ರಾಜ್ಯ

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌

2025-26ನೇ ಸಾಲಿನಲ್ಲಿ ಹರಿದು ಬಂತು 167.89 ಕೋಟಿ ರೂ. ಆದಾಯ ಸುಬ್ರಹ್ಮಣ್ಯ : ಕರ್ನಾಟಕ ಮುಜರಾಯಿ ಇಲಾಖೆಯಡಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯ ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ […]

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌ Read More »

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ

ಬಾಂಬ್‌ ತಯಾರಿಸಲು ಬಳಸುವ ಜಿಲೆಟಿನ್‌ ಕಡ್ಡಿಗಳು ರಸ್ತೆಯಲ್ಲಿ ಪತ್ತೆ ಬೆಂಗಳೂರು: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾನುವಾರ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ Read More »

ಇಂದು ಚಳ್ಳಕೆರೆಯಲ್ಲಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ

ಶ್ವಾಸಕೋಶದ ಸೋಂಕಿನಿಂದ ಭಾನುವಾರ ನಿಧನ ಹೊಂದಿರುವ ಸಚಿವ ಚಳ್ಳಕೆರೆ: ನಿನ್ನೆ ತೀರಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ ಅವರ ಕುಟುಂಬದ ಇಚ್ಚೆಯಂತೆ ಜೈನ ಸಮುದಾಯದ ಸಂಪ್ರದಾಯದ ಪ್ರಕಾರ ಚಳ್ಳಕೆರೆಯ ಚಿತ್ರದುರ್ಗ ರಸ್ತೆಯ ಸಚಿವರ ಸೆಟಲ್‌ ಬ್ಯಾಡ್ಮಿಂಟನ್‌ ಕೋರ್ಟ್‌ ಆವರಣದಲ್ಲಿ ಸೋಮವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿಕಿತ್ಸೆ ಫಲಿಸದೆ

ಇಂದು ಚಳ್ಳಕೆರೆಯಲ್ಲಿ ಸಚಿವ ಡಿ.ಸುಧಾಕರ್‌ ಅಂತ್ಯಕ್ರಿಯೆ Read More »

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಂದಿದ್ದ ಹೆಂಡತಿ ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇಬ್ಬರಿಗೂ 14 ಲಕ್ಷ ರೂ. ದಂಡ ಹಾಗೂ ದೂರುದಾರರಿಗೆ ಪರಿಹಾರವಾಗಿ 5 ಲಕ್ಷ ರೂ. ನೀಡುವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು

ಗಂಡನನ್ನು ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ Read More »

ಸೋಮವಾರದಿಂದ ಹೊಸ ಅಬಕಾರಿ ನೀತಿ ಜಾರಿ

ಹೆಚ್ಚು ಕಿಕ್‌ ಕೊಡುವ ಕಡಿಮೆ ಬೆಲೆಯ ಮದ್ಯದ ಬೆಲೆ ಏರಿಕೆ ಬೆಂಗಳೂರು: ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (ಎಐಬಿ) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕ ದೇಶದಲ್ಲೇ ಮೊದಲ

ಸೋಮವಾರದಿಂದ ಹೊಸ ಅಬಕಾರಿ ನೀತಿ ಜಾರಿ Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ

ತಡರಾತ್ರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ ಬೆಂಗಳೂರು: ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಹೋಟೆಲ್‌ಗೆ ಬೆಂಕಿ ತಗುಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ದರು. ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಗೂ ಹಬ್ಬಿದ್ದು, ತಕ್ಷಣ ಅಲ್ಲಿದ್ದ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ Read More »

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ

ಮುಗಿಯದ ಅಂಚೆ ಮತಗಳ ಮರು ಎಣಿಕೆ ತಕರಾರು ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್‌ನ ಟಿ.ಡಿ ರಾಜೇಗೌಡ ಸುಪ್ರೀಂ ಕೋರ್ಟ್​ ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಕಾನೂನು ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ Read More »

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು

ಅರಂತೋಡು: ಸುಳ್ಯ ಮಾರ್ಗವಾಗಿ ಬೆಂಗಳೂರಿನಿಂದ ಕುಕ್ಕೆಗೆ ಹೋಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದು, ಬಸ್ಸು ಬರೆಗೆ ಗುದ್ದಿ ‌ನಿಂತ ಪರಿಣಾಮ ಅದೃಷ್ಟವಶಾತ್ ಪ್ರಯಾಣಿಕರು ಪಾರಾದ ಘಟನೆ ಕಾಟಕೇರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತ ಚಾಲಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗುರುವಾರ ರಾತ್ರಿ ಈ ಬಸ್ಸು ಸುಳ್ಯದತ್ತ ಹೊರಟಿತ್ತು. ಶುಕ್ರವಾರ ಮುಂಜಾನೆ ವೇಳೆ ಮಡಿಕೇರಿ ಕಳೆದು ಕಾಟಕೇರಿಯ ತಿರುವಿನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಬಸ್ಸು ನಿಯಂತ್ರಣ ಕಳೆದುಕೊಂಡು

ಚಲಿಸುತ್ತಿದ್ದ ಬಸ್‌ನ ಚಾಲಕ ಹೃದಯಾಘಾತದಿಂದ ಸಾವು: ಪ್ರಯಾಣಿಕರು ಅಪಾಯದಿಂದ ಪಾರು Read More »

ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ‌ ನಡೆಸಿದ ಕಾರು ಚಾಲಕ

ಮಂಗಳೂರು: ಸರ್ಕಾರಿ ಬಸ್ ಚಾಲಕರೊಬ್ಬರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಕಾರು ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಕಂಕನಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಬಸ್ಸು ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು. ಈ ವೇಳೆ ಸೈಡ್ ನೀಡುವ ವಿಚಾರಕ್ಕೆ ಸಂಬಂಧಿಸಿದ ಹಾಗೆ ವಳಚ್ಚಿಲ್ ಜಂಕ್ಷನ್‌ನಲ್ಲಿ ಕಾರು ಚಾಲಕ, ಬಸ್ ಚಾಲಕ ಪಿ. ಜಯರಾಮ್ ಅವರಿಗೆ ನಿಂದಿಸಿ, ಹಲ್ಲೆ ಮಾಡಿರುವುದಾಗಿದೆ.

ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ‌ ನಡೆಸಿದ ಕಾರು ಚಾಲಕ Read More »

ಮಾನಸಿಕ ಸಮಸ್ಯೆ: ಆತ್ಮಹತ್ಯೆಗೆ ಶರಣಾದ ಮಹಿಳೆ

ವಿಟ್ಲ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಕುಳ ಗ್ರಾಮದ ಕಂಪ ಶ್ರೀಧರ ಗೌಡ ಎಂಬವರ ಪತ್ನಿ ರಾಧಾ ಅಲಿಯಾಸ್ ಲತಾ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಮೃತರ ಸಹೋದರ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಲತಾ ಮತ್ತು ಶ್ರೀಧರ ಗೌಡ ಅವರಿಗೆ 13 ವರ್ಷಗಳ ಹಿಂದೆ ವಿವಾಹವಾಗಿ,‌ ಇಬ್ಬರು ಮಕ್ಕಳಿದ್ದಾರೆ. ಕಳೆದ ಸುಮಾರು 10 ವರ್ಷಗಳಿಂದ ಲತಾ‌ಗೆ ಮಾನಸಿಕ ಸಮಸ್ಯೆ ಇದ್ದು ಸೂಕ್ತ ಚಿಕಿತ್ಸೆ

ಮಾನಸಿಕ ಸಮಸ್ಯೆ: ಆತ್ಮಹತ್ಯೆಗೆ ಶರಣಾದ ಮಹಿಳೆ Read More »

error: Content is protected !!
Scroll to Top