ರಾಜ್ಯ

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು!

ಭಕ್ತರ ತೀವ್ರ ಆಕ್ರೋಶ, ಉದ್ವಿಗ್ನ ಪರಿಸ್ಥಿತಿ ವಿಜಯಪುರ: ಸಿಂದಗಿ ಪಟ್ಟಣದಲ್ಲಿರುವ 13ನೇ ಶತಮಾನದ ಮಠದ ಆಸ್ತಿ ಕೂಡ ಈಗ ವಕ್ಫ್‌ ಬೋರ್ಡ್‌ ಆಸ್ತಿ ಎಂದು ನೋಂದಣಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರೈತರ ನೂರಾರು ಎಕರೆ ಕೃಷಿಭೂಮಿ ವಕ್ಫ್‌ ಆಸ್ತಿ ಎಂದು ಪಹಣಿಯಾದ ಬೆನ್ನಿಗೆ ಮಠದ ಆಸ್ತಿಯೂ ವಕ್ಫ್‌ ಪಾಲಾಗಿರುವುದು ಬೆಳಕಿಗೆ ಬಂದಿದೆ. ಸರ್ವೆ ನಂಬರ್‌ 1020ರ ಆಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ. ಸಿದ್ದಲಿಂಗ ಸ್ವಾಮಿಜಿ ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂಬರ್‌ 11 ಖಾಲಿ […]

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು! Read More »

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ

ದಾವಣಗೆರೆ: ಜಿಲ್ಲೆಯ ನ್ಯಾಮತಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಕಳ್ಳರು ಬರೋಬ್ಬರಿ 17 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಕುರಿತು ಬ್ಯಾಂಕ್‌ ಮ್ಯಾನೇಜರ್‌ ಸುನಿಲ್‌ ಕುಮಾರ್‌ ಯಾದವ್‌ ಪೊಲೀಸರಿಗೆ ದೂರು ನೀಡಿದ್ದಾರೆ. 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.ನ್ಯಾಮತಿ ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಯ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ Read More »

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು

ನೂರಾರು ಎಕರೆ ಭೂಮಿ ಸದ್ದಿಲ್ಲದೆ ವಕ್ಫ್‌ಗೆ ವರ್ಗಾವಣೆಯಾದದ್ದು ಹೇಗೆ ಎಂಬ ಪ್ರಶ್ನೆ ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ವಿಸ್ತರಿಸಿದೆ. ಧಾರವಾಡ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೂರಾರು ರೈತರ ಕೃಷಿಭೂಮಿ ಅವರಿಗರಿವಿಲ್ಲದೆ ವಕ್ಫ್‌ ಬೋರ್ಡ್‌ಗೆ ವರ್ಗಾವಣೆಯಾಗಿದೆ. ಕಂದಾಯ ಇಲಾಖೆಯಿಂದ ನೋಟಿಸ್‌ ಬಂದ ಬಳಿಕ ಎಚ್ಚೆತ್ತಿರುವ ಇಲ್ಲಿನ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಧಾರವಾಡದಲ್ಲಿ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು Read More »

ಈಗ ಗೋಲ್‌ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು

ರುಚಿ ಹೆಚ್ಚಿಸಲು ಯೂರಿಯಾ, ಹಾರ್ಪಿಕ್‌ ಬಳಸುವ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ಬೆಂಗಳೂರು: ಗೋಬಿ ಮಂಚೂರಿ, ಕೇಕ್‌, ಬಾಂಬೆ ಮಿಠಾಯಿ ಇತ್ಯಾದಿ ತಿನಿಸುಗಳಲ್ಲಿರುವ ರಾಸಾಯನಿಕ ಅಂಶವನ್ನು ಪತ್ತೆಹಚ್ಚಿರುವ ಆರೋಗ್ಯ ಇಲಾಖೆಯ ಕಣ್ಣು ಈಗ ಜನಪ್ರಿಯ ಸ್ಟ್ರೀಟ್‌ ಫುಡ್‌ ಪಾನಿಪುರಿ ಮೇಲೆ ಬಿದ್ದಿದೆ. ಗೋಲ್‌ಗಪ್ಪಾ ಎಂದೂ ಕರೆಯಲಾಗುವ ಪಾನಿಪುರಿಯಲ್ಲಿ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದಾರೆ.ಕೆಲವು ರಾಜ್ಯಗಳಲ್ಲಿ ಗೋಲ್‌ಗಪ್ಪಾದ ರುಚಿ ಹೆಚ್ಚಿಸಲು ಅಪಾಯಕಾರಿ

ಈಗ ಗೋಲ್‌ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು Read More »

ವಕ್ಫ್‌ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ

ಕಾಂಗ್ರೆಸ್‌ನಿಂದಾಗಿ ವಕ್ಫ್‌ಗೆ ವಿಶೇಷ ಅಧಿಕಾರ ಎಂದು ಆರೋಪ ಬೆಂಗಳೂರು: ರೈತರ ಕೃಷಿ ಜಮೀನು ಕಿತ್ತುಕೊಳ್ಳುತ್ತಿರುವ ವಕ್ಫ್‌ ಮಂಡಳಿಯನ್ನು ನಿಷೇಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್

ವಕ್ಫ್‌ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ Read More »

ಅನಿಷ್ಟಗಳಿಗೆಲ್ಲ ಜಾತಿ ವ್ಯವಸ್ಥೆ ಕಾರಣ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

ಬಿ.ಕೆ.ಹರಿಪ್ರಸಾದ್‌ರ ಪುಡಿ ರಾಜಕಾರಣಿ ಟೀಕೆಗೆ ಶ್ರೀಗಳ ತಿರುಗೇಟು ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಕಡೆ ಎಲ್ಲ ವಲಯದಲ್ಲೂ ಜಾತಿ ವ್ಯವಸ್ಥೆಯನ್ನು ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಾತ್ಯಾತೀತ ಎಂದು ಹೇಳಿಕೊಳ್ಳುವಾಗ ಇಲ್ಲಿ ಜಾತಿ, ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪ್ರಶ್ನಿಸಿ ಶ್ರೀಗಳು ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಬಿ.ಕೆ ಹರಿಪ್ರಸಾದ್ ತನ್ನ ವಿರುದ್ಧ ಮಾಡಿದ

ಅನಿಷ್ಟಗಳಿಗೆಲ್ಲ ಜಾತಿ ವ್ಯವಸ್ಥೆ ಕಾರಣ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ Read More »

ಮಲ್ಟಿಪ್ಲೆಕ್ಸ್‌ಗಳಿಗೆ ಬೀಳಲಿದೆ ಮೂಗುದಾರ : ಟಿಕೆಟ್‌ ದರ ನಿಗದಿಗೆ ಮಾನದಂಡ

ಟಿಕೆಟ್‌ ದರ 250 ರೂ. ಮೀರದಂತೆ ಆದೇಶ ಹೊರಡಿಸುವ ಭರವಸೆ ಬೆಂಗಳೂರು : ಸಿಕ್ಕಾಪಟ್ಟೆ ಟಿಕೆಟ್‌ ದರ ವಸೂಲು ಮಾಡುವ ಮಲ್ಟಿಪ್ಲೆಕ್ಸ್‌ಗಳಿಗೆ ಮೂಗುದಾರ ಹಾಕಲು ಸರಕಾರ ಮುಂದಾಗಿದೆ. ಮುಂಬಯಿ ಬಿಟ್ಟರೆ ಕರ್ನಾಟಕದಲ್ಲೇ ಸಿನಿಮಾ ಟಿಕೆಟ್ ದರ ಹೆಚ್ಚಿದೆ. ರಾಜ್ಯದಲ್ಲಿ ಟಿಕೆಟ್ ದರ ನಿಗದಿಗೆ ಯಾವುದೇ ಮಾನದಂಡಗಳಿಲ್ಲರುವುದರಿಂದ ಮಲ್ಟಿಪ್ಲೆಕ್ಸ್‌ಗಳು ತಮಗಿಚ್ಚೆ ಬಂದಂತೆ ಟಿಕೆಟ್‌ ದರ ನಿಗದಿ ಮಾಡಿ ಪ್ರೇಕ್ಷಕರನ್ನು ಸುಲಿಯುತ್ತಿವೆ. ಸ್ಟಾರ್‌ ನಟರ ಸಿನೆಮಾ ಬಿಡುಗಡೆಯಾದರೆ ಟಿಕೆಟ್‌ ದರ 1000-1200 ಆಗುವುದೂ ಇದೆ. ಈ ಹಿನ್ನೆಲೆಯಲ್ಲಿ ಮಲ್ಟಿಪ್ಲೆಕ್ಸ್‌ಗಳ ಟಿಕೆಟ್‌

ಮಲ್ಟಿಪ್ಲೆಕ್ಸ್‌ಗಳಿಗೆ ಬೀಳಲಿದೆ ಮೂಗುದಾರ : ಟಿಕೆಟ್‌ ದರ ನಿಗದಿಗೆ ಮಾನದಂಡ Read More »

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ

ಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 20 ಲ.ರೂ. ವಸೂಲು ಮಾಡಲು ಯತ್ನಿಸಿದ ಕಾಂಗ್ರೆಸ್‌ ನಾಯಕಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ನ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಜಿಲ್ಲಾಧ್ಯಕ್ಷೆ ಮಂಜುಳಾ ಪಾಟೀಲ್‌ (32) ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲ್‌ (39) ವೀಡಿಯೊ ತುಣುಕುಗಳನ್ನು ತೋರಿಸಿ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಗುತ್ತೆದಾರ್‌ ನೀಡಿದ ದೂರಿನ ಪ್ರಕಾರ ಬೆಂಗಳೂರು ಸಿಸಿಬಿ ಪೊಲೀಸ್ದಂಪತಿಯನ್ನು ಬಂಧಿಸಿದ್ದಾರೆ.ಮಂಜುಳಾ ಪಾಟೀಲ್‌ ಮಾಜಿ

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ Read More »

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ

ರಾಹುಲ್‌ ಗಾಂಧಿ ಜೊತೆ ಅಪರಾಧಿ ಸೈಲ್‌ ಇರುವ ಫೋಟೊ ಟ್ವೀಟ್‌ ಮಾಡಿ ಲೇವಡಿ ಬೆಂಗಳೂರು: 200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಜೊತೆಗಿರುವ ಫೋಟೊ ಟ್ವೀಟ್‌ ಮಾಡಿ ವಿಪಕ್ಷ ನಾಯಕ ಆರ್‌. ಅಶೋಕ್‌ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ಎಕ್ಸ್​ನಲ್ಲಿ ರಾಹುಲ್ ಗಾಂಧಿ ಜೊತೆ ಸತೀಶ್ ಸೈಲ್ ಇರುವ ಫೋಟೊ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ Read More »

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ

ರಾತ್ರಿ 8ರಿಂದ 10ರ ನಡುವೆ ಹಸಿರು ಪಟಾಕಿ ಸುಡಬೇಕು ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ 2 ತಾಸು ಮಾತ್ರ ಪಟಾಕಿ ಸುಡಲು ಅವಕಾಶ ಸಿಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ರಾತ್ರಿ 8ರಿಂದ 10 ಗಂಟೆ ತನಕ ಹಸಿರು ಪಟಾಕಿ ಹೊಡೆಯಬೇಕು ಎಂದು ಸರಕಾರ ಆದೇಶ ನೀಡಿದೆ.ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಪಟಾಕಿ ಹೊಡೆಯಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಪರಿಸರಕ್ಕೆ ಹಾನಿಯಾಗುವ

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ Read More »

error: Content is protected !!
Scroll to Top