ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಚಿವರಿಂದ ದರ್ಶನ್ ಬಿಡಿಸುವ ಪ್ರಯತ್ನ | ಗೃಹಸಚಿವರ ಕಾಲಿಗೆ ಬೀಳಲು ಮುಂದಾದ ಸಚಿವ
ಪುತ್ತೂರು: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಕೀಲರನ್ನು ಸಂಪರ್ಕಿಸಿ ದರ್ಶನ್ ಪರ ಜಾಮೀನು ಪಡೆಯಲು ಹೋರಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ದರ್ಶನ್ ಆಪ್ತರೆನಿಸಿಕೊಂಡವರು ಏನೂ ಮಾಡುತ್ತಿಲ್ಲವೇ ಎನ್ನುವ ಪ್ರಶ್ನೆ ಹಲವರಲ್ಲಿದೆ. ಆದರೆ ಹಲವರು ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದರೆ, ಆದರೆ ಆ ಒಬ್ಬ ವ್ಯಕ್ತಿ ಮಾತ್ರ ದರ್ಶನ್ ಪರ ಹೋರಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಬಂಧನವಾಗಿ ಸಂಪೂರ್ಣ ಒಂದು ವಾರ ಕಳೆದಿದ್ದು ಕಳೆದ ಎಂಟು ದಿನಗಳಿಂದ ನಟ ಪೊಲೀಸ್ ಠಾಣೆಯಲ್ಲಿದ್ದಾರೆ. […]










