ರಾಜ್ಯ

ಸಚಿವ ಜಮೀರ್‌ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ

ಮನೋರಂಜನಾ ಕಾರ್ಯಕ್ರಮದಲ್ಲಿ ದೈವಾರಾಧನೆಯ ಅಣಕು ಬೆಂಗಳೂರು: ಕಾಂತಾರ ಸಿನೆಮಾ ಬಂದ ಬಳಿಕ ತುಳುನಾಡಿನ ಪವಿತ್ರ ದೈವಾರಾಧನೆಯನ್ನು ನಕಲು ಮಾಡಿ ಅದೇ ರೀತಿಯ ವೇಷಭೂಷಣ ಧರಿಸಿ ನೃತ್ಯ ಮಾಡುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಈ ಬಗ್ಗೆ ತುಳುನಾಡಿನವರು ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ ಪ್ರಯೋಜನವಾಗುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್‌ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದಂತೆ ವೇಷ ಧರಿಸಿದ ಇಬ್ಬರು […]

ಸಚಿವ ಜಮೀರ್‌ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ Read More »

ಕರಾವಳಿಯಲ್ಲಿ ಫೆಂಗಲ್‌ ಪ್ರಭಾವದಿಂದ ಭಾರಿ ಮಳೆ : ಸಿಡಿಲಿಗೆ ಓರ್ವ ಬಲಿ

ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ; ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ನಿನ್ನೆ ಸಂಜೆಯಿಂದೀಚೆಗೆ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ಹಲವು ಅನಾಹುತಗಳನ್ನೂ ಸೃಷ್ಟಿಸಿದೆ. ಸಿಡಿಲು ಬಡಿದು ಪುತ್ತೂರಿನ ಕೆಯ್ಯೂರು ಸಮೀಪ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿಯಾಗಿದೆ. ಮನೆ ಮಂದಿ ಅದೃಷ್ಟವಶಾತ್‌ ಪಾರಾಗಿದ್ದಾರೆ. ಉಡುಪಿ ಜಿಲ್ಲೆಯ ಕೆಲವೆಡೆಗಳಲ್ಲಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿ ಜನರು ಸಮಸ್ಯೆ ಅನುಭವಿಸಿದ್ದಾರೆ. ನಿನ್ನೆ ರಾತ್ರಿಯಿಂದೀಚೆಗೆ ಎಡೆಬಿಡದೆ ಮಳೆ

ಕರಾವಳಿಯಲ್ಲಿ ಫೆಂಗಲ್‌ ಪ್ರಭಾವದಿಂದ ಭಾರಿ ಮಳೆ : ಸಿಡಿಲಿಗೆ ಓರ್ವ ಬಲಿ Read More »

ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತನರ ಕನ್ನಡದ ಹಳಿಯಾಳ ಎಂಬಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ನವೀನ ನಾರಾಯಣ ಬೆಳಗಾಂವಕರ್ (13) ಎಂಬ ವಿದ್ಯಾರ್ಥಿ ಮನೆಯಲ್ಲಿ ಆಟವಾಡುವಾಗುವಾಗ ಬಾಯಿಯಿಂದ ಬಲೂನು ಊದಿದ್ದು, ಆದರೆ ಈ ಬಲೂನು ಬಾಯಿಯೊಳಗೆ ಹೋಗಿ ಗಂಟಲಲ್ಲಿ ಸಿಲುಕಿತ್ತು. ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾನೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ

ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ; ಹಿಂದೂ ಸಮಾಜವನ್ನು ಹಣಿಯುವ ಪ್ರಯತ್ನ ಎಂದ ಶ್ರೀಗಳು ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹೇಳದೆ ಇದ್ದ ಮಾತುಗಳಿಗೆ ಪ್ರತಿಕ್ರಿಯೆ ನೀಡಿ ವಿನಾಕಾರಣ ನನ್ನನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪೇಜಾವರ ಶ್ರೀ ಮನುಸ್ಮೃತಿಯ ಪ್ರತಿಪಾದಕರು. ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ, ಮೇಲು-ಕೀಳು ಭಾವನೆ ಮಾಡುತ್ತಾರೆ ಎಂದೆಲ್ಲ ಟೀಕಿಸಿದ್ದರು. ಈ ಬಗ್ಗೆ

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ Read More »

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ

ಭಿನ್ನಮತೀಯ ಚಟುವಟಿಕೆ ನಡೆಸಿದ್ದಕ್ಕೆ ಶೋಕಾಸ್‌ ನೋಟಿಸ್‌ ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರಿದ ಬೆನ್ನಲ್ಲೇ ಹೈಕಮಾಂಡ್ ಜಗಳ ಬಗೆಹರಿಸಲು ಮುಂದಾಗಿದೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ Read More »

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌

ಸೋಲು, ಒಳಜಗಳದಿಂದ ಕಳೆಗುಂದಿರುವ ಬಿಜೆಪಿ ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಬಾಕಿಯಿರುವ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆ ಮುಂದಿನ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಡಿ.5ರಂದು ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದ ಕುರಿತು ಮಾಹಿತಿ ನೀಡುವ ವೇಳೆ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ

ಡಿ.31ರೊಳಗೆ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸೂಚನೆ ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಈಗ ಡಿಸೆಂಬರ್ 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಇಷ್ಟರ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ Read More »

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ

ಪಕ್ಷದಿಂದ ಉಚ್ಚಾಟಿಸಲು ವಿಜಯೇಂದ್ರ ಬಣದ ಬಿಗಿಪಟ್ಟು ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡೂ ವಕ್ಫ್‌ ವಿರುದ್ಧ ತನ್ನದೇ ಪ್ರತ್ಯೇಕ ಹೋರಾಟ ನಡೆಸುತ್ತಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಯಡಿಯೂರಪ್ಪ ಬಣದ ಕೂಗು ಜೋರಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.ಸದಾ ಯಡಿಯೂರಪ್ಪ ಪರಿವಾರವನ್ನು ಟೀಕಿಸುತ್ತಾ ಬಿಜೆಪಿಗೆ ತಲೆನೋವಾಗಿದ್ದ ಯತ್ನಾಳ್‌ ವಿರುದ್ಧ ಉಪಚುನಾವಣೆ ಸೋಲಿನ ಬಳಿಕ ಯಡಿಯೂರಪ್ಪ ನಿಷ್ಠರು ಸಿಡಿದೆದ್ದಾರೆ. ಸೋಲಿಗೆ ಯತ್ನಾಳ್‌ ಹೇಳಿಕೆಗಳೇ ಕಾರಣ ಎಂದು ಸೋಲನ್ನು ಅವರ ತಲೆಗೆ ಕಟ್ಟಿದ್ದು ಮಾತ್ರವಲ್ಲದೆ

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

ಬೆಳಗಾವಿಯಲ್ಲಿ ಹಾಡುಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ !

ಬೆಳಗಾವಿ: ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಡುಹಗಲೇ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಸೋಹಿಲ್ ಅಹ್ಮದ್ ಕಿತ್ತೂರು (17) ಚಾಕು ಇರಿತದಿಂದ ಹತ್ಯೆಯಾದವ. ಸೋಹಿಲ್ ಗ್ರಾಮದಲ್ಲಿ ಎಗ್‌ ರೈಸ್ ಅಂಗಡಿ ಇಟ್ಟುಕೊಂಡಿದ್ದು, ಆತನನ್ನು ಐದು ಮಂದಿಯ ತಂಡ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ

ಬೆಳಗಾವಿಯಲ್ಲಿ ಹಾಡುಹಗಲೇ ಯುವಕನಿಗೆ ಚಾಕು ಇರಿದು ಹತ್ಯೆ ! Read More »

error: Content is protected !!
Scroll to Top