ರಾಜ್ಯ

ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ

ಸದ್ದಿಲ್ಲದೆ ಕ್ರೀಡಾಂಗಣದ ಹೆಸರು ಬದಲಾವಣೆ ; ಕಾಂಗ್ರೆಸ್‌ಗೆ ತೀವ್ರ ಮುಜುಗರ ಬೆಂಗಳೂರು: ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಕಾಂಗ್ರೆಸ್ ನಾಯಕ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೆಸಟ್ಟಿರುವುದು ವಿವಾದದ ಸ್ವರೂಪ ಪಡೆದುಕೊಂಡಿದೆ. ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿ ಹೆಸರು ಕೈ ಬಿಟ್ಟು ರಾಮನ ಹೆಸರಿಟ್ಟಿದ್ದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವಾಗಲೇ ಕರ್ನಾಟಕದಲ್ಲಿ ಸದ್ದಿಲ್ಲದೆ ಗಾಂಧೀಜಿ ಹೆಸರು ಬದಲಾಯಿಸುರುವುದು ಕಾಂಗ್ರೆಸ್‌ ಪಾಲಿಗೆ ತೀವ್ರ ಮುಜುಗರವುಂಟು ಮಾಡಿದೆ. ಈ ಮೂಲಕ ವಿರೋಧ ಪಕ್ಷ ಬಿಜೆಪಿ ಕೈಗೆ […]

ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ Read More »

ಇಸ್ರೋದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಉಡಾವಣೆ ಮಾಡಿದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯಗಳು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ವಿವರವಾದ ವಿಶ್ಲೇಷಣೆಗೆ ಇಸ್ರೋ ವಿಜ್ಞಾನಿಗಳು ಮುಂದಾಗಿದ್ದಾರೆ. ಆರಂಭಿಕ ಹಂತಗಳಲ್ಲಿ ರಾಕೆಟ್ ಯಶಸ್ವಿ ಹಾರಾಟ ನಡೆಸಿದೆ. ಆದರೆ ಮೂರನೇ ಹಂತದ ಕೊನೆಯಲ್ಲಿ ನಿರೀಕ್ಷಿತ ಪಥದಲ್ಲಿ ಹಾರಾಟ ನಡೆದಿಲ್ಲ ಎಂದು ಸಂಸ್ಥೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಉಡಾವಣೆಯ ನಂತರದ ಟೆಲಿಮೆಟ್ರಿ ಮಾಹಿತಿ ಪರಿಶೀಲನೆ ನಡೆಸಲಾಗುವುದಾಗಿಯೂ

ಇಸ್ರೋದ PSLV – C62 ರಾಕೆಟ್‌ ಹಾರಾಟದ ಕೊನೆಯ ಹಂತದಲ್ಲಿ ತಾಂತ್ರಿಕ ವ್ಯತ್ಯಯ Read More »

ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ

ಬೆಂಗಳೂರು: ಯುವತಿಯನ್ನು ಕೆಲವು ಯುವಕರು ಚುಡಾಯಿಸುತ್ತಿದ್ದಾಗ, ಅಸಭ್ಯ ಬಟ್ಟೆ ಧರಿಸಿ ರಸ್ತೆಗೆ ಬರಬೇಡಮ್ಮ ಎಂದು ಬುದ್ಧಿ ಹೇಳಿದ ಹೋಂ ಗಾರ್ಡ್ ಮೇಲೆಯೇ ಆಕೆ ಹಲ್ಲೆ ನಡೆಸಿದ ಘಟನೆ ಕೆ. ಆರ್. ಪುರಂ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದು ಆರೋಪಿಯನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮೋಹಿನಿ ಎಂದು ಗುರುತಿಸಲಾಗಿದ್ದು, ಗಾಯಾಳು ಹೋಂ ಗಾರ್ಡ್ ಲಕ್ಷ್ಮೀ ನರಸಮ್ಮ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಲಕ್ಷ್ಮೀ ನರಸಮ್ಮ ಹೋಂ ಗಾರ್ಡ್ ಆಗಿ ಕೆಲಸ

ಸಭ್ಯ ಬಟ್ಟೆ ಧರಿಸುವಂತೆ ಬುದ್ಧಿ ಹೇಳಿದ್ದಕ್ಕೆ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವತಿ ಪೊಲೀಸರ ವಶಕ್ಕೆ Read More »

ಆರು ವರ್ಷದ ಬಾಲಕಿಯರ ಕಿಡ್ನಾಪ್, ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಆರು ವರ್ಷದ ವಲಸೆ ಬಾಲಕಿಯ ಕಿಡ್ನಾಪ್ ಮತ್ತು ಕೊಲೆ ಪ್ರಕರಣ ವೈಟ್‌ ಫೀಲ್ಡ್ ನಲ್ಲಿ ನಡೆದಿದ್ದು, ಈ ಪ್ರಕರಣದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಹತ್ಯೆ ನಡೆಸುವುದಕ್ಕೂ ಮುನ್ನ ಆರೋಪಿ ಯೂಸುಫ್ ಮೀರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಆರೋಪಿಯನ್ನು ಹೆಚ್ಚುವರಿ 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಆರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದು, ಸ್ಕ್ರ್ಯಾಪ್ ಸಂಗ್ರಹಿಸುವ ಕೆಲಸ

ಆರು ವರ್ಷದ ಬಾಲಕಿಯರ ಕಿಡ್ನಾಪ್, ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು ಗೊತ್ತಾ? Read More »

EOS-N1 ‘ಅನ್ವೇಷಾ’ ನಭಕ್ಕೆ: ಇಸ್ರೋ ಮುಡಿಗೆ ಮತ್ತೊಂದು ಹೆಮ್ಮೆಯ ಗರಿ

ಬೆಂಗಳೂರು: ದೇಶದ ಹೆಮ್ಮೆಯ ಇಸ್ರೋ ಮತ್ತೊಂದು ಮಹತ್ವದ ಮೈಲಿಗಲ್ಲು ದಾಖಲಿಸಿದೆ. 2026 ರ ಮೊದಲ ಬಾಹ್ಯಾಕಾಶ ಮಿಷನ್ ‘ಅನ್ವೇಷಾ’ ಉಪಗ್ರಹವನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಕಳುಹಿಸಿದೆ. PSLV -C62 ರಾಕೆಟ್ ಮೂಲಕ EOS-N1 ‘ಅನ್ವೇಷಾ’ ಉಪಗ್ರಹವನ್ನು ಉಡಾಯಿಸಲಾಗಿದೆ. ಇದನ್ನು ಡಿಆರ್‌ಡಿಒ ಅಭಿವೃದ್ಧಿ ಮಾಡಿದ್ದು, ಕಣ್ಗಾವಲು ಮತ್ತು ರಕ್ಷಣಾ ಉದ್ದೇಶಗಳಿಗೆ ಇದು ಬಳಕೆಯಾಗಲಿದೆ. 600 km ಎತ್ತರದ ಕಕ್ಷೆಯಲ್ಲಿ 400 kg ತೂಕದ ಈ ಉಪಗ್ರಹ ಭೂಮಿಯನ್ನು ಸುತ್ತಲಿದೆ. ಈ ಉಪಗ್ರಹ

EOS-N1 ‘ಅನ್ವೇಷಾ’ ನಭಕ್ಕೆ: ಇಸ್ರೋ ಮುಡಿಗೆ ಮತ್ತೊಂದು ಹೆಮ್ಮೆಯ ಗರಿ Read More »

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಆರಿಕ್ಕಾಡಿಯಲ್ಲಿ ಟೋಲ್‌ ವಸೂಲಿ ಶುರುವಾದ ದಿನವೇ ಪ್ರತಿಭಟನೆಯ ಬಿಸಿ ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಬಳೆ ಸಮೀಪ ಆರಿಕ್ಕಾಡಿಯಲ್ಲಿ ಟೋಲ್‌ ವಸೂಲು ಮಾಡುವುದನ್ನು ಪ್ರತಿಭಟಿಸಲು ಸೋಮವಾರ ಬೆಳಗ್ಗೆಯೇ ಸಾವಿರಾರು ಜನರು ಜಮಾಯಿಸಿದ ಪರಿಣಾಮವಾಗಿ ಮಂಗಳೂರು-ಕಾಸರಗೋಡು ನಡುವೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಆರಿಕ್ಕಾಡಿಯಲ್ಲಿ ಇಂದಿನಿಂದ ಟೋಲ್‌ ವಸೂಲಿ ಶುರುವಾಗಿದೆ. ಈಗಾಗಲೇ ಕೇರಳ-ಕರ್ನಾಟಕ ಗಡಿಯಾಗಿರುವ ತಲಪ್ಪಾಡಿಯಲ್ಲಿ ಟೋಲ್‌ಗೇಟ್‌ ಇದ್ದು, ಇಲ್ಲಿಂದ ಬರೀ 20 ಕಿ.ಮೀ. ದೂರದಲ್ಲಿರುವ ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಟೋಲ್‌ಗೇಟ್‌ ಹಾಕಿದೆ. ಎರಡು ಟೋಲ್‌ಗೇಟ್‌ಗಳ

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ Read More »

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್‌ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ

ಪ್ರಶ್ನೆ ಪತ್ರಿಕೆ ಸೋರಿಕೆ : ಹೆಡ್‌ಮಾಸ್ಟರ್‌ ಸಹಿತ ಎಂಟು ಮಂದಿ ಬಂಧನ Read More »

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ

ತಲೆದಿಂಬಿನಿಂದ ಉಸಿರುಗಟ್ಟಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಪ್ರಕರಣ ಆಕಸ್ಮಿಕ ಸಾವು ಅಲ್ಲ ಬದಲಾಗಿ ಕೊಲೆ ಎಂಬುದು ಬಯಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಶರ್ಮಿಳಾ (34) ಕೊಲೆಯಾದ ಮಹಿಳೆ. ಅವರು ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ್ದರು. ಜನವರಿ 3ರ

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ Read More »

ಕಾರಿಗೆ ಲಾರಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ದಾರುಣವಾಗಿ‌ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದಿದೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ 150ಎ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಲ್ಲಿದ್ದ ‌ನಾಲ್ವರು‌ ಸ್ಥಳದಲ್ಲೇ ‌ದುರ್ಮರಣಕ್ಕೀಡಾಗಿದ್ದಾರೆ. ಡಿಕ್ಕಿಯ‌ ರಭಸಕ್ಕೆ‌‌ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿ‌ ಕಾರಿನ ಅವಶೇಷಗಳು ದಿಕ್ಕಿಗೊಂದು ಬಿದ್ದಿವೆ. ಕಾರಿನಲ್ಲಿದ್ದವರು ಕೂಡ ಅಪಘಾತದ ವೇಳೆ ಚೆಲ್ಲಾಪಿಲ್ಲಿಯಾಗಿ ದಿಕ್ಕಿಗೊಬ್ಬರು ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ‌. ಮೃತರೆಲ್ಲರೂ ಹಿರಿಯೂರು ತಾಲ್ಲೂಕಿನ ‌ನಂಜಯ್ಯನಕೊಟ್ಟಿಗೆ

ಕಾರಿಗೆ ಲಾರಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು Read More »

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ

ಕಾಂಗ್ರೆಸ್‌ ಕಾರ್ಯಕರ್ತನ ಸಾವಿನ ಬಳಿಕ ರಾಜಕೀಯ ಕಚ್ಚಾಟಕ್ಕೆ ತಿರುಗಿದ ಪ್ರಕರಣ ಬೆಂಗಳೂರು: ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸಾವಿಗೀಡಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದ ಸರ್ಕಾರ Read More »

error: Content is protected !!
Scroll to Top