ರಾಜ್ಯ

ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ

ಬೆಂಗಳೂರು: ಶತಮಾನದ ಸಂತ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ (81 ವ.) ಅವರು ಜ. 2ರಂದು ಆಶ್ರಮದಲ್ಲಿ ಕೊನೆಯುಸಿರೆಳೆದರು.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ 4 ದಿನಗಳಿಂದ ಆಹಾರ ಸೇವನೆಯನ್ನು ನಿಲ್ಲಿಸಿದ್ದರು. ವಿಜಯಪುರ ಬಿ.ಎಲ್.ಡಿ.ಇ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ವಿಜಯಪುರ ಜಿಲ್ಲೆಯ ಬಿಜ್ಜರಗಿಯಲ್ಲಿ 1940 ಅ. 24ರಂದು ಜನಿಸಿದರು. ತಂದೆ ಓಗೆಪ್ಪಗೌಡ ಬಿರಾದಾರ, ತಾಯಿ ಸಂಗವ್ವ. ಬಾಲ್ಯದ ಹೆಸರು ಸಿದ್ಧಗೊಂಡ ಬಿರಾದಾರ. ಬಾಲ್ಯದಿಂದಲೇ ಆಧ್ಯಾತ್ಮಿಕ ಸೆಳೆತಕ್ಕೆ […]

ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನಕ್ಕೆ ಜನಸಾಗರ

ಮೋದಿ, ಬೊಮ್ಮಾಯಿ ಮತ್ತಿತರ ಗಣ್ಯರಿಂದ ಸಂತಾಪ ವಿಜಯಪುರ: ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ರಾತ್ರಿ ಲಿಂಗೈಕ್ಯರಾಗಿದ್ದು, ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಾಂಡಿತ್ಯಪೂರ್ಣ ತತ್ವಜ್ಞಾನಿಯ ಅಂತಿಮ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಬರುತ್ತಿದ್ದಾರೆ.ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸ್ರೀಗಳ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನಕ್ಕೆ ಜನಸಾಗರ Read More »

ಹೊಸ ವರ್ಷಾಚರಣೆ ವೇಳೆ ಯುವತಿಗೆ ಕಿರುಕುಳ

ಜನರ ಗುಂಪು ಚದುರಿಸಲು ಪೊಲೀಸರಿಂದ ಲಾಠಿಚಾರ್ಜ್‌ ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲವು ಕಿಡಿಗೇಡಿಗಳು ಯುವತಿಗೆ ಕಿರುಕುಳ ನೀಡಿರುವ ಘಟನೆಗಳು ನಡೆದಿದ್ದು, ಕೋರಮಂಗಲದಲ್ಲಿ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಿಯಕರನೊಂದಿಗೆ ಬಂದಿದ್ದ ಯುವತಿಯೊಬ್ಬಳಿಗೆ ಕಿಡಿಕೇಡಿಗಳು ಕಿರುಕುಳ ನೀಡಿದ್ದಾರೆ. ಈ ವೇಳೆ ಆಕೆಯ ಗೆಳೆಯ ದುಷ್ಕರ್ಮಿಗಳೊಂದಿಗೆ ಜಗಳಕ್ಕಿಳಿದಿದ್ದು, ಕೈಕೈ ಮಿಲಾಯಿಸಿದ್ದಾರೆ. ಆದರೆ, ಪೊಲೀಸರು ಬರುವಷ್ಟರದಲ್ಲಿ ಕಿಡಿಗೇಡಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಪಬ್ ಗಳಲ್ಲಿ ಭಾರಿ ಪ್ರಮಾಣದಲ್ಲಿ ಜನ ಸೇರಿದ್ದರು.ಕೋರಮಂಗಲದಲ್ಲಿ ಪಬ್‌ಗಳ ಒಳಗೆ

ಹೊಸ ವರ್ಷಾಚರಣೆ ವೇಳೆ ಯುವತಿಗೆ ಕಿರುಕುಳ Read More »

ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌

60 ಲ.ರೂ. ಬಹುಮಾನ ಬೆಂಗಳೂರು: ರಿಯಾಲಿಟಿ ಶೋ ಬಿಗ್‌ಬಾಸ್ 9ರ ನಟ ರೂಪೇಶ್ ಶೆಟ್ಟಿ ಗೆದ್ದಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.ಬಿಗ್

ರೂಪೇಶ್‌ ಶೆಟ್ಟಿ ಬಿಗ್‌ಬಾಸ್‌ ವಿನ್ನರ್‌ Read More »

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ

ಕೆಎಂಎಫ್‌-ಅಮುಲ್‌ ವಿಲೀನ ಪ್ರಸ್ತಾವಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ಬೆಂಗಳೂರು: ಕರ್ನಾಟಕದ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಅಮುಲ್ ಇಂಡಿಯಾ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ನಿಟ್ಟಿಗಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಷಾ ಅವರ ಸಲಹೆ ಕೆಎಂಎಫ್ ಅವಲಂಬಿಸಿರುವ 25 ಲಕ್ಷ ರೈತರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ವಿಲೀನವಾದರೆ ಕೆಎಂಎಫ್‌ ಆಡಳಿತ ಗುಜರಾತಿಗಳ ಕೈಗೆ Read More »

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಮೆಗಾ ಡೈರಿ ಉದ್ಘಾಟಿಸಿದ ನಿರ್ಮಲಾನಂದ ಶ್ರೀ | ಅಮಿತಾ ಶಾ, ದೇವೇಗೌಡ ಭಾಗಿ

ಬೆಂಗಳೂರು: ಮಂಡ್ಯದ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ವತಿಯಿಂದ ನೂತನವಾಗಿ ನಿರ್ಮಿಸಿರುವ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಪುಟ್ಟರಾಜು,

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಮೆಗಾ ಡೈರಿ ಉದ್ಘಾಟಿಸಿದ ನಿರ್ಮಲಾನಂದ ಶ್ರೀ | ಅಮಿತಾ ಶಾ, ದೇವೇಗೌಡ ಭಾಗಿ Read More »

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ

ಲಿಂಗಾಯತ, ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಬೆಳಗಾವಿ: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ಸರಕಾರ ತೆಗೆದುಕೊಂಡಿದೆ.ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ಯಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ಯಲ್ಲಿದ್ದ ಲಿಂಗಾಯತರಿಗೆ 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ

ಪಂಚಮಸಾಲಿ-ವೀರಶೈವ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಕೆ Read More »

ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ

ಪುತ್ತೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮಾಜದ ಸಾಧಕರ ಪರಿಚಯವನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ. ಜ. 8ರಂದು ಬೆಂಗಳೂರಿನ ಲಗ್ಗೆರೆ ಕೆಡಿಕೆ ನಮ್ಮನೆಯಲ್ಲಿ ಗೌಡ ಸಮಾಜದ ಹತ್ತು ಕುಟುಂಬ ಹದಿನೆಂಟು ಗೋತ್ರದ 5 ಸಾಧಕರಿಗೆ ಸನ್ಮಾನಿಸು ಕಾರ್ಯಕ್ರಮ ನಡೆಯಲಿದೆ. ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರ ಪರಿಚಯ ನೀಡಲು ಕೊನೆ ದಿನ ಡಿ.

ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ Read More »

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ

ಚುನಾವಣೆ ರಣತಂತ್ರಕ್ಕೆ ಮಾರ್ಗದರ್ಶನ ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.29 ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಖ್ಯವಾಗಿ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಶಾ ರಾಜ್ಯ ಭೇಟಿ ಬಳಿಕವೇ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆಯಿದೆ.ಶಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ. ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ

ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ Read More »

ಹೊಸ ವರ್ಷಾಚರಣೆ ರಾತ್ರಿ 1 ಗಂಟೆಯೊಳಗೆ ಮುಕ್ತಾಯ

ಕೊರೊನಾ ಹಿನ್ನೆಲೆಯಲ್ಲಿ ಮಾರ್ಗಸೂಚಿ ಹೊರಡಿಸಿದ ಸರಕಾರ ಬೆಂಗಳೂರು : ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಶಾಲಾ-ಕಾಲೇಜುಗಳು, ಮಾಲ್‌ಗಳು ಮತ್ತು ಚಿತ್ರಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿದೆ. ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ.ಹೊಸ ವರ್ಷಾಚರಣೆಗೂ ಕೆಲ ನಿಯಮಗಳನ್ನು ರೂಪಿಸಿದೆ. ಹೊಸ ವರ್ಷಾಚರಣೆ ಮಧ್ಯರಾತ್ರಿ 1 ಗಂಟೆಯೊಳಗೆ ಮುಗಿಯಬೇಕು. ಕೋವಿಡ್‌ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ

ಹೊಸ ವರ್ಷಾಚರಣೆ ರಾತ್ರಿ 1 ಗಂಟೆಯೊಳಗೆ ಮುಕ್ತಾಯ Read More »

error: Content is protected !!
Scroll to Top