ಸಾರ್ವಜನಿಕರು ಸಿಎಂಗೆ ನೀಡಿದ ವಿವಿಧ ಬೇಡಿಕೆಗಳ ಮನವಿ ಕಸದ ರಾಶಿಯಲ್ಲಿ ಪತ್ತೆ | ಸಿಎಂ ನಿಜಬಣ್ಣ ಬಯಲು | ಕ್ಷಮೆ ಯಾಚಿಸುವಂತೆ ರೈತರಿಂದ ಆಗ್ರಹ
ಚಾಮರಾಜನಗರ: ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಾರ್ವಜನಿಕರು ನೀಡಿದ ವಿವಿಧ ಬೇಡಿಕೆಗಳ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು. ಸಿಎಂ ನಿಜಬಣ್ಣ ಬಯಲಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೈತರು, ಆಕ್ಸಿಜನ್ ದುರಂತದ ಸಂತ್ರಸ್ತರು ಸಿಎಂ ಅವರಿಗೆ ಮನವಿ ಪತ್ರಗಳನ್ನು ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜನರು ಮನವಿ ಸಲ್ಲಿಸಿದ್ದರು. ಆದರೆ ಜನರು ಸಲ್ಲಿಸಿದ್ದ ಮನವಿ ಪತ್ರಗಳು ಇದೀಗ ಕಸದ ರಾಶಿಯಲ್ಲಿ […]










