ರಾಜ್ಯ

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು?

ನಡುರಾತ್ರಿ ದಟ್ಟ ಕಾಡಿನ ನಡುವೆ ಕಾಣಿಸಿದ ಟಾರ್ಚ್‌ ಬೆಳಕಿನ ಹಿನ್ನೆಲೆಯಲ್ಲಿ ಅನುಮಾನ ಕಾರ್ಕಳ : ನಕ್ಸಲರು ಇನ್ನೂ ಕೊಪ್ಪ, ಶೃಂಗೇರಿ ಭಾಗದಲ್ಲೇ ಇರುವ ಅನುಮಾನವಿದ್ದು, ಈ ಹಿನ್ನೆಲೆಯಲ್ಲಿ ಕೂಂಬಿಂಗ್‌ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಶುಕ್ರವಾರ ನಡುರಾತ್ರಿ ವೇಳೆ ಕುದುರೆಮುಖ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಕೆರೆಕಟ್ಟೆ ಪರಿಸರದಲ್ಲಿ ದಟ್ಟ ಕಾಡಿನ ನಡುವೆ ಟಾರ್ಚ್‌ ಬೆಳಕು ಕಂಡುಬಂದಿದೆ. ಇದು ನಕ್ಸಲರ ಓಡಾಟ ಇರಬಹುದು ಎಂಬ ಅನುಮಾನದಲ್ಲಿ ನಕ್ಸಲ್‌ ನಿಗ್ರಹ ಪಡೆ ಕೂಂಬಿಂಗ್‌ ತೀವ್ರಗೊಳಿಸಿದೆ.ಹೆಬ್ರಿಯ ನಾಡ್ಪಾಲು ಸಮೀಪ ಪೀತಬೈಲಿನಲ್ಲಿ ನಕ್ಸಲ್‌ ಮುಖಂಡ ವಿಕ್ರಂ […]

ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು? Read More »

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ

ಬೆಂಗಳೂರು : ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ  ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು.  ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ಗಳ ಮಾರಾಟದ

ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ Read More »

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ

ಈ ವರ್ಷ ದಿವ್ಯಾಂಗರಿಗೆ ಬರೀ 10 ಕೋ. ರೂ. ಅನುದಾನ ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ದಿವ್ಯಾಂಗರಿಗೆ ಅನುದಾನ ಕಡಿತ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಕಳೆದ ವರ್ಷಕ್ಕಿಂತ ವಿಕಲಚೇತರ ಅನುದಾನದಲ್ಲಿ ಶೇ.80ರಷ್ಟು ಹಣ ಕಡಿತ ಮಾಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಇದನ್ನೂ ಓದಿ: ಸಭೆಗಳನ್ನು ರದ್ದು ಮಾಡಿ ದಿಢೀರ್‌ ಸ್ವಗ್ರಾಮಕ್ಕೆ ತೆರಳಿದ ಏಕನಾಥ್‌ ಶಿಂಧೆ ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ ಶೇ.80 ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ ಮತ್ತು

ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿವ್ಯಾಂಗರ ಅನುದಾನ ಶೇ.80 ಕಡಿತ Read More »

ಎಲ್ಲಿ ಹೋದರು ಅಳಿದುಳಿದ ನಕ್ಸಲರು?

ಮರಳಿ ಕೇರಳದ ಕಾಡು ಸೇರಿಕೊಂಡಿರುವ ಶಂಕೆ ಕಾರ್ಕಳ : ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿಯಾದ ಬಳಿಕ ಅಳಿದುಳಿದ ನಕ್ಸಲರೆಲ್ಲ ಮರಳಿ ಕೇರಳದತ್ತ ಪಲಾಯನ ಮಾಡಿರುವ ಶಂಕೆಯಿದೆ. ವಿಕ್ರಂ ಗೌಡ ಎನ್‌ಕೌಂಟರ್‌ ಆದ ಬಳಿಕ ಕಾರ್ಕಳ, ಚಿಕ್ಕಮಗಳೂರು ಮತ್ತಿತರೆಡೆ ನಕ್ಸಲ್‌ ನಿಗ್ರಹ ಪಡೆಯವರು ಪೊಲೀಸರೊಂದಿಗೆ ತೀವ್ರ ಹುಡುಕಾಟ ನಡೆಸಿದರೂ ನಕ್ಸಲರ ಜಾಡು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಕಾಡಿನಿಂದ ನಾಡಿಗಿಳಿದು ವಾಹನದ ಮೂಲಕ ಪರಾರಿಯಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಸಂಪಾಜೆ, ಕೊಪ್ಪ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ನಾಕಾಬಂಧಿ ಹಾಕಿ ತಪಾಸಣೆಯನ್ನೂ

ಎಲ್ಲಿ ಹೋದರು ಅಳಿದುಳಿದ ನಕ್ಸಲರು? Read More »

3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ

ಬೇರೊಂದು ಟ್ರಕ್‌ಗೆ ಲೋಡ್‌ ಮಾಡಿಕೊಂಡು ಹೋಗಿರುವ ಅನುಮಾನ ಬೆಂಗಳೂರು: ದಿಲ್ಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ಕಂಟೈನರ್‌ ಚಾಲಕನೇ ಕದ್ದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಖಾಲಿ ಕಂಟೈನರ್‌ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಪತ್ತೆಯಾಗಿದೆ. ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಫೋನ್‌ಗಳನ್ನು ದಿಲ್ಲಿಯಿಂದ ಬೆಂಗಳೂರಿಗೆ ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಎನ್​ಎಲ್ 01 ಎಎಫ್ 2743 ನೋಂದಣಿಯ ಕಂಟೇನರ್​ನಲ್ಲಿ ದಿಲ್ಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಪೆರೇಸಂದ್ರೆ

3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ Read More »

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು

ಶಿವಮೊಗ್ಗ : ಕೆಲದಿನಗಳ ಹಿಂದೆಯಷ್ಟೇ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು ಭಾರಿ ವಿವಾದಕ್ಕೊಳಗಾಗಿತ್ತು. ಈಗ ಮಧು ಬಂಗಾರಪ್ಪನವರ ಊರಿನ ವ್ಯಕ್ತಿಯೇ ಅವರನ್ನು ನಿಂದಿಸಿದ ವೀಡಿಯೊ ಸದ್ದು ಮಾಡುತ್ತಿದೆ. ಸೋಷಿಯಲ್‌ ಮೀಡಿಯಾ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ ಶಿವಮೊಗ್ಗದ ವಿನೋಬ ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಧು ಬಂಗಾರಪ್ಪ ವಿದ್ಯಾರ್ಥಿಗಳ

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು Read More »

ಈ ಸಲ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆಯಿಲ್ಲ

ಕಳೆದ ವರ್ಷದಂತೆಯೇ ಪ್ರಶ್ನೆ ಪತ್ರಿಕೆ ಇರಲಿದೆ ಎಂದು ಸ್ಪಷ್ಟನೆ ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ, ಕಳೆದ ವರ್ಷದ ಮಾದರಿಯಲ್ಲೇ ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಶ್ನೆ ಪತ್ರಿಕೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುರುವ ಸುದ್ದಿ ಸುಳ್ಳು. 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ

ಈ ಸಲ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆಯಿಲ್ಲ Read More »

ಮತ್ತೊಂದು ಭ್ರಷ್ಟಾಚಾರ ಪ್ರಕರಣದ ಸುಳಿಯಲ್ಲಿ ಸಚಿವ ಚಲುವರಾಯಸ್ವಾಮಿ

ಬಾರ್‌ ಲೈಸೆನ್ಸ್‌ ನೀಡಲು ನಡೆದ ಲಂಚದ ಮಾತುಕತೆಯಲ್ಲಿ ಸಚಿವರ ಹೆಸರು ಉಲ್ಲೇಖ ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತೊಂದು ಲಂಚದ ಸುಳಿಯಲ್ಲಿ ಸಿಲುಕಿದ್ದಾರೆ. ಬಾರ್‌ ಲೈಸೆನ್ಸ್‌ ನೀಡಲು ಕಾಂಗ್ರೆಸ್‌ ಕಾರ್ಯಕರ್ತರೊಬ್ಬರಿಂದಲೇ ಅಬಕಾರಿ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿದ ಪ್ರಕರಣದಲ್ಲಿ ಮಂಡ್ಯದ ಉಸ್ತುವಾರಿ ಸಚಿವರೂ ಆಗಿರುವ ಚಲುವರಾಯಸ್ವಾಮಿಯ ಹೆಸರೂ ಪ್ರಸ್ತಾಗೊಂಡಿದ್ದು, ಈಗ ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಮಂಡ್ಯದ ಚಂದೂಪುರದಲ್ಲಿ ಬಾರ್‌​​ಗೆ ಲೈಸೆನ್ಸ್‌ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ

ಮತ್ತೊಂದು ಭ್ರಷ್ಟಾಚಾರ ಪ್ರಕರಣದ ಸುಳಿಯಲ್ಲಿ ಸಚಿವ ಚಲುವರಾಯಸ್ವಾಮಿ Read More »

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಸ್ವಾಮೀಜಿ ವಿರುದ್ಧ ಕೇಸ್‌

ಭಾರಿ ವಿವಾದಕ್ಕೀಡಾಗಿದ್ದ ಸ್ವಾಮೀಜಿಯ ಹೇಳಿಕೆ ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹೊರಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ತರಬಹುದು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ನಡೆದ ಪ್ರತಿಭಟನಾ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದ ಸ್ವಾಮೀಜಿ ವಿರುದ್ಧ ಕೇಸ್‌ Read More »

ಸಂಪುಟ ಸರ್ಜರಿಗೆ ಹೈಕಮಾಂಡ್‌ ನಕಾರ : ಸಚಿವರಾಗಲು ಕಾಯುತ್ತಿದ್ದವರಿಗೆ ನಿರಾಶೆ

ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲಷ್ಟೇ ಅನುಮತಿ ಬೆಂಗಳೂರು: ಸದ್ಯಕ್ಕೆ ಸಂಪುಟ ಪುನರ್‌ ರಚನೆ ಬೇಡ ಎಂದು ಹೈಕಮಾಂಡ್‌ ಹೇಳಿರುವುದರಿಂದ ಮಂತ್ರಿಯಾಗಲು ಕಾಯುತ್ತಿದ್ದವರಿಗೆ ಭಾರಿ ನಿರಾಶೆಯಾಗಿದೆ. ಸಂಪುಟ ಪುನರ್‌ ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಹೈಕಮಾಂಡ್‌ ಜೊತೆ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿನ್ನೆ ದಿಲ್ಲಿಗೆ ಹೋಗಿದ್ದರು. ಈ ಮಾತುಕತೆಯಲ್ಲಿ ಹೈಕಮಾಂಡ್‌ ನಾಯಕರು ಸಂಪುಟ ಪುನರ್‌ ರಚನೆ ಈಗ ಬೇಡ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಂಪುಟ ಸರ್ಜರಿಗೆ ಹೈಕಮಾಂಡ್‌ ನಕಾರ : ಸಚಿವರಾಗಲು ಕಾಯುತ್ತಿದ್ದವರಿಗೆ ನಿರಾಶೆ Read More »

error: Content is protected !!
Scroll to Top