ರಾಜ್ಯ

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ?

ಸರಕಾರದ ಇಮೇಜ್‌ ಸುಧಾರಣೆಗೆ 7-8 ಸಚಿವರನ್ನು ಕೈಬಿಡಲು ಚಿಂತನೆ ಬೆಂಗಳೂರು : ಉಪಚುನಾವಣೆ ಮುಗಿದ ಬಳಿಕ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡಿ ಸರಕಾರದ ಇಮೇಜ್‌ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡಲಾರಂಭಿಸಿದೆ. ಬರೀ ಒಂದೂವರೆ ವರ್ಷದ ಆಡಳಿತದಲ್ಲಿ ಕಾಂಗ್ರೆಸ್‌ ಸರಕಾರ ಇನ್ನಿಲ್ಲದ ಹಿನ್ನಡೆಯನ್ನು ಅನುಭವಿಸಿದೆ. ಭ್ರಷ್ಟಾಚಾರದ ಕಳಂಕ ಸರಕಾರಕ್ಕೆ ಮೆತ್ತಿಕೊಂಡಿದ್ದು, ಹಲವು ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನವಿದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯ ಮತ್ತು ಆರೋಪ ಹೊತ್ತಿರುವ ಸಚಿವರನ್ನು ಬದಲಾಯಿಸಿ ಆಡಳಿತವನ್ನು ಚುರುಕುಗೊಳಿಸಲು […]

ಮುಂದಿನ ತಿಂಗಳು ಸಂಪುಟಕ್ಕೆ ಸರ್ಜರಿ? Read More »

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ

ಕುಮಾರಸ್ವಾಮಿಯವರನ್ನು ಕರಿಯ ಎಂದು ಹೀಯಾಳಿಸಿದ್ದ ಜಮೀರ್‌ ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘ ಹಾಗೂ ಸಭಾದ ಪದಾಧಿಕಾರಿಗಳು, ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಜಮೀರ್‌ ಆಡಿರುವ ಮಾತು ಅದು ಇಡೀ ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನ. ಇಂತಹ ಮಾತುಗಳು ಸಚಿವರಾದವರಿಗೆ

ಸಂಪುಟದಿಂದ ಜಮೀರ್‌ ಖಾನ್‌ರನ್ನು ಕಿತ್ತು ಹಾಕಲು ಒಕ್ಕಲಿಗರ ಸಂಘ ಒತ್ತಾಯ Read More »

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ

ಕೊನೇ ಕ್ಷಣದವರೆಗೂ ಮತದಾರರನ್ನು ಒಲಿಸಲು ಕಸರತ್ತು ಮಾಡಿದ ಪಕ್ಷಗಳು ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆಗೆ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಬಂದಿದೆ. ಮೂರೇ ಕ್ಷೇತ್ರವಾಗಿದ್ದರೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿನ ಹೋರಾಟದ ಪರಿಣಾಮವಾಗಿ ಈ ಉಪಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್‌ ತನ್ನ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎನ್ನುವುದನ್ನು ಈ ಉಪಚುನಾವಣೆಯ ಮೂರೂ ಸ್ಥಾನಗಳನ್ನು ಗೆದ್ದು

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ Read More »

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ

ಕೆಕೆಆರ್‌ಡಿಬಿಯ 300 ಕೋ. ರೂ. ಅನುದಾನ ದುರ್ಬಳಕೆ ಆರೋಪ ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2020-2023ರಲ್ಲಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಿದ 300 ಕೋಟಿ ಅನುದಾನದಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವ ಮೂಲಕ ಕಾಂಗ್ರೆಸ್‌ ಸರಕಾರ ಬಿಜೆಪಿಯನ್ನು ಹಣಿಯಲು ಇನ್ನೊಂದು ಅಸ್ತ್ರ ರೆಡಿ ಮಾಡಿದೆ. ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಕ್ರಮದ ಕುರಿತು ತನಿಖೆಗೆ ಆದೇಶ ಹೊರಡಿಸಿ ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ ಮತ್ತೊಂದು ಹಗರಣದ ತನಿಖೆಗೆ

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ Read More »

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ

ಅರಣ್ಯ ಒತ್ತುವರಿ ತೆರವು ಆದೇಶದ ಬಳಿಕ ನಕ್ಸಲರು ಸಕ್ರಿಯ? ಕೊಪ್ಪ : ಕಾರ್ಕಳ ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕ್ಸಲ್‌ ಓಡಾಟದ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ಪಡೆಯವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾಡಂಚಿನಲ್ಲಿರುವ ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಈ ಭಾಗದಲ್ಲಿ ನಕ್ಸಲರು ಓಡಾಡಿದ ಅನುಮಾನವನ್ನು ದೃಢಪಡಿಸುತ್ತದೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಕ್ಸಲರು ಓಡಾಡಿದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದಕ್ಕೂ ಎರಡು ದಿನ ಮೊದಲು ಕಾರ್ಕಳದ ಈದು ಪರಿಸರದಲ್ಲೂ ಇದೇ ಮಾದರಿಯ ಸುದ್ದಿ

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ Read More »

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ

ಘಟಾನುಘಟಿಗಳಿಂದ ಭರ್ಜರಿ ಮತಯಾಚನೆ ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿವೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ Read More »

ಸಂಡೂರು ಉಪಚುನಾವಣೆ | ಮತದಾರರ ಬೃಹತ್ ಸಮಾವೇಶ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ  ಭಾಗವಹಿಸಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು

ಸಂಡೂರು ಉಪಚುನಾವಣೆ | ಮತದಾರರ ಬೃಹತ್ ಸಮಾವೇಶ Read More »

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ

ಹೈಕೋರ್ಟ್‌ ತೀರ್ಪು ಟೀಕಿಸಿದ ಜಮೀರ್‌ ವಿರುದ್ಧ ಕ್ರಮಕ್ಕೆ ಸೂಚನೆ ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ Read More »

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ

ಪ್ರಯಾಣ ಸಮಯ 3-4 ತಾಸಿಗಿಳಿಸಲು ಹೈಸ್ಪೀಡ್‌ ರೋಡ್‌ ನಿರ್ಮಾಣದ ಪ್ರಸ್ತಾವ ಬೆಂಗಳೂರು : ಎಲ್ಲ ಅಂದುಕೊಂಡಂತೆ ನಡೆದರೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣ ಸುಲಭವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮಾದರಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಯೋಜನೆಯ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.ಬೆಂಗಳೂರು-ಮಂಗಳೂರು ಮಧ್ಯೆ ಸುಮಾರು 400 ಕಿ.ಮೀ. ಅಂತರವಿದೆ. ಬಸ್‌ನಲ್ಲಿ ಪ್ರಯಾಣಕ್ಕೆ 7-8 ತಾಸು ಸಮಯ ಬೇಕಾಗುತ್ತದೆ. ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ Read More »

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ

ವೋಟಿನ ಆಸೆಗೆ ನಮ್ಮವರೇ ಕೊಟ್ಟ ವರ ಎಂದು ಆರೋಪ ಚಿಕ್ಕಮಗಳೂರು: ರೈತರ, ಮಠ, ದೇವಸ್ಥಾನಗಳ ಜಮೀನು ಕಬಳಿಸುತ್ತಿರುವ ವಕ್ಫ್‌ ಬೋರ್ಡನ್ನು ಬಿಜೆಪಿ ನಾಯಕ ಸಿ.ಟಿ.ರವಿ ಭಸ್ಮಾಸರನಿಗೆ ಹೋಲಿಸಿದ್ದಾರೆ. ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜ ಒಂದಾಗಬೇಕು ಎಂದು ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ಹೇಳಿದ್ದಾರೆ.ಚಿಕ್ಕಮಗಳೂರಿನ ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಮಾತನಾಡಿದ ಅವರು, ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ ವರ ಕೊಟ್ಟರು. ಹಿಂದಿನ

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ Read More »

error: Content is protected !!
Scroll to Top