ರಾಜ್ಯ

ಮನೆಗೇ ಬಂದು ಬಿಪಿ, ಶುಗರ್‌ ತಪಾಸಣೆ

ಗೃಹ ಆರೋಗ್ಯ ಯೋಜನೆಗೆ ನಾಳೆ ಚಾಲನೆ ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ಶುಕ್ರವಾರ ಪ್ರಾರಂಭಿಸಲು ಸಿದ್ಧವಾಗಿದೆ. ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು (ಎನ್‌ಸಿಡಿ) ನಿಯಂತ್ರಿಸುವ ಗುರಿಯನ್ನು ಹೊಂದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ಶುಕ್ರವಾರ ಚಾಲನೆ ನೀಡಲಿದ್ದು, ಜನವರಿಯಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎನ್‌ಸಿಡಿಗಳ ಸಂಭವವನ್ನು ಪರಿಹರಿಸುವುದು ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. […]

ಮನೆಗೇ ಬಂದು ಬಿಪಿ, ಶುಗರ್‌ ತಪಾಸಣೆ Read More »

ಕರ್ನಾಟಕದ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ?

ಟೆಂಟ್‌ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಮದ್ಯಪಾನ, ಮಾರಾಟಕ್ಕೆ ಅವಕಾಶ ಕೊಡಲು ಚಿಂತನೆ ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ.ವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ. ಬೀಚ್‌ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು

ಕರ್ನಾಟಕದ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ? Read More »

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಸಿ.ಪಿ.ಯೋಗೇಶ್ವರ್‌

ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಮಾಡಿದ ತಂತ್ರಗಾರಿಕೆಗೆ ಮೊದಲ ಯಶಸ್ಸು ಬೆಂಗಳೂರು: ನಿರೀಕ್ಷಿಸಿದಂತೆ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದರು. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ವಿಚಾರದಲ್ಲಿ ಡಿಕೆಶಿ ಮಾಡಿದ ತಂತ್ರಗಾರಿಕೆ ಸದ್ಯಕ್ಕಂತೂ ಯಶಸ್ವಿಯಾಗಿದೆ.ಕಾಂಗ್ರೆಸ್ ಸೇರ್ಪಡೆಗೆ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಸಿ.ಪಿ.ಯೋಗೇಶ್ವರ್‌ Read More »

ಬೆಳ್ಳಂಬೆಳಗ್ಗೆ ಡಿಕೆಶಿ ಮನೆಗೆ ಭೇಟಿಯಿತ್ತ ಸಿ.ಪಿ.ಯೋಗೀಶ್ವರ್‌

ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತ ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯಾಗಲು ಪಟ್ಟುಹಿಡಿದಿರುವ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿದ್ದಾರೆ. ಯೋಗೀಶ್ವರ್‌ ಕಾಂಗ್ರೆಸ್‌ ಸೇರಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹವನ್ನು ಈ ಬೆಳವಣಿಗೆ ಬಹುತೇಕ ದೃಢಪಡಿಸಿದೆ.ಎಚ್‌.ಡಿ.ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿರುವ ಕಾರಣ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಖಾಲಿಯಾಗಿದೆ. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿರುವುದರಿಂದ ಈ ಕ್ಷೇತ್ರವನ್ನು ತನಗೆ ಕೊಡಬೇಕೆಂದು ಜೆಡಿಎಸ್‌ ಪಟ್ಟುಹಿಡಿದಿತ್ತು. ಚನ್ನಪಟ್ಟಣದಿಂದ ಸ್ಪರ್ಧಿಸಲೇ ಬೇಕೆಂದು ಯೋಗೀಶ್ವರ್‌ ಪಟ್ಟುಹಿಡಿದಿದ್ದ

ಬೆಳ್ಳಂಬೆಳಗ್ಗೆ ಡಿಕೆಶಿ ಮನೆಗೆ ಭೇಟಿಯಿತ್ತ ಸಿ.ಪಿ.ಯೋಗೀಶ್ವರ್‌ Read More »

ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ

ವಿದ್ಯುತ್‌, ಇಂಟರ್‌ನೆಟ್‌ ಸಂಪರ್ಕವಿಲ್ಲದೆ ಜನರ ಪರದಾಟ ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರ ಕಂಡು ಕೇಳರಿಯದ ಮಳೆಯ ಆರ್ಭಟ ಎದುರಿಸುತ್ತಿದೆ. ಭಾರಿ ಮಳೆಯಿಂದಾಗಿ ನಗರದ ಜನಜೀವನ ಪೂರ್ತಿ ಅಸ್ತವ್ಯಸ್ತಗೊಂಡಿದ್ದು, ಜನರು ಮನೆಯಿಂದ ಹೊರಗಿಳಿಯಲು ಸಾಧ್ಯವಾಗದ ಪರಿಸ್ಥಿತಿಯಿದೆ. ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ. ಭಾರಿ ಮಳೆಯಿಂದಾಗಿ 10 ಲೇಔಟ್‌ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ನೀರಿನಿಂದ ಆವೃತವಾದ ಪ್ರದೇಶಗಳ ಜನರನ್ನು

ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ Read More »

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು

ವಿಜಯನಗರ: ಕಲುಷಿತ ನೀರು ಕುಡಿದು ವಾಂತಿಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಮೃತಪಟ್ಟಿದೆ.ಗ್ರಾಮಕ್ಕೆ ಕಳೆದ 15 ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಇದನ್ನು ತಿಳಿಯದೆ ಗ್ರಾಮಸ್ಥರು ನೀರು ಕುಡಿಯುತ್ತಿದ್ದಾರೆ. ಇದರಿಂದ ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಆಸ್ಪತ್ರೆಗೆ

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು Read More »

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ

ಭಾರಿ ಮಳೆಗ ಕುಸಿದು ಬಿದ್ದ ನಿರ್ಮಾಣ ಹಂತದ 7 ಅಂತಸ್ತಿನ ಕಟ್ಟಡ ಬೆಂಗಳೂರು: ಭಾರಿ ಮಳೆ ಬೆಂಗಳೂರಿನಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ್ದು, ನಿನ್ನೆ ಸಂಜೆ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 7 ಮಹಡಿಯ ಕಟ್ಟಡ ಕುಸಿದಿತ್ತು. ಓರ್ವನ ಶವ ನಿನ್ನೆಯೆ ಸಿಕ್ಕಿತ್ತು. ಉಳಿದವರ ಶವಗಳನ್ನು ಮಧ್ಯರಾತ್ರಿಗಾಗುವಾಗ ಹೊರತೆಗೆಯಲಾಗಿದೆ. ಮೃತರೆಲ್ಲ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ ಕಾರ್ಮಿಕರು.ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆ ಮತ್ತು ರಕ್ಷಣಾ ಕಾರ್ಯ ನಡೆದಿದೆ.

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ Read More »

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ

ಫಲಾನಭವಿಗಳ ಖಾತೆಗೆ ಹಣ ವರ್ಗಾವಣೆ ವ್ಯವಸ್ಥೆಯಲ್ಲಿ ಬದಲಾವಣೆಯಿಲ್ಲ ಬೆಂಗಳೂರು : ಅನ್ನಭಾಗ್ಯ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ. ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಸದ್ಯಕ್ಕೆ ಮುಂದುವರಿಯಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯಕ್ಕೆ ಕೆಜಿಗೆ 28 ರೂ.ಯಂತೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ. ಆದರೆ ಸದ್ಯಕ್ಕೆ ಫಲಾನುಭವಿಗಳ

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ

ಹೊಸದಿಲ್ಲಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧವಿರುವಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​​ಗೆ ಅರ್ಜಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ Read More »

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸದಿದ್ದರೆ ಬೀಳಲಿದೆ ದಂಡ ಬೆಂಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿಪಿಎಲ್‌) ಪಡಿತರ ಚೀಟಿ ಹೊಂದಿದ್ದಿದ್ದರೆ ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್ ನೀಡದಿದ್ದರೆ ಕಾನೂನು ಕ್ರಮದ ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣೆ ನಡೆಯುತ್ತಿದ್ದು, ಅನರ್ಹವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ Read More »

error: Content is protected !!
Scroll to Top