ರಾಜ್ಯ

ಪ್ರೀಮಿಯಂ ಬ್ರಾಂಡ್ ಮದ್ಯದ ಬೆಲೆ ಇಳಿಕೆ | ಮದ್ಯಪ್ರಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಮದ್ಯಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಆಗಸ್ಟ್ 27ರಿಂದಲೇ ಜಾರಿಗೆ ಬರಲಿದೆ. ಪರಿಣಾಮ ಮದ್ಯಪ್ರಿಯರಿಗೆ ಗುಡ್ಯ ನ್ಯೂಸ್ ಸಿಕ್ಕಿದಂತಾಗಿದೆ. ಭಾರತದಲ್ಲಿ ತಯಾರಿಸಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್ ಗಳ […]

ಪ್ರೀಮಿಯಂ ಬ್ರಾಂಡ್ ಮದ್ಯದ ಬೆಲೆ ಇಳಿಕೆ | ಮದ್ಯಪ್ರಿಯರಿಗೆ ಗುಡ್ ನ್ಯೂಸ್ Read More »

ನಾಳೆಯೇ ನಡೆಯಲಿದೆ ಕೆಪಿಎಸ್‌ಸಿ ಪರೀಕ್ಷೆ

ಪರೀಕ್ಷೆ ಮುಂದೂಡಲು ಸರಕಾರ ನಕಾರ ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೆಪಿಎಸ್‌ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ

ನಾಳೆಯೇ ನಡೆಯಲಿದೆ ಕೆಪಿಎಸ್‌ಸಿ ಪರೀಕ್ಷೆ Read More »

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ : ತನಿಖೆಗೆ ಆದೇಶ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಕುರಿತು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿರುವ ಗೃಹ ಸಚಿವ ಜಿ.ಪರಮೇಶ್ವರ್‌ ತಕ್ಷಣ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದ್ದಾರೆ. ದರ್ಶನ್‌ ಇತರ ಕೈದಿಗಳ ಜತೆ ಹೊರಗೆ ಕಾಫಿ ಕುಡಿಯುತ್ತಾ, ಸಿಗರೇಟ್‌ ಸೇದುತ್ತಾ ನಗುನಗುತ್ತಾ ಹರಟೆ ಹೊಡೆಯುತ್ತಿರುವ ಫೋಟೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಕೊಲೆ ಮಾಡಿ ಜೈಲಿನಲ್ಲಿದ್ದರೂ ದರ್ಶನ್‌ಗೆ ಪಶ್ಚಾತ್ತಾಪ ಒಂದಿನಿತೂ ಇಲ್ಲ ಎಂಬ ವಿಷಯ ನಿನ್ನೆಯಿಂದ ಚರ್ಚೆಯಾಗಿತ್ತು. ದರ್ಶನ್ ಜೈಲಿನಲ್ಲಿ ವಿಲ್ಸನ್

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ : ತನಿಖೆಗೆ ಆದೇಶ Read More »

ಕೃಷ್ಣಾಷ್ಟಮಿ : ನಾಳೆ ಮಾಂಸ, ಮೀನು ಮಾರಾಟ ಬಂದ್‌

ಬೆಂಗಳೂರು : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26ರಂದು ಇ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ

ಕೃಷ್ಣಾಷ್ಟಮಿ : ನಾಳೆ ಮಾಂಸ, ಮೀನು ಮಾರಾಟ ಬಂದ್‌ Read More »

ಇ-ಸ್ವತ್ತು ತಂತ್ರಾಂಶದಲ್ಲಿ ಆರಂಭಿಕ ದಿನಗಳಲ್ಲೇ ತೊಡಕು | ಗ್ರಾಮೀಣ ಜನರಿಗೆ ಸಂಕಷ್ಟ | ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಲೋನ್, ಡೋರ್ ನಂಬರ್ ಪಡೆಯುವುದು, ವಾಸದ ಕಟ್ಟಡ ಸಹಿತ ವಿವಿಧ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಾರ್ಯ ಸ್ಥಗಿತ

ಗ್ರಾಮ ಪಂಚಾಯತ್ ಮಟ್ಟದಲ್ಲಿ “ಇ-ಸ್ವತ್ತು’ ತಂತ್ರಾಂಶದ ಅಳವಡಿಕೆ ಹೊಸ ಲೆವೆಲ್‌ ಗೆ ತಲುಪಿದೆ. ಮತ್ತೆ ಗ್ರಾಮ ಪಂಚಾಯತ್‌ನಲ್ಲೇ ಫಾರ್ಮ್ ಮತ್ತು 11Aಗೆ ಅರ್ಜಿ ಸಲ್ಲಿಕೆ ಮಾಡಬಹುದು, ಕೆಲಸ ಸುಲಭವಾಗಿ ನಡೆಯಬಹುದು ಎಂದು ಜನರು ಭಾವಿಸಿದ್ದರು. ಆದರೆ, ಇ-ಸ್ವತ್ತು ತಂತ್ರಾಂಶದ ಆರಂಭಿಕ ದಿನಗಳಲ್ಲಿ ತೊಡಕು ಉಂಟಾಗಿದ್ದು, ಗ್ರಾಮೀಣ ಜನರಿಗೆ ಸಂಕಷ್ಟ ತಂದಿದೆ. ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಅಳವಡಿಸಿದ ಒಂದು ತಿಂಗಳಲ್ಲೇ ತಾಂತ್ರಿಕ ಎಡವಟ್ಟುಗಳು ಕಾಣಿಸಿಕೊಂಡಿವೆ. ಇ-ಸ್ವತ್ತು ತಂತ್ರಾಂಶ ಹೊಸ ಅವತರಣಿಕೆಯ ಕಾರಣಕ್ಕೆ ಜುಲೈ 27ರಿಂದ ಜುಲೈ 29ರ

ಇ-ಸ್ವತ್ತು ತಂತ್ರಾಂಶದಲ್ಲಿ ಆರಂಭಿಕ ದಿನಗಳಲ್ಲೇ ತೊಡಕು | ಗ್ರಾಮೀಣ ಜನರಿಗೆ ಸಂಕಷ್ಟ | ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಲೋನ್, ಡೋರ್ ನಂಬರ್ ಪಡೆಯುವುದು, ವಾಸದ ಕಟ್ಟಡ ಸಹಿತ ವಿವಿಧ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಾರ್ಯ ಸ್ಥಗಿತ Read More »

ಸಿದ್ದರಾಮಯ್ಯ ಸಂಪುಟಕ್ಕೆ ಸದ್ಯದಲ್ಲೇ ಸರ್ಜರಿ?

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಚಿಂತನೆ ಬೆಂಗಳೂರು: ಸಂಪುಟದಲ್ಲಿರುವ ಕೆಲವು ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆಗೊಳಸುವ ಕುರಿತು ಚಿಂತನೆ ನಡೆದಿದೆ ಎಂದು ಮೂಲವೊಂದು ತಿಳಿಸಿದೆ. ಶುಕ್ರವಾರ ಹೈಕಮಾಂಡ್‌ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟಕ್ಕೆ ಸರ್ಜರಿ ಮಾಡುವ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸದ್ಯ ವಿವಾದ ತಣ್ಣಗಾಗಲಿ, ನಂತರ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸುವ ಎಂದು ಹೈಕಮಾಂಡ್‌ ನಾಯಕರು ಹೇಳಿದ್ದಾರೆ ಎನ್ನಲಾಗಿದೆ.ನಿಷ್ಕ್ರಿಯ ಮತ್ತು ಹೆಸರು ಕೆಡಿಸಿಕೊಂಡಿರುವ ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ

ಸಿದ್ದರಾಮಯ್ಯ ಸಂಪುಟಕ್ಕೆ ಸದ್ಯದಲ್ಲೇ ಸರ್ಜರಿ? Read More »

ಮುಸ್ಲಿಂ ಯುವಕರಿಂದ ಕಾಡಿನಲ್ಲಿ ಗ್ಯಾಂಗ್ ರೇಪ್ : ಓರ್ವ ಆರೋಪಿ ಬಂಧನ

ಕಾರ್ಕಳ : ಜೇನು ಕೃಷಿ ಕೆಲಸ ಮಾಡಿಕೊಂಡು ಜೀವನ ನೆಡೆಸುತ್ತಿದ್ದ 21ವರ್ಷದ ಯುವತಿಯ ಸ್ನೇಹ ಬೆಳಿಸಿದ ಅಲ್ತಾಫ್ ಎಂಬ ತನ್ನ ಸ್ನೇಹಿತರ ಜೊತೆಗೆ ಸೇರಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.  ಅನ್ಯಕೋಮಿನ ಯುವಕರಿಂದ ಕಾರ್ಕಳದಲ್ಲಿ ಭಯಾನಕ ಗ್ಯಾಂಗ್ ರೇಪ್ ನಡೆದಿದ್ದು ಈ ಘಟನೆ ಸಮಾಜದಲ್ಲಿ ಆತಂಕಕ್ಕೆ ಕಾರಣ ಆಗಿದೆ. ಕಾರ್ಕಳ ಅಯ್ಯಪ್ಪ ನಗರ ಬಳಿ ಕಾಡಿನಲ್ಲಿ ಯುವತಿಗೆ ಮತ್ತು ಬರುವ ವಸ್ತು ನೀಡಿ ಗ್ಯಾಂಗ್ ರೇಪ್ ಮಾಡಲಾಗಿದ್ದು ಈ ಬಗ್ಗೆ ಕಾರ್ಕಳ

ಮುಸ್ಲಿಂ ಯುವಕರಿಂದ ಕಾಡಿನಲ್ಲಿ ಗ್ಯಾಂಗ್ ರೇಪ್ : ಓರ್ವ ಆರೋಪಿ ಬಂಧನ Read More »

ಸಚಿವ ಎಂ.ಬಿ.ಪಾಟೀಲ್‌ಗೆ ಸುತ್ತಿಕೊಂಡ ಪ್ರಾಸಿಕ್ಯೂಷನ್‌ ಉರುಳು

ಕೆಐಎಡಿಬಿ ಸೈಟ್‌ ಹಂಚಿಕೆಯಲ್ಲಿ ಗೋಲ್‌ಮಾಲ್‌ ಆರೋಪ ಬೆಂಗಳೂರು: ಪ್ರಾಸಿಕ್ಯೂಷನ್‌ ಉರುಳು ಈಗ ಸಚಿವ ಎಂ.ಬಿ.ಪಾಟೀಲ್‌ ಅವರಿಗೂ ಸುತ್ತಿಕೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಗರಣಕ್ಕೆ ಸಂಬಂಧಿಸಿದಂತೆ ಭಾರಿ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶುಕ್ರವಾರ ದೂರು ಸಲ್ಲಿಕೆಯಾಗಿದೆ. ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಾಜಭವನದಲ್ಲಿ ದೂರು ದಾಖಲಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ

ಸಚಿವ ಎಂ.ಬಿ.ಪಾಟೀಲ್‌ಗೆ ಸುತ್ತಿಕೊಂಡ ಪ್ರಾಸಿಕ್ಯೂಷನ್‌ ಉರುಳು Read More »

ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದವರ ಮೇಲಿನ ದಾಳಿಯಂತೆ ಬಿಂಬಿಸಲು ಹೈಕಮಾಂಡ್‌ ಸೂಚನೆ

ಹೊಸದಿಲ್ಲಿ : ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದ ನಾಯಕರ ವಿರುದ್ಧ ನಡೆಸಿದ ಷಡ್ಯಂತ್ರ ಎನ್ನುವಂತೆ ಬಿಂಬಿಸಿ, ಬಿಜೆಪಿ ಏನೇ ಆರೋಪ ಮಾಡಲಿ ತಲೆ ಕೆಡಿಸಿಕೊಳ್ಳಬೇಡಿ. ಕಾನೂನು ಹೋರಾಟ ಮೂಲಕವೇ ಉತ್ತರ ನೀಡಿ ಎಂದು ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸಲಹೆ ನೀಡಿದೆ. ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿದ್ದರಾಮಯ್ಯ ಮತ್ತಿತರರು ಹೈಕಮಾಂಡ್‌ ಜೊತೆ ಸುದೀರ್ಘ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಹೈಕಮಾಂಡ್‌ ನಾಯಕರು ಸಿದ್ದರಾಮಯ್ಯಗೆ ಪೂರ್ಣ ಬೆಂಬಲ ಘೋಷಿಸಿದ್ದಾರೆ. ಪ್ರಾಸಿಕ್ಯೂಷನ್

ಸಿದ್ದರಾಮಯ್ಯ ಮೇಲಿನ ದಾಳಿಯನ್ನು ಹಿಂದುಳಿದವರ ಮೇಲಿನ ದಾಳಿಯಂತೆ ಬಿಂಬಿಸಲು ಹೈಕಮಾಂಡ್‌ ಸೂಚನೆ Read More »

ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್‌ ಉಚಿತ ತರಬೇತಿ: ಮಧು ಬಂಗಾರಪ್ಪ

ಬೆಂಗಳೂರು: ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ತಜ್ಞರು ರಾಜ್ಯದ 25 ಸಾವಿರ ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದು ತಿಳಿಸಿದ್ದಾರೆ.25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲಿದೆ. ತೇರ್ಗಡೆ

ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್‌ ಉಚಿತ ತರಬೇತಿ: ಮಧು ಬಂಗಾರಪ್ಪ Read More »

error: Content is protected !!
Scroll to Top