ರಾಜ್ಯ

ಡೆಂಗ್ಯೂಗೆ  ಬಾಲಕಿ ಮೃತ್ಯು

ಹಾಸನ : ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಬಾಲಕಿ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಮೃತ ಬಾಲಕಿಯನ್ನು ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ […]

ಡೆಂಗ್ಯೂಗೆ  ಬಾಲಕಿ ಮೃತ್ಯು Read More »

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು, ಜು.18 ರ ವರೆಗೆ ಅವಧಿ ವಿಸ್ತರಿಸಿ ಕೋರ್ಟ್‍ ಆದೇಶ ನೀಡಿದೆ. ಈ ಮೂಲಕ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸಹಿತ ಉಳಿದ ಆರೋಪಿಗಳಿಗೆ ಜು.4 ರ ತನಕ ಇದ್ದ ನ್ಯಾಯಾಂಗ ಬಂಧನ ವಿಸ್ತರಣೆಯಿಂದ ಸಂಕಷ್ಟ ಎದುರಾಗಿದೆ. ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಶಿರ್ವ : ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ (16) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಹೃದಯ ಸಂಬಂಧಿ ಕಾಯಿಲೆ ಇದ್ದ ಅವರು ಮಂಗಳವಾರ ಶಾಲೆಗೆ ಬಂದಿದ್ದರು. ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಹೆತ್ತವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು Read More »

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ Read More »

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ ನಡೆಯಲಿರುವ ನೀಟ್ -ಪಿಜಿ ಪರೀಕ್ಷೆ ಜುಲೈ ತಿಂಗಳ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುಂಚಿತಾಗಿ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಜೂನ್ 23 ಕ್ಕೆ ನಿಗದಿಯಾಗಿದ್ದ NEET-PG ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರಿಂದ ಹಲವು ರೀತಿಯ ಪ್ರತಿಭಟನೆ ನಡೆದಿದ್ದು,

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ Read More »

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ

ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಷ್ಟೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಮೀಮ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ Read More »

ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು

ಹಾಸನ: ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದ 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ. ಅಕ್ಷತಾ (13) ಮೃತ ಬಾಲಕಿ, ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದರು. ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದ ಈಕೆಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ

ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು Read More »

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ

ಬೆಂಗಳೂರು: ಸರಕಾರ 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ. ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕ್ ಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ.

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ Read More »

ಇಂದಿನಿಂದ ಗ್ರಾಮ ಪಂಚಾಯತಿ ಯಲ್ಲಿ ಜನನ, ಮರಣ ನೋಂದಣಿ

ಜನನ ಮರಣ ನೋಂದಣಿಯನ್ನು ಗ್ರಾಮ ಪಂಚಾಯತಿ ಯಲ್ಲಿ ಆರಂಭಿಸುವ ಪ್ರಕ್ರಿಯೆ ಇಂದಿನಿಂದ ಜಾರಿಗೆ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಳನ್ನು ಉಪ ನೋಂದಣಾಧಿಕಾರಿಗಳಾಗಿ ಸರ್ಕಾರ ನೇಮಿಸಿದೆ. ಈ ಹಿನ್ನೆಲೆಯಲ್ಲಿ ಡೇಟ ಎಂಟ್ರಿ ಆಪರೇಟರ್ ಗಳಿಗೆ ತರಬೇತಿ ನೀಡಲಾಗಿದೆ. 21 ದಿನ ಒಳಗೆ ನೊಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ, ನಂತರ 2 ರೂ ಶುಲ್ಕ ವಿಧಿಸಲಾಗುತ್ತದೆ.

ಇಂದಿನಿಂದ ಗ್ರಾಮ ಪಂಚಾಯತಿ ಯಲ್ಲಿ ಜನನ, ಮರಣ ನೋಂದಣಿ Read More »

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ | ಜುಲೈ 1ರಂದೇ ಗುಡ್ ನ್ಯೂಸ್ ನೀಡಿದ ತೈಲ ಕಂಪೆನಿ

ಬೆಂಗಳೂರು: ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪೆನಿಗಳು ಸತತ ನಾಲ್ಕನೇ ಬಾರಿಗೆ ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಬೆಲೆ ಇಳಿಸಿವೆ. ಈ ಮೂಲಕ ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ. ಗೃಹಬಳಕೆ ಸಿಲಿಂಡರ್ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ಮೆಟ್ರೊ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ | ಜುಲೈ 1ರಂದೇ ಗುಡ್ ನ್ಯೂಸ್ ನೀಡಿದ ತೈಲ ಕಂಪೆನಿ Read More »

error: Content is protected !!
Scroll to Top