ರಾಜ್ಯ

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ […]

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ Read More »

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಅಶ್ವತ್ಥಾಮ ಮೃತಪಟ್ಟಿರೋದಾಗಿ ತಿಳಿದು  ಬಂದಿದೆ . ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ. ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ

 ಬೆಂಗಳೂರು : ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್‌ ಆಯುಕ್ತ ದಯಾನಂದ್, ಚಿತ್ರದುರ್ಗ

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ  ಇಂದು ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್.ಆ‌ರ್.ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ

ಪುತ್ತೂರು : ನಗರದ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಉದ್ಯೋಗಾಧಾರಿತ ಡಿಪ್ಲೋಮ ಮತ್ತು ಬಿಬಿಎ ಏವಿಯೇಶನ್ ಕೋರ್ಸ್ ಗೆ ಸಂಬಂಧಿಸಿದ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ಸಂಸ್ಥೆಯ ಚೆಯರ್ ಮ್ಯಾನ್ ಸುಜಾತ ಬೈರಿ ದೀಪ ಬೆಳಗಿಸಿ ಉದ್ಘಾಟಿಸಿ, ತಮ್ಮ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸುಗಳ ಬಗ್ಗೆ ಹಾಗೂ ಸಂಸ್ಥೆಯು ನಡೆದು ಬಂದ ಹಾದಿಯನ್ನು ವಿವರಿಸಿದರು. ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ Read More »

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೆಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ! Read More »

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ

ಹೈದರಾಬಾದ್ ​:ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದ ,ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ರಾವ್ ಅವರು ಶನಿವಾರ ಬೆಳಗಿನ ಜಾವ 4:50ಕ್ಕೆ ನಿಧನರಾದರು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ಕುಟುಂಬ, ಸ್ನೇಹಿತರು

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ Read More »

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು

ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆ‌ರ್ ದಾಖಲಿಸಲಾಗಿದೆ.  ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು Read More »

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು

ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಭೋಜೇಗೌಡ ಹಾಗೂ ವಿವೇಕಾನಂದ ಅವರ ಆಪ್ತ ವಲಯದಲ್ಲಿ ಹರ್ಷ ಮುಗಿಲುಮುಟ್ಟಿದೆ.

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು Read More »

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ

ಪುತ್ತೂರು : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ ಜೂ.16 ಭಾನುವಾರ ಬೆಂಗಳೂರು ಚೌಡೇಶ್ವರಿ ನಗರದ ನಮ್ಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಲಿದೆ. ಹತ್ತು ಕುಟುಂಬ ಹದಿನೆಂಟು ಗೋತ್ರದ ಕುಲಬಾಂಧವರಿಗೆ ಭಾವಿ ವಧು-ವರರ ಮುಖಾಮುಖಿ ಭೇಟಿ ಕಾರ್ಯಕ್ರಮ ಇದಾಗಿದೆ. ಆನ್‍ ಲೈನ್‍ ನಲ್ಲಿ ನೋಂದಾಯಿಸಲು ಜೂ.10 ಕೊನೆಯ ದಿನಾಂಕವಾಗಿದೆ. www.kdkgowdasamaja.com ನಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ ಅಧ್ಯಕ್ಷೆ ಶಶಿಪ್ರಭಾ ಮಡ್ತಿಲ- 9008949543, ಉಪಾಧ್ಯಕ್ಷೆ – ಗಂಗಮ್ಮ ಸುರೇಶ್‍

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ Read More »

error: Content is protected !!
Scroll to Top