ರಾಜ್ಯ

ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ

ವಿದ್ಯುತ್‌, ಇಂಟರ್‌ನೆಟ್‌ ಸಂಪರ್ಕವಿಲ್ಲದೆ ಜನರ ಪರದಾಟ ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರ ಕಂಡು ಕೇಳರಿಯದ ಮಳೆಯ ಆರ್ಭಟ ಎದುರಿಸುತ್ತಿದೆ. ಭಾರಿ ಮಳೆಯಿಂದಾಗಿ ನಗರದ ಜನಜೀವನ ಪೂರ್ತಿ ಅಸ್ತವ್ಯಸ್ತಗೊಂಡಿದ್ದು, ಜನರು ಮನೆಯಿಂದ ಹೊರಗಿಳಿಯಲು ಸಾಧ್ಯವಾಗದ ಪರಿಸ್ಥಿತಿಯಿದೆ. ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ. ಭಾರಿ ಮಳೆಯಿಂದಾಗಿ 10 ಲೇಔಟ್‌ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ನೀರಿನಿಂದ ಆವೃತವಾದ ಪ್ರದೇಶಗಳ ಜನರನ್ನು […]

ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ Read More »

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು

ವಿಜಯನಗರ: ಕಲುಷಿತ ನೀರು ಕುಡಿದು ವಾಂತಿಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದ ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಮೃತಪಟ್ಟಿದೆ.ಗ್ರಾಮಕ್ಕೆ ಕಳೆದ 15 ದಿನಗಳಿಂದ ಕಲುಷಿತ ನೀರು ಸರಬರಾಜು ಆಗುತ್ತಿದೆ. ಇದನ್ನು ತಿಳಿಯದೆ ಗ್ರಾಮಸ್ಥರು ನೀರು ಕುಡಿಯುತ್ತಿದ್ದಾರೆ. ಇದರಿಂದ ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಆಸ್ಪತ್ರೆಗೆ

ಕಲುಷಿತ ನೀರು ಕುಡಿದು 8 ತಿಂಗಳ ಮಗು ಸಹಿತ ಐವರು ಸಾವು Read More »

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ

ಭಾರಿ ಮಳೆಗ ಕುಸಿದು ಬಿದ್ದ ನಿರ್ಮಾಣ ಹಂತದ 7 ಅಂತಸ್ತಿನ ಕಟ್ಟಡ ಬೆಂಗಳೂರು: ಭಾರಿ ಮಳೆ ಬೆಂಗಳೂರಿನಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ್ದು, ನಿನ್ನೆ ಸಂಜೆ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 7 ಮಹಡಿಯ ಕಟ್ಟಡ ಕುಸಿದಿತ್ತು. ಓರ್ವನ ಶವ ನಿನ್ನೆಯೆ ಸಿಕ್ಕಿತ್ತು. ಉಳಿದವರ ಶವಗಳನ್ನು ಮಧ್ಯರಾತ್ರಿಗಾಗುವಾಗ ಹೊರತೆಗೆಯಲಾಗಿದೆ. ಮೃತರೆಲ್ಲ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ ಕಾರ್ಮಿಕರು.ರಾತ್ರಿಯಿಡೀ ಅವಶೇಷಗಳಡಿ ಸಿಲುಕಿದವರ ಪತ್ತೆ ಮತ್ತು ರಕ್ಷಣಾ ಕಾರ್ಯ ನಡೆದಿದೆ.

ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 5ಕ್ಕೇರಿಕೆ Read More »

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ

ಫಲಾನಭವಿಗಳ ಖಾತೆಗೆ ಹಣ ವರ್ಗಾವಣೆ ವ್ಯವಸ್ಥೆಯಲ್ಲಿ ಬದಲಾವಣೆಯಿಲ್ಲ ಬೆಂಗಳೂರು : ಅನ್ನಭಾಗ್ಯ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ. ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಸದ್ಯಕ್ಕೆ ಮುಂದುವರಿಯಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯಕ್ಕೆ ಕೆಜಿಗೆ 28 ರೂ.ಯಂತೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ. ಆದರೆ ಸದ್ಯಕ್ಕೆ ಫಲಾನುಭವಿಗಳ

ಅನ್ನಭಾಗ್ಯ ಹಣ ವರ್ಗಾವಣೆ ಸದ್ಯ ಮುಂದುವರಿಕೆ : ಮುನಿಯಪ್ಪ Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ

ಹೊಸದಿಲ್ಲಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧವಿರುವಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​​ಗೆ ಅರ್ಜಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ Read More »

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸದಿದ್ದರೆ ಬೀಳಲಿದೆ ದಂಡ ಬೆಂಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (ಬಿಪಿಎಲ್‌) ಪಡಿತರ ಚೀಟಿ ಹೊಂದಿದ್ದಿದ್ದರೆ ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್ ನೀಡದಿದ್ದರೆ ಕಾನೂನು ಕ್ರಮದ ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣೆ ನಡೆಯುತ್ತಿದ್ದು, ಅನರ್ಹವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ವಾಪಸ್‌ ಮಾಡಲು ಸರಕಾರ ಆದೇಶ Read More »

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.ರೈಲು ಸಂಖ್ಯೆ 06597 ಎಸ್‌ಎಂವಿಟಿ ಬೆಂಗಳೂರು – ಕಾರವಾರ ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ಟ್ರೈನ್‌ ಅಕ್ಟೋಬರ್ 30ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು Read More »

ಮುಡಾ ಹಗರಣ : ಇ.ಡಿ. ಪರಿಶೀಲನೆ ಮುಕ್ತಾಯ

ಎರಡು ಬಾಕ್ಸ್‌ ದಾಖಲೆ ಒಯ್ದ ತನಿಖಾಧಿಕಾರಿಗಳು ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯಗೊಂಡಿದೆ. ಮೊದಲ ದಿನ ಬರೋಬ್ಬರಿ 12 ಗಂಟೆ ಮುಡಾದಲ್ಲಿ ಬೀಡುಬಿಟ್ಟು ತಪಾಸಣೆ ವಿಚಾರಣೆ ಪರಿಶೀಲನೆ ನಡೆಸಿದ್ದ ಇ.ಡಿ ಅಧಿಕಾರಿಗಳು ಎರಡನೇ ದಿನವೂ 17 ಗಂಟೆಗಳ ಕಾಲ ಮಾಹಿತಿ ಕಲೆಹಾಕಿದ್ದಾರೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರೆ, ಇನ್ನು ಕೆಲ ದಾಖಲೆಗಳನ್ನು ಹಾರ್ಡ್ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡು ಹೋಗಿದ್ದಾರೆ.ಮುಡಾದಿಂದ ಸಾವಿರಾರು ಪುಟಗಳ ದಾಖಲೆಗಳನ್ನು ಇಡಿ ವಶಕ್ಕೆ ಪಡೆದಿದೆ. ಎಲ್ಲ ಹಂತದ ಅಧಿಕಾರಿಗಳ

ಮುಡಾ ಹಗರಣ : ಇ.ಡಿ. ಪರಿಶೀಲನೆ ಮುಕ್ತಾಯ Read More »

ಉಳ್ಳಾಲ ಸಮೀಪ ರೈಲು ಹಳಿತಪ್ಪಿಸುವ ಯತ್ನ?

ರಾತ್ರಿ ಹಳಿ ಮೇಲೆ ಜಲ್ಲಿಕಲ್ಲು ಸುರಿದ ದುಷ್ಕರ್ಮಿಗಳು ಮಂಗಳೂರು : ಕಳೆದ ಕೆಲ ದಿನಗಳಿಂದ ದೇಶದ ಅಲ್ಲಲ್ಲಿ ದುಷ್ಕರ್ಮಿಗಳು ಹಳಿಯ ಮೇಲೆ ಗ್ಯಾಸ್‌ ಸಿಲಿಂಡರ್‌, ಮರದ ತುಂಡು, ಕಬ್ಬಿಣದ ಸರಳು ಇತ್ಯಾದಿಗಳನ್ನು ಇಟ್ಟು ರೈಲುಗಳ ಹಳಿ ತಪ್ಪಿಸಲು ಯತ್ನಿಸಿದ ಹಲವು ಘಟನೆಗಳು ವರದಿಯಾಗಿವೆ. ಬಹುತೇಕ ಘಟನೆಗಳಲ್ಲಿ ಚಾಲಕರ ಸಮಯ ಪ್ರಜ್ಞೆಯಿಂದಾಗಿ ದುರಂತಗಳು ಕೂದಲೆಳೆಯ ಅಂತರದಲ್ಲಿ ತಪ್ಪಿವೆ. ಈಗ ಇದೇ ಮಾದರಿಯ ಪ್ರಯತ್ನವೊಂದು ಮಂಗಳೂರು ಸಮೀಪ ತೊಕ್ಕೊಟ್ಟುವಿನಲ್ಲಿ ನಡದಿರುವ ಅನುಮಾನ ಉಂಟಾಗಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ

ಉಳ್ಳಾಲ ಸಮೀಪ ರೈಲು ಹಳಿತಪ್ಪಿಸುವ ಯತ್ನ? Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೂಡುಬಿದಿರೆಯ ಶಿಕ್ಷಕನಿಗೆ 5 ವರ್ಷ ಜೈಲು

ಹೋಮ್‌ವರ್ಕ್‌ ಪರೀಕ್ಷಿಸುವ ನೆಪದಲ್ಲಿ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್‌ ಶಿಕ್ಷಕ ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡುಬಿದಿರೆ ಪ್ರೌಢಶಾಲೆಯೊಂದರ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ಮೂಲದ ಗುರುವ ಮೊಗೇರ (49) ಶಿಕ್ಷೆಗೊಳಗಾದ ವ್ಯಕ್ತಿ. ಕಳೆದ ಫೆಬ್ರವರಿಯಲ್ಲಿ 10ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕ ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು.ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿರುವ ಆರೋಪಿ ವಿದ್ಯಾರ್ಥಿನಿಯರನ್ನು ಸ್ಟಾಫ್‌ರೂಮ್ ಹೊರತುಪಡಿಸಿ ಬೇರೆ ಬೇರೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೂಡುಬಿದಿರೆಯ ಶಿಕ್ಷಕನಿಗೆ 5 ವರ್ಷ ಜೈಲು Read More »

error: Content is protected !!
Scroll to Top