ರಾಜ್ಯ

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ

ಹೈಕೋರ್ಟ್‌ನಲ್ಲಿಂದು ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದ ನಿರ್ಧಾರದ ವಿಚಾರಣೆ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ಇಂದು ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಿದೆ.ಇಡೀ ರಾಜ್ಯದ ಗಮನ ಇಂದು ಹೈಕೋರ್ಟ್‌ ನೀಡಬಹುದಾದ ತೀರ್ಪಿನ ಮೇಲಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು […]

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ Read More »

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌

ಬಳ್ಳಾರಿಗೆ ಕರೆದೊಯ್ಯುವಾಗ ಕೂಲಿಂಗ್‌ ಧರಿಸಲು ಅವಕಾಶ ಕೊಟ್ಟ ಆರೋಪ ಬೆಂಗಳೂರು : ಕೊಲೆ ಆರೋಪಿ ದರ್ಶನ್‌ಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಕಂಟಕ ತಪ್ಪುತ್ತಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಿದ ಕಾರಣಕ್ಕೆ ನಟನನ್ನು ನಿನ್ನೆ ನಸುಕಿನ ಹೊತ್ತು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ವಿಐಪಿ ಸೌಲಭ್ಯಕ್ಕೆ ಅವಕಾಶ ಮಾಡಿಕೊಟ್ಟ ಬೆಂಗಳೂರಿನ 9 ಜೈಲು ಅಧಿಕಾರಿಗಳು ಅಮಾನತಾಗಿ ಶಿಸ್ತು ಕ್ರಮ ಎದುರಿಸುತ್ತಿದ್ದಾರೆ. ಈಗ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋದ ಪೊಲೀಸ್‌ ಅಧಿಕಾರಿಗೂ ದರ್ಶನ್‌ ಕಾರಣದಿಂದ ಕಂಟಕ ಎದುರಾಗಿದೆ.

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌ Read More »

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿ, ಪಾನಿಪುರಿಗಳಲ್ಲಿರುವ ಹಾನಿಕಾರಕ ರಾಸಾಯನಿಕ ಅಂಶಗಳನ್ನು ನಿಷೇಧಿಸಿರುವ ಆಹಾರ ಇಲಾಖೆ ಈಗ ಬೇಕರಿ ತಿನಿಸುಗಳ ಮೇಲೆ ಕಣ್ಣಿಟ್ಟಿದೆ. ಬೇಕರಿ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.‌ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ.‌ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಕಲರ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಫ್ಲೇವರ್‌ಗಳನ್ನ ಜನರು

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ Read More »

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌

ಕರಾವಳಿ ಜನರ ವಿರೋಧ ಲೆಕ್ಕಿಸದೆ ಅನುಷ್ಠಾನಗೊಂಡ ಯೋಜನೆ ಬೆಂಗಳೂರು: ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಜ್ಜಾಗಿದೆ. ಎತ್ತಿನಹೊಳೆ ಯೋಜನೆಯ ಟ್ರಯಲ್ ರನ್ ಪ್ರಾರಂಭ ಮಾಡಿದ್ದೇವೆ. ಯೋಜನೆಗಾಗಿ ಇಂಜಿನಿಯರ್‌ಗಳು ಸೇರಿದಂತೆ ಪ್ರತಿಯೊಬ್ಬ ನೌಕರ ಬಹಳ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈಗ 550 ಕ್ಯುಸೆಕ್ ನೀರು ಹರಿಯುತ್ತಿದೆ. ಇದರ ಆರು ಪಟ್ಟು ನೀರು ಉದ್ಘಾಟನೆ ದಿನ ಹರಿಸುತ್ತೇವೆ ಎಂದು ಉಪಮುಖ್ಯಮಂತ್ರು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ ಬಹಳ ಜನ ಭೂಮಿ ಕೊಟ್ಟಿದ್ದಾರೆ. ಇದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಇದನ್ನು

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌ Read More »

ವಿದ್ಯುತ್‌ ಕಂಬದಲ್ಲಿ ಬಿಲ್ಲುಬಾಣ, ಗದೆ ಅಳವಡಿಸಿದ್ದಕ್ಕೆ ಎಸ್‌ಡಿಪಿಐ ವಿರೋಧ : ತೆರವಿಗೆ ಆದೇಶ

ಹನುಮಂತನ ಜನ್ಮಸ್ಥಳದಲ್ಲಿ ಧಾರ್ಮಿಕ ಸಂಕೇತ ಬಳಸಿರುವುದನ್ನು ಆಕ್ಷೇಪಿಸಿದ ಎಸ್‌ಡಿಪಿಐ ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಲ್ಲುಬಾಣ ಮತ್ತು ಗದೆಯ ಆಕೃತಿಗಳಿರುವ ವಿದ್ಯುತ್‌ ಕಂಬಗಳಿಗೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದ ಬಳಿಕ ಈ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಲು ತಹಶೀಲ್ದಾರ್‌ ಆದೇಶಿಸಿದ್ದಾರೆ. ಹನುಮಂತನ ಜನ್ಮಸ್ಥಾನ ಎಂದು ಅರಿಯಲ್ಪಡುವ ಅಂಜನಾದ್ರಿ ಬೆಟ್ಟ ಇರುವ ಗಂಗಾವತಿಯಲ್ಲಿ ಅಯೋಧ್ಯೆ ಮತ್ತು ತಿರುಪತಿ ಮಾದರಿಯಲ್ಲಿ ವಿದ್ಯುತ್‌ ಕಂಬಗಳನ್ನು ವಿನ್ಯಾಸಗೊಳಿಸಲಾಗಿತ್ತು. ಜುಲೈನಗರ ಎಂಬಲ್ಲಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಬಿಲ್ಲುಬಾಣ ಮತ್ತು ಗದೆ ವಿನ್ಯಾಸವಿರುವ

ವಿದ್ಯುತ್‌ ಕಂಬದಲ್ಲಿ ಬಿಲ್ಲುಬಾಣ, ಗದೆ ಅಳವಡಿಸಿದ್ದಕ್ಕೆ ಎಸ್‌ಡಿಪಿಐ ವಿರೋಧ : ತೆರವಿಗೆ ಆದೇಶ Read More »

ಸಿಎಂ, ಡಿಸಿಎಂ ಭವಿಷ್ಯ ಇಂದು ಕೋರ್ಟಿನಲ್ಲಿ ನಿರ್ಧಾರ

ಮುಡಾ ಕೇಸಿನಲ್ಲಿ ಸಿದ್ದರಾಮಯ್ಯ, ಸಿಬಿಐ ತನಿಖೆ ಹಿಂದೆಗೆದುಕೊಂಡ ಕೇಸಿನಲ್ಲಿ ಡಿಕೆಶಿ ವಿಚಾರಣೆ ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ನಿರ್ಧಾರದ ಭವಿಷ್ಯ ಇಂದು ಹೈಕೋರ್ಟಿನಲ್ಲಿ ನಿರ್ಧಾರವಾಗಲಿದೆ. ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ನಿರ್ಧಾರ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್

ಸಿಎಂ, ಡಿಸಿಎಂ ಭವಿಷ್ಯ ಇಂದು ಕೋರ್ಟಿನಲ್ಲಿ ನಿರ್ಧಾರ Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಇಂದು ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿಯವರು ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೆಪಿಸಿಸಿ ವಕ್ತಾರ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು Read More »

ಸಿದ್ದರಾಮಯ್ಯ ಸಿಎಂ ಆದ ಬಳಿಕ 5 ಸಾವಿರ ಕೋಟಿ ರೂ. ಹಗರಣ: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ 5,000 ಕೋಟಿ ರೂ. ಹಗರಣವಾಗಿದೆ. ಅಭಿವೃದ್ಧಿ ಮಾಡುತ್ತೇವೆ ಎಂದು ಅಹಿಂದಾ ಸಮಾವೇಶ ಮಾಡಿಕೊಂಡು ಈಗ ಅಹಿಂದಾ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಸ್‌/ಎಸ್ಟಿಗೆ ಮೀಸಲಾದ ಹಣವನ್ನು ಲೂಟಿ ಹೊಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದ್ದು, ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ. ಇದೀಗ ಮುಖ್ಯಮಂತ್ರಿಗಳ ರಾಜೀನಾಮೆಗೆ ಕ್ಷಣಗಣನೆ

ಸಿದ್ದರಾಮಯ್ಯ ಸಿಎಂ ಆದ ಬಳಿಕ 5 ಸಾವಿರ ಕೋಟಿ ರೂ. ಹಗರಣ: ವಿಜಯೇಂದ್ರ Read More »

ಬಳ್ಳಾರಿ ಜೈಲಿಗೆ ದರ್ಶನ್‌ ಇಂದು ಸ್ಥಳಾಂತರ

ಬೆಂಗಳೂರು: ಕೊಲೆ ಆರೋಪದಲ್ಲಿ ಸೆರೆಯಾಗಿರುವ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಹೋಗುತ್ತಿರುವುದು ಇದು ಎರಡನೇ ಸಲ.ಈ ಮೊದಲು ಅವರು ಶೂಟಿಂಗ್‌ ಸಲುವಾಗಿ ಕೆಲವು ದಿನ ಬಳ್ಳಾರಿ ಜೈಲಿಗೆ ಹೋಗಿ ಬರುತ್ತಿದ್ದರು. 2017ರಲ್ಲಿ ತೆರೆ ಕಂಡಿದ್ದ ಚೌಕ ಸಿನಿಮಾದ ಶೂಟಿಂಗ್‌ ಬಳ್ಳಾರಿ ಜೈಲಿನಲ್ಲಿ ನಡೆದಿತ್ತು. ಕೊನೆ ಭಾಗವನ್ನು ಜೈಲಿನಲ್ಲಿರುವ ಖಾಲಿ ಸೆಲ್‌ಗಳಲ್ಲಿ ಚಿತ್ರೀಕರಣ ಮಾಡಲಾಗಿತ್ತು.ಈ ಚಿತ್ರದ ಶೂಟಿಂಗ್‌ಗಾಗಿ ದರ್ಶನ್‌ ಜೈಲಿಗೆ ಹೋಗಿದ್ದರು. ಅಂದು ಶೂಟಿಂಗ್‌ಗಾಗಿ ಹೋದಾಗ ಅಲ್ಲಿದ್ದ ಕೈದಿಗಳು ಅವರನ್ನು ನೋಡಲು ಹಾತೊರೆದಿದ್ದರು. ಇಂದು ಅದೇ ಜೈಲಿಗೆ ತಾನೇ

ಬಳ್ಳಾರಿ ಜೈಲಿಗೆ ದರ್ಶನ್‌ ಇಂದು ಸ್ಥಳಾಂತರ Read More »

ಇನ್ನು ಡಿಜಿಟಲ್‌ ಮಾಧ್ಯಮದಲ್ಲೂ ಬರಲಿದೆ ಸರಕಾರದ ಜಾಹೀರಾತು

ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ಡಿಜಿಟಲ್ ಮಾಧ್ಯಮ ಈಗ ಬಹಳ ಪ್ರಭಾವಶಾಲಿಯಾಗಿದ್ದು, ಹೆಚ್ಚು ಜನರನ್ನು ತಲುಪುತ್ತದೆ. ಅದರಲ್ಲೂ ಯುವ ಸಮುದಾಯವನ್ನು ತಲುಪಲು ಡಿಜಿಟಲ್‌ ಮಾಧ್ಯಮ ಸುಲಭ ದಾರಿ ಎಂದು ಕಂಡುಕೊಂಡಿರುವ ಸರಕಾರ ಇನ್ನು ಮುಂದೆ ಡಿಜಿಟಲ್‌ ಮಾಧ್ಯದಲ್ಲೂ ಜಾಹೀರಾತು ನೀಡಲು ನಿರ್ಧರಿಸಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024ನ್ನು ಜಾರಿಗೊಳಿಸಿ ಡಿಜಿಟಲ್ ಜಾಹೀರಾತಿಗೆ ಹೆಚ್ಚಿನ ಆದ್ಯತೆ

ಇನ್ನು ಡಿಜಿಟಲ್‌ ಮಾಧ್ಯಮದಲ್ಲೂ ಬರಲಿದೆ ಸರಕಾರದ ಜಾಹೀರಾತು Read More »

error: Content is protected !!
Scroll to Top