ರಾಜ್ಯ

ಸಾರ್ವಜನಿಕರು ಸಿಎಂಗೆ ನೀಡಿದ ವಿವಿಧ ಬೇಡಿಕೆಗಳ ಮನವಿ ಕಸದ ರಾಶಿಯಲ್ಲಿ ಪತ್ತೆ | ಸಿಎಂ ನಿಜಬಣ್ಣ ಬಯಲು | ಕ್ಷಮೆ ಯಾಚಿಸುವಂತೆ ರೈತರಿಂದ ಆಗ್ರಹ

ಚಾಮರಾಜನಗರ: ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಾರ್ವಜನಿಕರು ನೀಡಿದ ವಿವಿಧ ಬೇಡಿಕೆಗಳ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು. ಸಿಎಂ ನಿಜಬಣ್ಣ ಬಯಲಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜನರು ಮನವಿ ಸಲ್ಲಿಸಿದ್ದರು. ಆದರೆ ಜನರು ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ […]

ಸಾರ್ವಜನಿಕರು ಸಿಎಂಗೆ ನೀಡಿದ ವಿವಿಧ ಬೇಡಿಕೆಗಳ ಮನವಿ ಕಸದ ರಾಶಿಯಲ್ಲಿ ಪತ್ತೆ | ಸಿಎಂ ನಿಜಬಣ್ಣ ಬಯಲು | ಕ್ಷಮೆ ಯಾಚಿಸುವಂತೆ ರೈತರಿಂದ ಆಗ್ರಹ Read More »

ಅಪರ್ಣಾ ಅಂತ್ಯಕ್ರಿಯೆ| ನಡೆಯಿತು ಪೊಲೀಸ್ ಗೌರವದೊಂದಿಗೆ

ಬೆಂಗಳೂರು : ನಿನ್ನೆ ರಾತ್ರಿ ನಿಧನರಾದ ಕನ್ನಡದ ನಿರೂಪಕಿ, ನಟಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಪೊಲೀಸ್ ಗೌರವದೊಂದಿಗೆ ನೆರವೇರಿತು. 2 ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ನಿನ್ನೆ ರಾತ್ರಿ ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ 3 ದಶಕಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರು

ಅಪರ್ಣಾ ಅಂತ್ಯಕ್ರಿಯೆ| ನಡೆಯಿತು ಪೊಲೀಸ್ ಗೌರವದೊಂದಿಗೆ Read More »

ಬಸ್ – ಲಾರಿ ಭೀಕರ ಅಪಘಾತ l 9 ಮಂದಿ ಮೃತ್ಯು

ಕೋಲಾರ: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್‌ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್‌ ತಂಡ ಸ್ಥಳಕ್ಕೆ ಭೇಟಿ ಕೊಟ್ಟು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ – ಲಾರಿ ಭೀಕರ ಅಪಘಾತ l 9 ಮಂದಿ ಮೃತ್ಯು Read More »

ಖ್ಯಾತ ನಟಿ, ನಿರೂಪಕಿ ಅಪರ್ಣಾ  ಇನ್ನಿಲ್ಲ.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಕಿರಿಯ ವಯಸ್ಸಿನಲ್ಲೇ ಇಹಲೋಕ್ಯ ತ್ಯಜಿಸಿದ್ದಾರೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅಪರ್ಣಾ  ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅವರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ

ಖ್ಯಾತ ನಟಿ, ನಿರೂಪಕಿ ಅಪರ್ಣಾ  ಇನ್ನಿಲ್ಲ. Read More »

ಬ್ಲ್ಯಾಕ್ ಮೇಲ್ ಮೂಲಕ ಹಣ ಸುಲಿಗೆ | ಕಾಣೆಯಾಗಿದ್ದ ನಿರೂಪಕಿ ದಿವ್ಯಾ ಬಂಧನ

ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ

ಬ್ಲ್ಯಾಕ್ ಮೇಲ್ ಮೂಲಕ ಹಣ ಸುಲಿಗೆ | ಕಾಣೆಯಾಗಿದ್ದ ನಿರೂಪಕಿ ದಿವ್ಯಾ ಬಂಧನ Read More »

ರಾಜ್ಯದಲ್ಲಿ ಅನರ್ಹ ಬಿಪಿಎಲ್‍ ಕಾರ್ಡು ರದ್ದು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬಡ ಕುಟುಂಬದವರಿಗೆ ಸರ್ಕಾರ ಹಲವು ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್‍ ಗಾಗಿ ಹಲವು ಜನ ಕಾಯುತ್ತಿದ್ದಾರೆ.  ಆದರೆ ಅನರ್ಹ ರೇಷನ್ ಕಾರ್ಡ್ ನ್ನು ರದ್ದುಪಡಿಸುವ ಕುರಿತು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್ ಕಾರ್ಡ್ ಇದ್ದು, ಯಾರು

ರಾಜ್ಯದಲ್ಲಿ ಅನರ್ಹ ಬಿಪಿಎಲ್‍ ಕಾರ್ಡು ರದ್ದು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ Read More »

ಹಿಂದೂ ಮಹಿಳೆಯರ ರಕ್ಷಣೆಗಾಗಿ ಆರಂಭಿಸಿದ ಸಹಾಯವಾಣಿ ಪರಿಣಾಮಕಾರಿಯಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್

ಹಾವೇರಿ : ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಹಿಂದೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಆರಂಭಿಸಿದ ಸಹಾಯ ವಾಣಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಹಾ ಹಿರೇಮಠ ಪ್ರಕರಣದ ಬಳಿಕ ಒಂದೇ ವಾರದಲ್ಲಿ ಹುಬ್ಬಳ್ಳಿಯಲ್ಲಿ ಐದು ಪ್ರಕರಣಗಳು ನಡೆದಿವೆ. ತಕ್ಷಣ ಇದನ್ನು ಶ್ರೀರಾಮ ಸೇನೆ ಗಂಭೀರವಾಗಿ ಪರಿಗಣಿಸಿ ಹೆಲ್ಪ್ ಲೈನ್ ಆರಂಭಿಸಿದ ಮೇಲೆ 300 ಕರೆಗಳು ಬಂದಿವೆ. ಕೊಲೆ ಬೆದರಿಕೆ, ಹೆಲ್ಪ್

ಹಿಂದೂ ಮಹಿಳೆಯರ ರಕ್ಷಣೆಗಾಗಿ ಆರಂಭಿಸಿದ ಸಹಾಯವಾಣಿ ಪರಿಣಾಮಕಾರಿಯಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್ Read More »

ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2 ರ ಫಲಿತಾಂಶ

ಬೆಂಗಳೂರು: ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2ರ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಎಸ್‌.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ http://kseab.karnataka.gov.in ಮತ್ತು http://karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪೂರಕ ಪರೀಕ್ಷೆಗಳು ಜೂ. 14 ರಿಂದ ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2 ರ ಫಲಿತಾಂಶ Read More »

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ ಹಾಗೂ ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ Read More »

ಎಲ್ ಕೆಜಿ, ಯುಕೆಜಿ, 1ನೇ ತರಗತಿಗೆ ದಾಖಲಿಸಲು ಗರಿಷ್ಠ ವಯೋಮಿತಿ ನಿಗದಿ | ಆದೇಶ ಹೊರಡಿಸಿದ ಸರಕಾರ

ಬೆಂಗಳೂರು: ಮಕ್ಕಳನ್ನು ಎಲ್.ಕೆ.ಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸಲು ಈಗಾಗಲೇ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿದ ರಾಜ್ಯ ಸರಕಾರ ಇದೀಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಮಕ್ಕಳ ಎಲ್.ಕೆ.ಜಿ ಪ್ರವೇಶಾತಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿ 6 ವರ್ಷ ನಿಗದಿಪಡಿಸಲಾಗಿದೆ. ಯುಕೆಜಿ ಪ್ರವೇಶಾತಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಗರಿಷ್ಠ ವಯೋಮಿತಿ 7 ವರ್ಷ ಆಗಿದೆ. ಒಂದನೇ ತರಗತಿ ಪ್ರವೇಶಾತಿಗೆ ಕನಿಷ್ಠ ವಯೋಮಿತಿ 6 ವರ್ಷ ಇದ್ದರೆ, ಗರಿಷ್ಠ ವಯೋಮಿತಿ 8 ವರ್ಷ ನಿಗದಿಪಡಿಸಲಾಗಿದೆ.

ಎಲ್ ಕೆಜಿ, ಯುಕೆಜಿ, 1ನೇ ತರಗತಿಗೆ ದಾಖಲಿಸಲು ಗರಿಷ್ಠ ವಯೋಮಿತಿ ನಿಗದಿ | ಆದೇಶ ಹೊರಡಿಸಿದ ಸರಕಾರ Read More »

error: Content is protected !!
Scroll to Top