ರಾಜ್ಯ

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!

ಬಸ್‌ ಟಿಕೆಟ್‌ ದರ ಹೆಚ್ಚಾಗಿದೆ ಎಂದು ಕೊರಿಯರ್‌ ಮೂಲಕ ಕಳುಹಿಸುವ ಐಡಿಯಾ ಬೆಂಗಳೂರು: ರೀಲ್ಸ್‌ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್‌ ಮಾಡಲು ಬಂದ ಕೊರಿಯರ್‌ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್‌ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ […]

ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ! Read More »

ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ

ಅಡಿಕೆ ಹಾನಿಕಾರಕ ಅಲ್ಲ ಎಂದು ತಿಳಿಸಿದ ಸಂಶೋಧನಾ ಮಧ್ಯಂತರ ವರದಿ ಬೆಂಗಳೂರು: ಅಡಿಕೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವ ಅಪಾಯಕಾರಿ ಅಂಶ ಇಲ್ಲ ಎಂದು ಸರ್ಕಾರ ಹೇಳಿದೆ. ಈ ಕುರಿತು ಕಲಾಪದಲ್ಲಿ ಹೇಳಿಕೆ ನೀಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ ಅಂಶಗಳು ಇಲ್ಲ ಎಂಬುದು ಸಂಶೋಧನಾ ಮಧ್ಯಂತರ ವರದಿಯಲ್ಲಿ ತಿಳಿದುಬಂದಿದೆ ಎಂದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ, ಅಡಿಕೆ ಹಾನಿಕಾರಕವಲ್ಲ ಮತ್ತು ಅದರಿಂದ ಕ್ಯಾನ್ಸರ್‌ ಬರುವುದಿಲ್ಲ ಎಂಬುದನ್ನು ನಿರೂಪಿಸಲು ಸಂಶೋಧನೆಗಳು

ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ Read More »

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ

ಪರೀಕ್ಷೆ ಬರೆಯಲಿದ್ದಾರೆ 9 ಲಕ್ಷ ವಿದ್ಯಾರ್ಥಿಗಳು ಬೆಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ರಾಜ್ಯದಾದ್ಯಂತ ಆರಂಭವಾಗಲಿದೆ. ಶಿಕ್ಷಣ ಇಲಾಖೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಲ್ಲಿ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಜೆರಾಕ್ಸ್, ಸೈಬರ್/ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸರ್ವ ಸಿದ್ಧತೆ Read More »

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ತರಬೇತಿ ನೀಡಲು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂಬುದಾಗಿ ಸರ್ಕಾರದ ಗಮನಕ್ಕೆ ತಂದಿದ್ದರು. ಈ ಬಗ್ಗೆ

ಗ್ರಾಮೀಣ ಮಕ್ಕಳಿಗೆ ನೀಟ್ ತರಬೇತಿಗೆ ಸರ್ಕಾರದಿಂದ ಸೂಕ್ತ ಕ್ರಮದ ಭರವಸೆ Read More »

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ

ಕಾರವಾರ: ಆಟವಾಡುತ್ತಿದ್ದ ಎರಡು ವರ್ಷದ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಆ ಮಗುವನ್ನು ವ್ಯಕ್ತಿಯೊಬ್ಬ ರಕ್ಷಣೆ ಮಾಡಿದ ಘಟನೆ ಶಿರಸಿಯ ಕಸ್ತೂರ್ಬಾ ‌ನಗರದಲ್ಲಿ ನಡೆದಿದೆ. ಬಾವಿಗೆ ಬಿದ್ದ ಮಗುವನ್ನು ಭುವಿ(2) ಎಂದು ಗುರುತಿಸಲಾಗಿದೆ. ಮಗು ಮನೆಯಲ್ಲಿ ಕಾಣದೇ ಇದ್ದಾಗ ಗಾಬರಿಯಾದ ಅಜ್ಜಿ ಹುಡುಕಾಡಲು ಆರಂಭಿಸಿದ್ದಾರೆ. ಹುಡುಕುತ್ತಾ ಬಾವಿಯ ಹತ್ತಿರ ಹೋದಾಗ ಬಾವಿಯಿಂದ ಮಗು ಅಳುವ ಶಬ್ಧ ಕೇಳಿಸಿದೆ. ಇಣುಕಿದಾಗ ಮಗು ಬಾವಿಗೆ ಇಳಿಸಲಾಗಿದ್ದ ಪಂಪ್‌ನ ‌ಹಗ್ಗದಲ್ಲಿ ನೇತಾಡುತ್ತಾ ಅಳುವುದು ಕಂಡು ಬಂದಿದೆ. ತಕ್ಷಣವೇ ಸಮೀಪದ ಫಯಾಜ್ ಚೌಟಿ

ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಮಗುವಿನ ರಕ್ಷಣೆ Read More »

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

ಕಾಸರಗೋಡು: ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಭಾಗವತರು, ಹಿಮ್ಮೇಳದ ಗುರು ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ ಶ್ರೇಯ ನಿವಾಸದಲ್ಲಿ ಪ್ರದಾನಿಸಲಾಯಿತು. ಪ್ರಶಸ್ತಿಯ ಪ್ರಾಯೋಜಕ ಮತ್ತು ಭಾಗವತ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ, ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ. ಹೆಗಡೆ ಮೋಹನ

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ Read More »

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ

ಲಕ್ನೋ: ಉಗ್ರಗಾಮಿ ಸಂಘಟನೆ ಐಸಿಸ್ ಜೊತೆಗೆ ಸಂಬಂಧ ಹೊಂದಿರುವ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಹರಿಷ್ ಅಲಿ(19) ಎಂದು ಗುರುತಿಸಲಾಗಿದೆ. ಈತ ದಂತ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದ. ಈತ ಸಹರಾನ್‌ಪುರ ನಿವಾಸಿಯಾಗಿದ್ದಾನೆ. ಈತನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿರುವುದಾಗಿದೆ. ದೇಶದಲ್ಲಿ ಐಸಿಸ್ ಆನ್‌ಲೈನ್ ನೆಟ್ವರ್ಕ್ ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ವೇಳೆ ಅಲಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈತ ಐಸಿಸ್ ಭಯೋತ್ಪಾದಕರ ಜೊತೆಗೆ

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ Read More »

ಕೋಳಿ ಅಂಕಕ್ಕೆ ದಾಳಿ ಮಾಡಿಸಿದ್ದಾಗಿ ಆರೋಪಿಸಿ ವ್ಯಕ್ತಿಯ ಮೇಲೆ ಹಲ್ಲೆ: ದೂರು ದಾಖಲು

ಹೆಬ್ರಿ: ವ್ಯಕ್ತಿಯೊಬ್ಬರ ಮೇಲೆ ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವುದಾಗಿ ಆರೋಪಿಸಿ ಹಲ್ಲೆ ನಡೆಸಿದ ಘಟನೆ ಹೆಬ್ರಿಯಲ್ಲಿ ವರದಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ನಾಲ್ಕೂರು ಗ್ರಾಮದ ವಿಠಲ ಎಂದು ಗುರುತಿಸಲಾಗಿದೆ. ಕೆಂಜೂರು ಜಯಕರ ಶೆಟ್ಟಿ ಎಂಬವರೇ ಹಲ್ಲೆ ನಡೆಸಿದ ಆರೋಪಿ. ವಿಠಲ ಅವರು ಮುದ್ದೂರಿಗೆ ಹೋಗುವ ಸಂದರ್ಭದಲ್ಲಿ ಜಯಕರ ಅವರು ಪಾದೆ ಮಠದಲ್ಲಿ ನಡೆದ ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವುದಾಗಿ ಆರೋಪ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾಗಿ ವಿಠಲ ಅವರು ಹೆಬ್ರಿ ಠಾಣೆಗೆ ದೂರು ನೀಡಿರುವುದಾಗಿದೆ.

ಕೋಳಿ ಅಂಕಕ್ಕೆ ದಾಳಿ ಮಾಡಿಸಿದ್ದಾಗಿ ಆರೋಪಿಸಿ ವ್ಯಕ್ತಿಯ ಮೇಲೆ ಹಲ್ಲೆ: ದೂರು ದಾಖಲು Read More »

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಬ್ಬಿನ ತೋಟವೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ‌ಸುಜಾತಾ ಪವಾರ(34) ಎಂದು ಗುರುತಿಸಲಾಗಿದೆ. ಸುಜಾತಾರನ್ನು ಮಾ. 5 ರಂದು ಅಥಣಿ ಪಟ್ಟಣದ ಪ್ರದೀಪ್ ಗುಂಡ ಎಂಬವರ ಕಬ್ಬಿನ ತೋಟದಲ್ಲಿ ಹತ್ಯೆ ಮಾಡಲಾಗಿದೆ. ಸುಜಾತಾ ತನ್ನ ಗಂಡನ ಜೊತೆಗೆ ಸಂಬಂಧ ಮುರಿದುಕೊಂಡು ‌ಅಥಣಿಯ ತನ್ನ ತವರಿನಲ್ಲಿ ಜೀವನ ನಡೆಸುತ್ತಿದ್ದರು. ಈ‌ ಸಂದರ್ಭದಲ್ಲಿ ಕುಮಾರ್ ಹವಾಲ್ದಾರ್ ಎಂಬಾತನ ಜೊತೆಗೆ ಆಕೆಗೆ ನಂಟು ಬೆಳೆದಿತ್ತು. ಮಹಿಳೆಯ ಆಸ್ತಿ ಕಬಳಿಸಿ ಕುಮಾರ್

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ Read More »

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ಶಾಸಕರು ಪ್ರಶ್ನೆಗಳಿಗೆ ವಿಧಾನಸಭಾ ಅಧಿವೇಶನದಲ್ಲಿ ಸಚಿವರು ಸೂಕ್ತ ಉತ್ತರ ನೀಡದೇ ಇದ್ದು, ಸಚಿವರ ನಡೆಗೆ ಅಸಮಾಧಾನ ಸೂಚಿಸಿ ಸ್ಪೀಕರ್ ಯು.ಟಿ. ಖಾದರ್ ಸದನ ಮುಗಿಸಲು ಕಾಲ ಮಿತಿ ನೀಡದೆ ಪೀಠ ಬಿಟ್ಟು ನಡೆದ ಘಟನೆ ನಡೆದಿದೆ. ಸಚಿವ ಪರಮೇಶ್ವರ್ ಅವರು ಸದನದಲ್ಲಿ ಉತ್ತರ ಮಂಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಟೀಕೆ ಆರಂಭ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿರೋಧ ವ್ಯಕ್ತಪಡಿಸಿ, ನಿಯಮಾವಳಿಗಳನ್ನು ಸರ್ಕಾರ ಪಾಲನೆ ಮಾಡುತ್ತಿಲ್ಲ. ಸದನದಲ್ಲಿ ನಿರ್ಧಿಷ್ಟ ಉತ್ತರ

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್ Read More »

error: Content is protected !!
Scroll to Top