ರಾಜ್ಯ

SSLC ಪರೀಕ್ಷಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಬೆಂಗಳೂರು: ಮಾ. 18 ರಿಂದ ರಾಜ್ಯದಲ್ಲಿ ಹತ್ತನೇ ತರಗತಿ ಪರೀಕ್ಷೆ ಆರಂಭವಾಗಲಿದ್ದು, ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 88 2025-26 2 ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ […]

SSLC ಪರೀಕ್ಷಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ Read More »

ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ: ಕಾರು ಪಲ್ಟಿಯಾದ ಪರಿಣಾಮ ಈರ್ವರು ಸ್ಥಳದಲ್ಲೇ ಮೃತಪಟ್ಚ ಘಟನೆ ಬಸವನ ಬಾಗೇವಾಡಿ ತಾಳೀಕೋಟೆಯ ‌ಬಸವನಹಟ್ಟಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂಬವರೇ ‌ಮೃತ ದುರ್ದೈವಿಗಳು. ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಶ್ರೀಶೈಲಕ್ಕೆ ಹೋಗುತ್ತಿದ್ದು, ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಬಸವನಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು Read More »

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

ಶಿರ್ವ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಂಕರಪುರದ ಸಾಲ್ಮರದ ಕ್ಯಾಟರಿಂಗ್ ಶೆಡ್ ಸಮೀಪ ನಡೆದಿದೆ. ಮೃತನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಕ್ಯಾಟರಿಂಗ್ ಶೆಡ್ ಬಳಿಯ ರೂಮ್‌ನಲ್ಲಿ ಗೌತಮ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾದಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಗೌತಮ್ ಬೈಂದೂರು ಮೂಲದವರಾಗಿದ್ದು, ಅವಿವಾಹಿತರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ವಿವಿಧ

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು Read More »

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉಪ್ಪಳದ ಶೇಖ್ ಅರ್ಜಾಬ್ ಮತ್ತು ಕೊಡಿಬೈಲ್ ಬಾಬಾ ರಸ್ತೆ ನಿವಾಸಿ ರಶೀದ್ ಅಲ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪ ಡ್ರಗ್ಸ್ ಮಾರಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಗಾಂಜಾ, ನಗದು, ಮೊಬೈಲ್ ಫೋನ್, ಗಾಂಜಾ ಪ್ಯಾಕಿಂಗ್ ಚೀಲಗಳು ಸೇರಿದಂತೆ ಇನ್ನೂ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ದಾಳಿಯ ವೇಳೆ ಮತ್ತೊಬ್ಬ ಆರೋಪಿ ಅಲ್ತಾಫ್ ಪರಾರಿಯಾಗಿದ್ದಾನೆ. ಆತನಿಗಾಗಿ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ Read More »

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ

ಮತ್ತೊಮ್ಮೆ ಪರಪ್ಪನ ಅಗ್ರಹಾರ ಕರ್ಮಕಾಂಡ ಬಯಲು ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಮಾರ್ಚ್ 9ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳ ಉಡುಪಿನಲ್ಲಿ ಹಣ

ಜೈಲಿಗೆ ವಾರ್ಡನ್‌ನಿಂದಲೇ ಡ್ರಗ್ಸ್‌ ಪೂರೈಕೆ Read More »

ಬೀದಿ ನಾಯಿಗಳ ನಿಯಂತ್ರಣಕ್ಕೂ ಶಿಕ್ಷಕ ನೇಮಕ: ರಾಜ್ಯ ಸರ್ಕಾರದ ಕ್ರಮಕ್ಕೆ ಹೊರಟ್ಟಿ ಆಕ್ರೋಶ

ಬೆಂಗಳೂರು: ಶಿಕ್ಷಕರನ್ನು ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ನೊಡೆಲ್ ಅಧಿಕಾರಿಗಳನ್ನಾಗಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಶಿಕ್ಷಕರಿಗೆ ಈಗಾಗಲೇ ಅನೇಕ ಬೋಧಕೇತರ ಜವಾಬ್ದಾರಿಗಳು ನೀಡಲಾಗಿರುವ ಸಂದರ್ಭದಲ್ಲಿ ಇಂತಹ ಕೆಲಸಗಳನ್ನು ನೀಡುವುದು ಹಾಸ್ಯಾಸ್ಪದ ಹಾಗೂ ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದಿದ್ದಾರೆ. ರಾಜ್ಯದ ಶಿಕ್ಷಕರು ಈಗಾಗಲೇ ಮತದಾನ ಕಾರ್ಯಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ

ಬೀದಿ ನಾಯಿಗಳ ನಿಯಂತ್ರಣಕ್ಕೂ ಶಿಕ್ಷಕ ನೇಮಕ: ರಾಜ್ಯ ಸರ್ಕಾರದ ಕ್ರಮಕ್ಕೆ ಹೊರಟ್ಟಿ ಆಕ್ರೋಶ Read More »

ಕರೆಂಟ್ ಶಾಕ್‌ ಹೊಡೆದು ಇಬ್ಬರು ಸಾವು

ತೆಲಂಗಾಣ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದ ಇಬ್ಬರಿಗೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಚ ಘಟನೆ ಮೇದರೀಪೇಟೆ ಎಂಬಲ್ಲಿ ನಡೆದಿದೆ. ಸಲ್ಲಾ ‌ಲಕ್ಷ್ಮೀನಾರಾಯಣ ಮತ್ತು ಚಂದನಗರಿಯ ನಾಗರಾಜು ಎಂಬವರೇ ಮೃತ ದುರ್ದೈವಿಗಳು. ಮಂಚೇರಿಯಲ್ ಜಿಲ್ಲೆಯ ಪೆಟ್ರೋಲ್ ಬಂಕ್ ಒಂದರ ಸಮೀಪ ಈ ದುರಂತ ಸಂಭವಿಸಿದೆ. ಮೂವರು ಕೂಲಿ ಕಾರ್ಮಿಕರು ಎತ್ತರವಾದ ಕಬ್ಬಿಣದ ಸ್ಟಾಂಡ್ ಅನ್ನು ಸಾಗಿಸುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ಇಬ್ಬರು ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಅದೃಷ್ಟವಶಾತ್

ಕರೆಂಟ್ ಶಾಕ್‌ ಹೊಡೆದು ಇಬ್ಬರು ಸಾವು Read More »

ಕರೆಂಟ್ ಶಾಕ್‌ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ‌ಸ್ನೇಹಿತರು

ರಾಯಚೂರು: ಕರೆಂಟ್ ಶಾಕ್‌ನಿಂದ 9 ನೇ ತರಗತಿಯ ಬಾಲಕನೊಬ್ಬ ಮೃತಪಟ್ಚ ಘಟನೆ ನಡೆದಿದ್ದು, ಸ್ನೇಹಿತರು ಆತನ ಶವವನ್ನು ಕೆರೆಗೆಸೆದ ಘಟನೆ ನಡೆದಿದೆ. ಮೃತನನ್ನು ಗುಂಡಸಾಗರ ‌ಗ್ರಾಮದ ಕಾರ್ತಿಕ್(15) ಎಂದು ಗುರುತಿಸಲಾಗಿದೆ. ಕಾರ್ತಿಕ್ ಓದುತ್ತಿದ್ದ ಶಾಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಹೊಸ ಬಟ್ಟೆ ಖರೀದಿ ಮಾಡಲು ಹತ್ತನೇ ತರಗತಿಯ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಹೋಗಿದ್ದ. ದಾರಿ ಮಧ್ಯೆ ನೀರು ಕುಡಿಯಲು ಬಾವಿಯೊಂದರ ಸಮೀಪ ಹೋಗಿದ್ದು, ಕರೆಂಟ್ ಶಾಕ್ ತಗುಲಿ ಮೃತಪಟ್ಟಿದ್ದಾನೆ.

ಕರೆಂಟ್ ಶಾಕ್‌ನಿಂದ ವಿದ್ಯಾರ್ಥಿ ಸಾವು: ಶವವನ್ನು ನೀರಿಗೆಸೆದ ‌ಸ್ನೇಹಿತರು Read More »

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ: ಯುವತಿಯೊಬ್ಬಳ‌ ವಿಷಯದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಆರೋಪಿಯಾಗಿದ್ದು, ರಾಹುಲ್ ಎಂಬಾತನೇ ಕೊಲೆಯಾದ ದುರ್ದೈವಿ. ಯುವತಿಯ ವಿಷಯಕ್ಕೆ ಸಂಬಂಧಿಸಿದ ಹಾಗೆ ರಾಹುಲ್ ಮತ್ತು ಅಪ್ರಾಪ್ತ ಯುವಕನ ನಡುವೆ ಹೋಳಿ ಹಬ್ಬದ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಯುವಕ ರಾಹುಲ್‌ನ ಕುತ್ತಿಗೆಗೆ ಬೈಕ್‌ನ ಕೀ ಚೈನ್‌ನಿಂದ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಹುಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ತೇರದಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಉಳ್ಳಾಲ: ಕೆಲಸಕ್ಕೆಂದು ಮನೆಯಿಂದ ತೆರಳಿ ಸೋಮವಾರದಿಂದ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಸೋಮೇಶ್ವರ ಸೋಮನಾಥ ಗದಾತೀರ್ಥ ಕೆರೆಯಲ್ಲಿ ಪತ್ತೆಯಾಗಿದೆ. ಮೃತನನ್ನು ವಿವೇಕ್ ಶೆಟ್ಟಿಗಾರ್(32) ಎಂದು ಗುರುತಿಸಲಾಗಿದೆ. ಪತ್ನಿಯಿಂದ ‌ವಿಚ್ಛೇದನಗೊಂಡು ಖಿನ್ನತೆಯಿಂದ ವಿವೇಕ್ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿವೇಕ್ ಕದ್ರಿ ವೇದ ಮೋಟಾರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸೋಮವಾರ ಕೆಲಸಕ್ಕೆಂದು ‌ಮನೆಯಿಂದ ಹೋಗಿದ್ದರು. ಅದೇ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತಾಯಿಗೆ ಕರೆ ಮಾಡಿ ತಾನು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿದ್ದರು. ಆದರೆ ರಾತ್ರಿ

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

error: Content is protected !!
Scroll to Top