ರಾಜ್ಯ

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು

ಬೀದರ್: ಆನ್‌ಲೈನ್ ಗೇಮ್ಸ್ ಹುಚ್ಚಿಗೆ ಹಣ ಕಳಕೊಂಡ ನೋವಿನಲ್ಲಿ ‌ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಮೃತನನ್ನು ಅಂತಿಮ ವರ್ಷದ ವೈದ್ಯಕೀಯ ಪದವಿ ಓದುತ್ತಿದ್ದ ಅನಿಷ್ಕಾರ್ ‌ಚೌಹಾಣ್ ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಸಲಗರ್ ಗ್ರಾಮದ ಯುವಕ ಈತ. ಆನ್‌ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕಾಲೇಜಿನ ವಸತಿ ಗೃಹದಲ್ಲೇ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ್ದಾನೆ. ಅನಿಷ್ಕಾರ್ ತನ್ನ ಸ್ನೇಹಿತನಿಂದಲೂ ‌ಸುಮಾರು ಎಪ್ಪತ್ತು ಸಾವಿರ ರೂ. […]

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು Read More »

ಮಡಿಕೇರಿಯಲ್ಲಿ ‌ಕಾಣಿಸಿಕೊಂಡ ಹುಲಿ: ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

ಮಡಿಕೇರಿ: ಇಬ್ನಿಳವಾಡಿಯಲ್ಲಿ ಹುಲಿ ಸಂಚಾರ ಕಂಡು ಬಂದಿದ್ದು,‌ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಮಡಿಕೇರಿಯ ಹೊರವಲಯದ ಎರಡು ಕಿ. ಮೀ. ದೂರದ ಪ್ರದೇಶದಲ್ಲಿ ಹುಲಿ ಚಲನವಲನ ಕಂಡುಬಂದಿರುವುದಾಗಿದೆ. ಪೊನ್ನಚೆಟ್ಟಿರ ಸಂದೀಪ್ ಎಂಬವರ ತೋಟದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಅರಣ್ಯ ಇಲಾಖೆಗೂ ಈ‌ ಕುರಿತು ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರದೇಶದ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯನ್ನು ಹೋಲುವ ಪ್ರಾಣಿಯ ಓಡಾಟದ ಬಗ್ಗೆ ಮಾಹಿತಿ ಇತ್ತು. ಅದು ಹುಲಿಯೋ, ಪೆರ್ಪಣವೋ ಎಂಬ ಗೊಂದಲವೂ

ಮಡಿಕೇರಿಯಲ್ಲಿ ‌ಕಾಣಿಸಿಕೊಂಡ ಹುಲಿ: ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಮಗಳ ಜೊತೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ: ದೂರು ದಾಖಲು

ಶಿರ್ವ: ಗಂಡನ ಜೊತೆಗೆ ಊಟದ ವಿಷಯದಲ್ಲಿ ಜಗಳವಾಗಿದ್ದು, ಹೆಂಡತಿ ತನ್ನ ಅಪ್ರಾಪ್ತ ಪುತ್ರಿಯನ್ನು ಕರೆದುಕೊಂಡು ನಾಪತ್ತೆಯಾಗಿರುವ ಘಟನೆ ಬೆಳಪು ಗ್ರಾಮದ ಪುಂಚಲಕಾಡಿನಲ್ಲಿ ನಡೆದಿದೆ. ರೇಣುಕಾ ಗಂಗಾಧರ್ ಪೂಜೇರ್ (28) ಮತ್ತು ಪ್ರತೀಕ್ಷಾ ಗಂಗಾಧರ್ ಪೂಜೇರ್(11) ಎಂಬವರೇ ನಾಪತ್ತೆಯಾದವರು. ಗಂಡ ಮತ್ತು ಹೆಂಡತಿಯ ನಡುವೆ ಮಾ. 20 ರಂದು ಊಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಬಳಿಕ ಕೆಲಸದ ಕಾರಣಕ್ಕೆ ಅಂಗಡಿಗೆ ಹೋಗುವುದಾಗಿ ಹೇಳಿ ಗಂಡ ಮನೆಯಿಂದ ತೆರಳಿದ್ದಾರೆ. ಕೆಲಸ ಮುಗಿಸಿ ಗಂಡ ರಾತ್ರಿ ವೇಳೆ ಮನೆಗೆ ಬಂದಿದ್ದು, ಆಗ

ಮಗಳ ಜೊತೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ: ದೂರು ದಾಖಲು Read More »

ಬೈಕ್ ವಿದ್ಯುತ್ ಕಂಬಕ್ಕೆ ಬಡಿದು ಯುವಕ ಸಾವು

ಸುಳ್ಯ: ನಿಯಂತ್ರಣ ತಪ್ಪಿ ಬೈಕೊಂದು ‌ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಸವಾರ ಮೃತಪಟ್ಟ ಘಟನೆ ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರ ನಡೆದಿದೆ. ಮೆಸ್ಕಾಂ ಗುತ್ತಿಗೆ ನೌಕರ ಲೋಕನಾಥ್ ಎಂಬವರೇ ‌ಮೃತ ದುರ್ದೈವಿ. ಸುಳ್ಯದಿಂದ ತಮ್ಮ ಮನೆಯತ್ತ ಮರಳುತ್ತಿದ್ದ ‌ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾದರೂ, ಗಾಯದ ತೀವ್ರತೆ ಹೆಚ್ಚಾಗಿದ್ದ ಕಾರಣ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಬೈಕ್ ವಿದ್ಯುತ್ ಕಂಬಕ್ಕೆ ಬಡಿದು ಯುವಕ ಸಾವು Read More »

17 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 17 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೇರಳಕಟ್ಟೆಯ ನಾಟೇಕಲ್ ನಿವಾಸಿ ರಿಯಾಜ್ ಎಂದು ಗುರುತಿಸಲಾಗಿದೆ. ಈತ ಬರ್ಕೆ ಪೊಲೀಸ್‌ ಠಾಣೆಯ ಅಪರಾಧ ಕ್ರಮಾಂಕ 15/2009ರಡಿ, ಕಾಪಿರೈಟ್ ಕಾಯ್ದೆಯ ಕಲಂ 52(ಎ) ಮತ್ತು 63ರ ಪ್ರಕಾರ ದಾಖಲಾಗಿದ್ದ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಪ್ರಕರಣ ದಾಖಲಾದ ನಂತರದಿಂದಲೇ ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಸುಮಾರು 17 ವರ್ಷಗಳಿಂದ ಪರಾರಿಯಾಗಿರುವ ಆರೋಪಿತನನ್ನು ಬರ್ಕೆ ಪೊಲೀಸ್‌ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾರ್ಚ್

17 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ Read More »

SSLC ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋದ ಬಡ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಿದ ಅಧಿಕಾರಿಗಳು

ಗದಗ: ಬಡತನದ ಕಾರಣಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಹೋಗದೆ ದ್ರಾಕ್ಷಿ ತೋಟದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದು ಅಧಿಕಾರಿಗಳು ಪರೀಕ್ಷೆ ಬರೆಸಿದ ಘಟನೆ ಮುಂಡರಗಿಯ ಬರ್ಡೂರಿನಲ್ಲಿ ನಡೆದಿದೆ. ಪಲ್ಲವಿ ಎಂಬ ಬಾಲಕಿ ಈ ಬಾರಿ ಹತ್ತನೇ ತರಗತಿ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಮನೆಯಲ್ಲಿ ತೀರದ ಬಡತನದ ಕಾರಣಕ್ಕೆ ಆಕೆ ತನ್ನ ಪರೀಕ್ಷೆಗೂ ಹೋಗದೆ ದ್ರಾಕ್ಷಿ ತೋಟಕ್ಕೆ ದಿನಗೂಲಿ ಕೆಲಸಕ್ಕೆ ಹೋಗಿದ್ದಳು. ಅವಳ ಪರಿಸ್ಥಿತಿ ಅರಿತ ಅಧಿಕಾರಿಗಳು ಆಕೆ ಕೆಲಸ ಮಾಡುತ್ತಿದ್ದಲ್ಲಿಗೆ ತೆರಳಿ, ಆಕೆಯ ಪೋಷಕರ ಮನವೊಲಿಸಿ

SSLC ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋದ ಬಡ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಿದ ಅಧಿಕಾರಿಗಳು Read More »

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ: ಈಜಲೆಂದು ಹೋದ ಬಾಲಕ ಕೃಷಿ ಹೊಂಡದಲ್ಲಿ ‌ಮುಳುಗಿ ಸಾವನ್ನಪ್ಪಿದ ಘಟನೆ ಮಳವಳ್ಳಿಯ ನಂದೀಪುರದಲ್ಲಿ ‌ನಡೆದಿದೆ. ಕೊಡೀಹಳ್ಳಿ ನಿವಾಸಿ ಪೃಥ್ವಿನ್ (15) ಮೃತ ಬಾಲಕ. ಈತ ದಳವಾಯಿ ಕೊಡೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ 8 ತರಗತಿ ವಿದ್ಯಾರ್ಥಿ. ಶಾಲೆಗೆ ರಜೆ ಇದ್ದುದರಿಂದ ತನ್ನ ನಾಲ್ವರು ಗೆಳೆಯರ ಜೊತೆಗೆ ಭಾನುವಾರ ಈಜಾಟಕ್ಕೆ ತೆರಳಿದ್ದ. ಆದರೆ ಸಂಜೆಯ ವರೆಗೂ ಬಾಲಕ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಮನೆಯವರು ಶೋಧ ನಡೆಸಿದ್ದರು. ಬಾಲಕನ ಮೃತದೇಹ ‌ನಂದೀಪುರದ ರಾಜೇಗೌಡ ಎಂಬವರ ಜಮೀನಿನ ಕೃಷಿ

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು Read More »

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ

ಬಂಟ್ವಾಳ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ‌ವಾರಂಟ್ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ‌ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ ಹತ್ತಕ್ಕೂ ಹೆಚ್ಚು ಬಾರಿ ವಾರಂಟ್ ಸಹ ಜಾರಿಯಾಗಿತ್ತು. ಸದ್ಯ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ Read More »

ಉಗ್ರರ ‌ಜೊತೆ ನಂಟು: ಶಂಕಿತ ಆರೋಪಿಗಳನ್ನು ಬಂಧಿಸಿದ ಆಂಧ್ರಪ್ರದೇಶ ಪೊಲೀಸರು

ವಿಜಯವಾಡ: ಉಗ್ರವಾದಿ ಸಿದ್ಧಾಂತಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದ ಮತ್ತು ಉಗ್ರರ ಸಂಘಟನೆಗಳ ಜೊತೆೆಗ ಸಂಪರ್ಕ ಇರಿಸಿಕೊಂಡಿದ್ದ ಆರೋಪದಲ್ಲಿ ಮೂವರು ಶಂಕಿತರನ್ನು ಆಂಧ್ರಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಂಕಿತ ಉಗ್ರರನ್ನು ಮಹಮ್ಮದ್ ರಹಮತುಲ್ಲಾ ಷರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮಹಮ್ಮದ್ ದಾನಿಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ವಿಜಯವಾಡದ ಟೂ ಟೌನ್ ವ್ಯಾಪ್ತಿಯ ನಿವಾಸಿಗಳಾಗಿದ್ದಾರೆ. ಗುಪ್ತಚರ ಇಲಾಖೆಯ ಸಂಘಟಿತ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆನ್-ಲೈನ್ ಚಟುವಟಿಕೆಗಳ ಮೇಲೆ ನಿಗಾ ಇರಿಸಿದ್ದ ಪೊಲೀಸರಿಗೆ, ಸದ್ಯ ಬಂಧನದಲ್ಲಿರುವ

ಉಗ್ರರ ‌ಜೊತೆ ನಂಟು: ಶಂಕಿತ ಆರೋಪಿಗಳನ್ನು ಬಂಧಿಸಿದ ಆಂಧ್ರಪ್ರದೇಶ ಪೊಲೀಸರು Read More »

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ

ವಿಟ್ಲ: ಮುಚ್ಚಿರಪದವಿನಲ್ಲಿ ಸರ್ಕಾರಿ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಬಸ್ಸು ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿತ್ತು. ಟಿಪ್ಪರ್ ‌ಪೆರುವಾಯಿ ಕಡೆಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಇವೆರಡೂ ವಾಹನಗಳು ಮುಖಾಮುಖಿ ಗುದ್ದಿಕೊಂಡಿವೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ಅಪಘಾತದ ಬಳಿಕ ಎರಡೂ ವಾಹನಗಲ‌ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಪ್ಪರ್ ‌ಚಾಲಕ ಬಿಲಾಲ್ ‌ಎಂಬಾತ‌ ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಕಂಡಕ್ಟರ್ ವಿಟ್ಲ

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ Read More »

error: Content is protected !!
Scroll to Top