ರಾಜ್ಯ

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ

ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿ ಎಂದು ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಹೊಸದಾಗಿ 50 ಲಕ್ಷ ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ. ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ಬಿಜೆಪಿಗೆ ನೋಂದಣಿಯಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅಧ್ಯಕ್ಷತೆಯಲ್ಲಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ, ಪದಾಧಿಕಾರಿಗಳ ಸಹಕಾರ ಹಾಗೂ ಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. […]

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ Read More »

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಸಚಿವ ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಅರ್ಧ ಪಾಕಿಸ್ಥಾನ ಹೇಳಿಕೆ ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್​ ಅವರ ಪತ್ನಿ ತಬಸ್ಸುಮ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ನಿನ್ನೆ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ್ದಾರೆ.ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ Read More »

ಮಳೆ ನೀರನ್ನು ವಾಪಸ್‌ ಆಕಾಶಕ್ಕೆ ಕಳಿಸಕ್ಕೆ ಆಗುತ್ತಾ?

ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಪರಮೇಶ್ವರ್‌ ಉಡಾಫೆ ಹೇಳಿಕೆ ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತವಾಗಿ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಬೆಂಗಳೂರಲ್ಲಿ ಕೆಲ ದಿನಗಳಿಂದ ಭೀಕರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮನೆ, ಅಂಗಡಿ, ಮಾಲ್‌ಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ರಸ್ತೆಗಳು ಹದಗೆಟ್ಟು ಓಡಾಡದ ಪರಿಸ್ಥಿತಿ ಉಂಟಾಗಿದೆ. ಜನರು ಸಮರ್ಪಕ ವ್ಯವಸ್ಥೆ ಮಾಡದ ಸರಕಾರ ಮತ್ತು ಬಿಬಿಎಂಪಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹ ಸಚಿವ

ಮಳೆ ನೀರನ್ನು ವಾಪಸ್‌ ಆಕಾಶಕ್ಕೆ ಕಳಿಸಕ್ಕೆ ಆಗುತ್ತಾ? Read More »

ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. 20ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ಮನೆ ಕಡೆ ತೆರಳಿದರು.ಜೈಲಿನಿಂದ ಮುನಿರತ್ನ ಬಿಡುಗಡೆಯಾದ ಹಿನ್ನೆಲೆಯಲ್ಲಿ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಮಂಗಳವಾರ ಜಾಮೀನು ನೀಡಿ 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ

ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ Read More »

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು

ಕಡಬದ ಇಬ್ಬರು ಯುವಕರ ಮೇಲಿನ ಪ್ರಕರಣ ವಜಾಗೊಳಿಸಿದ ನ್ಯಾಯಾಲಯ ಬೆಂಗಳೂರು : ಮಸೀದಿಯೊಳಗೆ ಜೈ ಶ್ರೀ ರಾಮ್ ಎಂದು ಕೂಗುವುದರಿಂದ ಯಾರದ್ದೇ ಧಾರ್ಮಿಕ ಭಾವನೆಗೆ ಅಪಚಾರವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿ ಕಡಬದ ಬಿಳಿನೆಲೆಯ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಕೇಸನ್ನು ವಜಾಗೊಳಿಸಿದೆ. ಕಳೆದ ತಿಂಗಳು ಈ ತೀರ್ಪು ನೀಡಲಾಗಿದ್ದು, ಕೋರ್ಟಿನ ವೆಬ್‌ಸೈಟಿನಲ್ಲಿ ಮಂಗಳವಾರ ಅಪ್‌ಲೋಡ್‌ ಮಾಡಲಾಗಿದೆ.ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ತೀರ್ಪು ನೀಡಿ ಕಡಬ ಬಿಳಿನೆಲೆ ನಿವಾಸಿಗಳಾದ ಕೀರ್ತನ್ ಕುಮಾರ್ ಮತ್ತು ಸಚಿನ್

ಮಸೀದಿಯೊಳಗೆ ಜೈ ಶ್ರೀರಾಮ್‌ ಕೂಗುವುದು ಧಾರ್ಮಿಕ ಅಪಚಾರವಲ್ಲ : ಹೈಕೋರ್ಟ್‌ ತೀರ್ಪು Read More »

ಉಪಚುನಾವಣೆ : ಪ್ರತಿಷ್ಠೆಯೇ ಪಣ

ಗೆದ್ದು ಬೀಗುವ ತವಕದಲ್ಲಿ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಬೆಂಗಳೂರು: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆ ಜೊತೆಗೆ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೂ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡುವುದರೊಂದಿಗೆ ರಾಜ್ಯದಲ್ಲೂ ಚುನಾವಣಾ ಕಾವು ಶುರುವಾಗಿದೆ.ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಈ ಮೂರು ಕ್ಷೇತ್ರಗಳು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಕ್ಷೇತ್ರಗಳು. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ವಿವಿಧ ಹಗರಣಗಳ ಕುರಿತಂತೆ ತೀವ್ರ

ಉಪಚುನಾವಣೆ : ಪ್ರತಿಷ್ಠೆಯೇ ಪಣ Read More »

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು

ಅರ್ಕಾವತಿ ಲೇಔಟ್‌ನಲ್ಲಿ ಅಕ್ರಮ ಎಸಗಿರುವ ಆರೋಪ ಬೆಂಗಳೂರು : ಹಗರಣಗಳು ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನು ಬಿಡುವಂತೆ ಕಾಣಿಸುತ್ತಿಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಸುಳಿಯಲ್ಲಿ ಸಿಲುಕಿ ಹೈರಾಣಾಗಿರುವ ಸಿದ್ದರಾಮಯ್ಯ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬವರು ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು ಅಧಿಕಾರ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು Read More »

ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸೆರೆಯಾಗಿರುವ ನಾಗೇಂದ್ರ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಬಂಧನಲ್ಲಿರುವ ಮಾಜಿ ಸಚಿವ ನಾಗೇಂದ್ರಗೆ ನಿನ್ನೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.ಜುಲೈ 12ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ

ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ Read More »

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಎಂದು ಟೀಕೆ ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಸ್‌ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಶಾಸಕರಾದ ಎಸ್‌.ಆರ್ ವಿಶ್ವನಾಥ್, ಸಿ.ಕೆ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಸಂಸದ ಕಾರಜೋಳ, ಎಂಎಲ್‌ಸಿ ರವಿಕುಮಾರ್ ಮೊದಲಾದ ನಾಯಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಚಾರ್ಮಾಡಿ ಘಾಟಿಗೆ ಕಾದಿದೆ ಅಪಾಯ : ಜಿಯೋಲಾಜಿಕಲ್‌ ಸರ್ವೆ ವರದಿ ಎಚ್ಚರಿಕೆ

ಅವೈಜ್ಞಾನಿಕ ಕಾಮಗಾರಿ, ವಾಹನ ದಟ್ಟಣೆಯಿಂದ ಆಗಾಗ ಭೂ ಕುಸಿತ ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಬೆಟ್ಟ ಪ್ರದೇಶಗಳು ಅಪಾಯವನ್ನು ಎದುರಿಸುತ್ತಿವೆ ಎಂದು ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ವರದಿ ತಿಳಿಸಿದೆ. ಈ ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಪದೇಪದೆ ಭೂಕುಸಿತ ಸಂಭವಿಸಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಆಗಾಗ ತೊಡಕುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಪಶ್ಚಿಮ ಘಟ್ಟದ ಅಧ್ಯಯನ ನಡೆಸಿ ವರದಿ ನೀಡಿದೆ.

ಚಾರ್ಮಾಡಿ ಘಾಟಿಗೆ ಕಾದಿದೆ ಅಪಾಯ : ಜಿಯೋಲಾಜಿಕಲ್‌ ಸರ್ವೆ ವರದಿ ಎಚ್ಚರಿಕೆ Read More »

error: Content is protected !!
Scroll to Top