ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಹಾಸನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೂರಜ್ ರೇವಣ್ಣರನ್ನು ಬಂಧಿಸಿದ್ದಾರೆ. ಹಾಸನದ ಸನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ್ದ ದೂರಿನ ಅನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್ ರೇವಣ್ಣ ಬಂಧನವಾಗುವ […]

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ Read More »

ನಟಿ ರಮ್ಯಾ ವಾಗ್ದಾಳಿ ಮುಂದುವರಿಕೆ | ದರ್ಶನ್ ಬಳಿಕ ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ ವಿರುದ್ಧ ಕಿಡಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಬಯಲಾದಗಿನಿಂದಲೂ ಘಟನೆಯನ್ನು ಖಂಡಿಸುತ್ತಲೇ ಬಂದಿರುವ ನಟಿ ರಮ್ಯಾ ಇದೀಗ ಮತ್ತೆ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಈಗ ಅವರು ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತ ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವ ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು

ನಟಿ ರಮ್ಯಾ ವಾಗ್ದಾಳಿ ಮುಂದುವರಿಕೆ | ದರ್ಶನ್ ಬಳಿಕ ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ ವಿರುದ್ಧ ಕಿಡಿ Read More »

ಮುಳ್ಳಯ್ಯನಗಿರಿ ಚಾರಣ  : ಮಳೆಯ ಹಿನ್ನೆಲೆ ನಿಷೇಧ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ  ಹಾಗೂ ಎತ್ತಿನಭುಜದಲ್ಲಿ  ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂರು ಸೌಂದರ್ಯ ದುಪ್ಪಟ್ಟಾಗಿರುತ್ತದೆ. ನೆರೆ ಜಿಲ್ಲೆ ರಾಜ್ಯದ  ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಾಕೃತಿಕ ಸೌಂದರ್ಯದಿಂದ ಸಮೃದ್ಧಿಯಾಗಿರುವ ಕಾಫಿನಾಡಿನ ಸೊಬಗಿಗೆ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು

ಮುಳ್ಳಯ್ಯನಗಿರಿ ಚಾರಣ  : ಮಳೆಯ ಹಿನ್ನೆಲೆ ನಿಷೇಧ Read More »

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಅವಧಿ ಮುಂದುವರಿಸಲು ಕಟಿಬದ್ಧವಾಗಿರುವ ಸರ್ಕಾರ, ಹಣ ಹೊಂದಿಸಲು ಬಹಳ ಶ್ರಮ ಪಡುತ್ತಿದೆ. ರಾಜ್ಯದಲ್ಲಿ ಹಣ ಸೋರಿಕೆ ತಡೆಯಲು, ಆದಾಯವನ್ನು ಗರಿಷ್ಠವಾಗಿ ಹೆಚ್ಚಿಸಲು ಇರುವ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಅದಕ್ಕಾಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಜೊತೆ ಸರ್ಕಾರ ಕೈ ಜೋಡಿಸಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಐದು ವರ್ಷ ಶತಾಯಗತಾಯ ಗ್ಯಾರಂಟಿ ಸ್ಕೀಮ್‌ಗಳನ್ನು ಮುಂದುವರಿಸಲು ಸಂಕಲ್ಪ ತೊಟ್ಟಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ Read More »

ಇನ್ನು ಮುಂದೆ ಸಭೆ ಸಮಾರಂಭಗಳಲ್ಲಿ ಡಾ.ಬಿ.ಆರ್‍.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಸಚಿವ ಎಚ್‍.ಕೆ.ಪಾಟೀಲ್ ಹೇಳಿಕೆ

ಬೆಂಗಳೂರು : ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಸರಕಾರಿ ಶಾಲಾ-ಕಾಲೇಜು, ಸರಕಾರಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಾತ್ಮಾ ಗಾಂಧಿ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಹೀಗೆಂದು ಕಾನೂನು ಸಚಿವ ಎಚ್‍.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನದ ದಿನಾಚರಣೆ ವೇಳೆ ರಾಜ್ಯದ ಎಲ್ಲ ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ

ಇನ್ನು ಮುಂದೆ ಸಭೆ ಸಮಾರಂಭಗಳಲ್ಲಿ ಡಾ.ಬಿ.ಆರ್‍.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಸಚಿವ ಎಚ್‍.ಕೆ.ಪಾಟೀಲ್ ಹೇಳಿಕೆ Read More »

ದರ್ಶನ್ ವಿರುದ್ಧ ವರದಿ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ | ದರ್ಶನ್ ಪತ್ನಿ ವಿಜಯಲಕ್ಷ್ಮೀಯಿಂದ ಇನ್‍ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೆ

ಬೆಂಗಳೂರು: ದರ್ಶನ್ ವಿರುದ್ಧ ವರದಿ ಪ್ರಕಟಿಸದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಈ ಕುರಿತು ಕಾನೂನು ಹೋರಾಟಕ್ಕೆ ಇಳಿದಿರುವ ಕುರಿತು ಇನ್‍ ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆಯುತ್ತಿದೆ. ಇತ್ತೀಚೆಗೆ ದರ್ಶನ್ ಪತ್ನಿ ತನ್ನ ಇನ್‌ಸ್ಟಾಗ್ರಾಂ ಫೋಟೋಗಳನ್ನು ಡಿಲೀಟ್ ಮಾಡಿ ಭಾರಿ ಸುದ್ದಿಯಾಗಿದ್ದರು. ಈಗ ದರ್ಶನ ಪ್ರಕರಣದ ಕುರಿತು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ

ದರ್ಶನ್ ವಿರುದ್ಧ ವರದಿ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ | ದರ್ಶನ್ ಪತ್ನಿ ವಿಜಯಲಕ್ಷ್ಮೀಯಿಂದ ಇನ್‍ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೆ Read More »

ಕಣ್ಣುಕುಕ್ಕುವ ಹೆಡ್ ಲೈಟ್ ನಿಂದ ಹೈರಾಣಾದ ವಾಹನಸವಾರರು

ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್ಇಡಿ ಲೈಟ್ ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್ ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್ ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಉಲ್ಲಂಘಿಸಿದವರು ದಂಡ ಸೇರಿದಂತೆ ಇತರ ಕಾನೂನು ಕ್ರಮಗಳನ್ನು ಎದುರಿಸಬೇಕಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ

ಕಣ್ಣುಕುಕ್ಕುವ ಹೆಡ್ ಲೈಟ್ ನಿಂದ ಹೈರಾಣಾದ ವಾಹನಸವಾರರು Read More »

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯದ ಎದುರು ದರ್ಶನ್ ಹಾಗೂ ಗ್ಯಾಂಗ್ ನ್ನು ಹಾಜರುಪಡಿಸಲಿದ್ದಾರೆ ಪೊಲೀಸರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಇಂದು ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಆಗಿದ್ದು, ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯದ ಎದುರು ದರ್ಶನ್ ಹಾಗೂ ಗ್ಯಾಂಗ್ ನ್ನು ಹಾಜರುಪಡಿಸಲಿದ್ದಾರೆ ಪೊಲೀಸರು Read More »

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ : ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಈ ಹಿಂದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ : ರಾಜ್ಯ ಸರ್ಕಾರ Read More »

ಗಗನಕ್ಕೇರಿದ ತರಕಾರಿ ಬೆಲೆ

ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ತರಕಾರಿ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಬಾರಿ ಯೋಚನೆ ಮಾಡಿ ತರಕಾರಿಗಳನ್ನು ಕೊಂಡುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕಳೆದ ವಾರ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಬೀನ್ಸ್ ಕೆಜಿಗೆ 229 ರೂ. ಗೆ ಏರಿಕೆಯಾಗಿದ್ದರೆ ಉಳಿದಂತೆ ಶುಂಠಿ 198 ರೂ., ಬೆಳ್ಳುಳ್ಳಿ 338 ರೂ., ನಾಟಿ ಕೊತ್ತಂಬರಿ 250 ರೂ.,

ಗಗನಕ್ಕೇರಿದ ತರಕಾರಿ ಬೆಲೆ Read More »

error: Content is protected !!
Scroll to Top