಧ ನಿಯಂತ್ರಣ ಅಧಿಕಾರಿಗಳಿಗೆ ರಾಜ್ಯ ಔಷಧ

ಮಕ್ಕಳಿಗೆ ಕಾಂಡೋಮ್‌ ಮಾರಿದರೆ ಕಾನೂನು ಕ್ರಮ Read More »

ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ

ಇಂದು ಕಲಬುರಗಿಯಲ್ಲಿ ಬೃಹತ್‌ ಸಮಾವೇಶ ಶಿವಮೊಗ್ಗ: ಈ ತಿಂಗಳು ಎರಡನೇ ಸಲ ಇಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಕೂ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆ.27 ರಂದು ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ ಕೆಂಪೇಗೌಡ

ಫೆಬ್ರವರಿಯಲ್ಲೂ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪರೀಕ್ಷೆ ದಿನಾಂಕದಲ್ಲಿ ಒಂದು ಪರಿಷ್ಕರಣೆ ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್​ 31ರಿಂದ ಏಪ್ರಿಲ್ 15ರ ವರೆಗೆ 10ನೇ ತರಗತಿಯ ಪರೀಕ್ಷೆಗಳು ನಡೆಯಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿದೆ.ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿವೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ Read More »

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು. ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಸಂಸ್ನರಣಾ

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ Read More »

ಒಂದು ವರ್ಷದಲ್ಲಿ ಬಡವರಿಗೆ 6 ಮನೆ ನಿರ್ಮಾಣ

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಂಕಲ್ಪ ಉಡುಪಿ : ಬಡವರಿಗೆ ಆರು ಮನೆ ನಿರ್ಮಿಸಿಕೊಡಲು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಂಕಲ್ಪ ಮಾಡಿದ್ದಾರೆ. ದೇವಾಲಯದ ಹುಂಡಿಗೆ ಹಾಕುವ ಹಣ ಹೇಗೆ ವಿನಿಯೋಗ ಆಗುತ್ತದೋ ಗೊತ್ತಿಲ್ಲ, ರಾಮ ರಾಜ್ಯಕ್ಕೋಸ್ಕರ ರಾಮಮಂದಿರದ ನಿರ್ಮಾಣ ಆಗುತ್ತಿದೆ. ಮಂದಿರ ಕಟ್ಟುವ ಜೊತೆಗೆ ಬಡವರಿಗೆ ಮನೆ ಕಟ್ಟಿಸಿಕೊಡುವ ಸಂಕಲ್ಪ ಮಾಡೋಣ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ‌.ತನ್ನ 60ನೇ ವಯಸ್ಸಿನ ವೇಳೆಗೆ 6 ಮನೆ ಕಟ್ಟಿಸಿಕೊಡಲು ಪೇಜಾವರ ಶ್ರೀ ನಿರ್ಧರಿಸಿದ್ದು, ಒಂದು

ಒಂದು ವರ್ಷದಲ್ಲಿ ಬಡವರಿಗೆ 6 ಮನೆ ನಿರ್ಮಾಣ Read More »

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ

ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಚುಂಚಾದ್ರಿ ಮಹಿಳಾ ಸಮಾವೇಶ ನಡೆಯಿತು. ಸಮಾರಂಭವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ಚನ ನೀಡಿದರು. ಇದೇ ಸಂದರ್ಭ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಯರನ್ನು ಸನ್ಮಾನಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಬೃಹತ್ ಮಹಿಳಾ ಸಮಾವೇಶ Read More »

ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ

ಈ ನಿಯಮ ಜಾರಿಗೆ ಬಂದರೆ ಹದಿಹರೆಯದವರಿಗೂ ಸಿಗುತ್ತದೆ ಮದ್ಯ ಬೆಂಗಳೂರು: ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಅಬಕಾರಿ ಇಲಾಖೆ ಜ.9ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು

ಮದ್ಯ ಸೇವನೆ ವಯೋಮಿತಿ ಇಳಿಸಲು ಚಿಂತನೆ Read More »

ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌

ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಪುಕ್ಕಟೆ ಕೊಡುಗೆ ಬೆಂಗಳೂರು: ಮತದಾರರನ್ನು ಸೆಳೆಯಲು 200 ಯುನಿಟ್‌ ತನಕ ಉಚಿತ ವಿದ್ಯುತ್‌ ಕೊಡುವ ಭರವಸೆ ನೀಡಿದ್ದ ಕಾಂಗ್ರೆಸ್‌ ಇದೀಗ ಎರಡನೇ ಕೊಡುಗೆಯಾಗಿ ಮಹಿಳಾ ಮತದಾರರ ಮನಗೆಲ್ಲುವ ಸಲುವಾಗಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವ ಇನ್ನೊಂದು ಆಕರ್ಷಕ ಪುಕ್ಕಟೆ ಕೊಡುಗೆಯ ಘೋಷಣೆ ಮಾಡಿದೆ.ಸೋಮವಾರ ಬೆಂಗಳೂರಿನಲ್ಲಿ ನಡೆದ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಎಂಬ ಯೋಜನೆಯನ್ನು

ಗ್ಯಾಸ್‌ ಸಿಲಿಂಡರ್‌ ತುಂಬಿಸಿಕೊಡಲಿದೆ ಕಾಂಗ್ರೆಸ್‌ Read More »

error: Content is protected !!
Scroll to Top