ರಾಜ್ಯ

ಅಂಗನವಾಡಿಯಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿಯಿಂದ ಸಹಮತ : ಸಚಿವೆ ಲಕ್ಷ್ಮೀ ಹೆಬ್ಬಾಳ್‍ ಕರ್

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್‍ ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. […]

ಅಂಗನವಾಡಿಯಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿಯಿಂದ ಸಹಮತ : ಸಚಿವೆ ಲಕ್ಷ್ಮೀ ಹೆಬ್ಬಾಳ್‍ ಕರ್ Read More »

ಹಾಲಿನ ದರ 2.10 ರೂ. ಏರಿಕೆ !

ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ನ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ

ಹಾಲಿನ ದರ 2.10 ರೂ. ಏರಿಕೆ ! Read More »

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  

ಸುಬ್ರಹ್ಮಣ್ಯ: ರಾಜ್ಯದ ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  ಹಾಗೂ ಅವರ ಕುಟುಂಬ ಸಹಿತವಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.  ದೇವಳಯದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿರುವ ಡಿ ಕೆ  ಶಿವಕುಮಾರ್ ಕುಟುಂಬ ಸಂಜೆ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉಪ ಮುಖ್ಯ ಮಂತ್ರಿಗಳನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್  ಮುಖಂಡರು ಹಾಗೂ ಕಾರ್ಯಕರ್ತರಿಂದ ಸ್ವಾಗತ ಕೋರಿದರು.

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್   Read More »

ಕೇರಳ ಬದಲು ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರಕ್ಕೆ ಪ್ರಸ್ತಾವನೆ

ಕೇರಳ :  ರಾಜ್ಯದ ಹೆಸರನ್ನು “ಕೇರಳಂ” ಬದಲಾಯಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ  ಕೇಂದ್ರಕ್ಕೆ ನಿರ್ಣಯ ವನ್ನು  ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಒಂದು ವರ್ಷದ ಹಿಂದೆ ನಿರ್ಣಯ ಆಂಗೀಕರಿಸಲಾಗಿತ್ತು,ಈ ಬಾರಿ ನಿರ್ಣಯದಲ್ಲಿ  ಅಲ್ಪ ಮಾರ್ಪಾಡು ಮಾಡಲಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಕೆಲವು ತಿದ್ದುಪಡಿ ಉಲ್ಲೇಖಿಸಿ ವಾಪಸ್ ಕಳುಹಿಸಿತ್ತು.ಮುಖ್ಯಮಂತ್ರಿ ಪಿನರಾಯಿ ವಿಜಯನ್ ಮಂಡಿಸಿದ ನಿರ್ಣಯ ಸಂವಿಧಾನ ವಿಧಿ 3 ಅನ್ವಯ  ಕೆಲವೊಂದು ತಿದ್ದುಪಡಿಗಳನ್ನು ತಂದು ರಾಜ್ಯದ ಹೆಸರನ್ನು ಸಂವಿಧಾನ ಮೊದಲ ಷೆಡ್ಯೂಲ್ ಪ್ರಕಾರ ಕೇರಳಂ ಅಧಿಕೃತವಾಗಿ ಬದಲಾಯಿಸಲು ಮನವಿ ಮಾಡಿದೆ.

ಕೇರಳ ಬದಲು ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರಕ್ಕೆ ಪ್ರಸ್ತಾವನೆ Read More »

ರಾಜ್ಯಾದ್ಯಂತ ಚಿಕನ್, ಫಿಶ್‍ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ ಗೆ ಕೃತಕ ಬಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ

ರಾಜ್ಯಾದ್ಯಂತ ಚಿಕನ್, ಫಿಶ್‍ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ | ರಾಜ್ಯ ಸರಕಾರದಿಂದ ಆದೇಶ Read More »

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ

ಚಿಕ್ಕಬಳ್ಳಾಪುರ: ಹಾಲಿಗೆ ನೀರು ಬೆರೆಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ ಲಕ್ಷಾಂತರ ಹಣ ಗುಳುಂ ಮಾಡಿರುವ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ಹಾಲುತ್ಪಾದಕರ ಸಹಕಾರ ಸಂಘದಲ್ಲಿ ಇದೀಗ ಬಯಲಾಗಿದೆ. ಕೆಎಂಎಫ್‍ ಗೆ ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಸೇರಿಸಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ Read More »

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ

ನಂದಿಕೂರು ದೇವರಕಾಡು ನಾಶ ಪಡಿಸಿದ ಪ್ರದೇಶದಲ್ಲಿ ಜನ ವಿರೋಧಿಯಾಗಿ ಅಸ್ತಿತ್ವಕ್ಕೆ ಬರಲು ಹವಣಿಸುತ್ತಿರುವ ಎಂ ಇಲೆವೆನ್ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಯಲು ಕಂಪನಿಗೆ ಮಾಜಿ ಸಚಿವರ ತಂಡದೊಂದಿಗೆ ಹೋಗಿದ್ದ ದಲಿತ ಮುಖಂಡರೊರ್ವರಿಗೆ ಕಂಪನಿಯ ಮಾಲಕ ಎನ್ನಲಾದ ವ್ಯಕ್ತಿ ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ. ಸಾರ್ವಜನಿಕ ಸಭೆಯನ್ನು ನಡೆಸದೆ ಸ್ಥಳೀಯರಿಗೆ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಸದೆ ಏಕಾಏಕಿ ತಲೆ ಎತ್ತಲು ಮುಂದಾಗಿರುವ ಬಯೋ ಡಿಸೇಲ್ ಉತ್ಪಾದನಾ ಕಂಪನಿ ಇದಾಗಿದ್ದು, ಇಲ್ಲಿ ಅಭದ್ರತೆ ಕಾಡುತ್ತಿದೆ. ಕಂಪನಿಯಿಂದ ಹೊರ ಬಿಡುವ

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ Read More »

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ

ಶಿವಮೊಗ್ಗ : ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ 25,000 ರೂ. ದಂಡ ವಿಧಿಸಿದೆ. ದ್ವಿಚಕ್ರ ವಾಹನ ಚಾಲನೆ ಮಾಡಿದ 17 ವರ್ಷದ ಅಪ್ರಾಪ್ತ ಮೂಲತಃ ತೀರ್ಥಹಳ್ಳಿಯವನು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿಕ ಶಿವಮೊಗ್ಗ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ Read More »

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ನಿನ್ನೆ ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್‌ ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್‌ನನ್ನು ಹಾಜರುಪಡಿಸಲಾಗಿತ್ತು. ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ವ್ಯಕ್ತಿ ಜತೆ ವಿದ್ಯಾರ್ಥಿನಿ ನಾಪತ್ತೆ : ಇಬ್ಬರ ಶವ ಪತ್ತೆ

ತುಮಕೂರು : ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಗೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ಹೊರ ತೆಗೆದಿದ್ದಾರೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ಪುರುಷ ರಂಗಶಾಮಣ್ಣ (50) ಮೃತಪಟ್ಟವರು. ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ ತಮ್ಮ ಮನೆಯಲ್ಲಿ ಹೇಳಿಕೊಂಡಿದ್ದರು. ಆದರೆ ಇವರ

ವ್ಯಕ್ತಿ ಜತೆ ವಿದ್ಯಾರ್ಥಿನಿ ನಾಪತ್ತೆ : ಇಬ್ಬರ ಶವ ಪತ್ತೆ Read More »

error: Content is protected !!
Scroll to Top