ರಾಜ್ಯ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತಾ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣಾ ನೀತಿ ಸಂಹಿತೆ ತೆರವಿನ ಕೆಲ ದಿನಗಳ ನಂತರ, ಆಡಳಿತ ಯಂತ್ರಕ್ಕೆ ಚುರುಕು ಕೆಲಸ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿ ಹಾಗೂ ಓರ್ವ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ., ಐಎಎಸ್ (ಕೆಎನ್: 1995) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ […]

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತಾ ನೇಮಕ Read More »

ಅಯೋಧ್ಯೆ ರಾಮಮಂದಿರ ಸ್ಪೋಟಿಸುವುದಾಗಿ ಬೆದರಿಕೆ | ಅಯೋಧ್ಯೆಯಲ್ಲಿ ಕಟ್ಟೆಚ್ಚರ

ಅಯೋಧ್ಯೆ: ರಾಮಮಂದಿರ ಸ್ಪೋಟಿಸುವುದಾಗಿ ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.ರಾಮಮಂದಿರದ ಮೇಲೆ ಬಾಂಬ್ ದಾಳಿ ಮಾಡಲಾಗುವುದು ಎಂದು ಜೈಶೆ ಮೊಹಮ್ಮದ್ ಉಗ್ರ ಸಂಘಟನೆಯ ಆಡಿಯೊ ವೈರಲ್ ಆದ ಬೆನ್ನಲ್ಲೇ, ರಾಮಮಂದಿರದ ಸುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ.

ಅಯೋಧ್ಯೆ ರಾಮಮಂದಿರ ಸ್ಪೋಟಿಸುವುದಾಗಿ ಬೆದರಿಕೆ | ಅಯೋಧ್ಯೆಯಲ್ಲಿ ಕಟ್ಟೆಚ್ಚರ Read More »

ಪಶ್ಚಿಮ ಘಟ್ಟ ಅರಣ್ಯದಲ್ಲಿ  ಹರಳು ಕಲ್ಲು ದಂಧೆ‌

ಪಶ್ಚಿಮ ಘಟ್ಟದಲ್ಲಿ‌ ಮತ್ತೆ‌ ಹರಳು ಕಲ್ಲು ದಂಧೆ‌ ನಡೆಯುತ್ತಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರವಿ ಕುಶಾಲಪ್ಪನವರು ಅಕ್ರಮ ಹರಳು ಕಲ್ಲು ಗಣಿಗಾರಿಕೆ ನಡೆಯುವ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ, ಬೆಟ್ಟಗಳಲ್ಲಿ ಆಗಿದಿರುವ ಗುಂಡಿಗಳನ್ನು ವೀಕ್ಷಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮುತುವರ್ಜಿ ವಹಿಸುವಂತೆ ಹೇಳಿದ್ದರು. ಆದರೆ ಇದೀಗ ಅಕ್ರಮ ಕೆಂಪು ಹರಳು ಕಲ್ಲುಗಳ ದಂದೆ ವ್ಯಾಪಕವಾಗಿ ನಡೆಯುತ್ತಿದೆ. ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್

ಪಶ್ಚಿಮ ಘಟ್ಟ ಅರಣ್ಯದಲ್ಲಿ  ಹರಳು ಕಲ್ಲು ದಂಧೆ‌ Read More »

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ಕಾಯ್ದೆ ಅಧಿಕೃತ ಜಾರಿಗೆ | ವಕೀಲರ ಬಹು ದಿನಗಳ ಬೇಡಿಕೆ ನನಸು

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದು,  ರಾಜ್ಯ ಸರ್ಕಾರ ಈ ಬಗ್ಗೆ ಗಜೆಟ್ ನೋಟಿಫಿಕೇಶನ್ ಪ್ರಕಟಿಸಿದ್ದು, ಕಾಯ್ದೆ ಜೂನ್ 10, 2024 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಮೂಲಕ ವಕೀಲರ ಬಹುದಿನಗಳ ಬೇಡಿಕೆ ನನಸಾಗಿದೆ. “ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ” 2023ರ ಡಿಸೆಂಬರ್ 11ರಂದು ರಾಜ್ಯದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಈ ಮಸೂದೆಯನ್ನು ಮಂಡಿಸಿದ್ದರು. ಇದು ಅನುಮೋದನೆಗೊಂಡು ಮಾರ್ಚ್ 20 ರಂದು ರಾಜ್ಯಪಾಲರ ಅಂಕಿತಕ್ಕೂ ಒಳಗಾಯಿತು. ಇನ್ನು

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ಕಾಯ್ದೆ ಅಧಿಕೃತ ಜಾರಿಗೆ | ವಕೀಲರ ಬಹು ದಿನಗಳ ಬೇಡಿಕೆ ನನಸು Read More »

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ಭಾರಿ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಕಂಡು ಬಂದಿದೆ. ಈ ವಿಚಾರದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಕುತೂಹಲ ಕೆರಳಿಸಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮದೊಂದಿಗೆ ತುಮಕೂರಿನಲ್ಲಿ ಮಾತನಾಡಿರುವ ಡಾ. ಜಿ ಪರಮೇಶ್ವರ್, ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ನೋಟಿಸ್ ಗೆ ಬಂದು ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಈಗಾಗಲೇ ಈ ಪ್ರಕರಣದ ಬಗ್ಗೆ

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ Read More »

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ

ಬೆಂಗಳೂರು : ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನ ವಿಚಾರದ ಬೆನ್ನಲ್ಲೇ ಇದೀಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಚೇದನ ಚರ್ಚೆಗೆ ಬಂದಿದ್ದು, ಇಂದು ತೀರ್ಪು ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ. ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಅಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ ಕೋರ್ಟ್‌ಗೆ

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಹಿನ್ನಲೆಯಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಅಳವಡಿಕೆ ಸಹಿತ 144 ಸೆಕ್ಷನ್  | ಇತಿಹಾಸದಲ್ಲೇ ಪ್ರಥಮ ಬಾರಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ್ದು, ಇದು ಇತಿಹಾಸದಲ್ಲೇ ಪ್ರಥಮ ಬಾರಿಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದರು. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನು ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ ಎನ್ನಲಾಗಿದೆ. ಠಾಣೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜೂ.13

ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆ ಹಿನ್ನಲೆಯಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಅಳವಡಿಕೆ ಸಹಿತ 144 ಸೆಕ್ಷನ್  | ಇತಿಹಾಸದಲ್ಲೇ ಪ್ರಥಮ ಬಾರಿ Read More »

ಜೂ.16 : ಬೆಂಗಳೂರಿನಲ್ಲಿ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ವತಿಯಿಂದ ಮಹಿಳಾ ಘಟಕ ಮತ್ತು ಯುವ ಘಟಕದ ಸಹಯೋಗದೊಂದಿಗೆ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ ಜೂ.16 ಭಾನುವಾರ ಬೆಳಗ್ಗೆ 9.30 ಕ್ಕೆ ಬೆಂಗಳೂರು ಚೌಡೇಶ್ವರಿ ನಗರದ ‘ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರ” ದಲ್ಲಿ ನಡೆಯಲಿದೆ. ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗದ ಭಾವೀ ವಧುವರರು ಅಥವಾ ಅವರ ಪೋಷಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಧ್ಯೆಕ್ಷೆ ಶಶಿಪ್ರಭಾ

ಜೂ.16 : ಬೆಂಗಳೂರಿನಲ್ಲಿ “ಸಪ್ತಪದಿ-2024” ಭಾವೀ ವಧುವರರ ಮುಖಾಮುಖಿ ಭೇಟಿ ಕಾರ್ಯಕ್ರಮ Read More »

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು ವಿಚಾರಣೆ ಮುಂದುವರಿಸಿದ್ದಾರೆ ಎಂದು

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ Read More »

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ Read More »

error: Content is protected !!
Scroll to Top