ರಾಜ್ಯ

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ : ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತ ಬಾಲಕರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು ಮುಳುಗಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ […]

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು Read More »

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ

ಬೆಂಗಳೂರು: ಯುವತಿಯೊಬ್ಬಳು  ಮನೆಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ Read More »

ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್

ಇತ್ತೀಚೆಗೆ ಮಾಲಿವುಡ್ ನಲ್ಲಿ ಮಾತ್ರ ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಅದು ಬಿಟ್ಟರೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಕೈಲೆಕ್ಕದಷ್ಟು ಸಿನಿಮಾ ರಿಲೀಸ್‌ ಆಗುತ್ತಿವೆ. ಓಟಿಟಿ, ಪ್ಯಾನ್ ಇಂಡಿಯಾ ಬಂದ ಬಳಿಕ ಈಗೀಗ ಮೊದಲಿನ ಹಾಗೆ ಸ್ಟಾರ್ ನಟರ ಸಿನಿಮಾಗಳು ತಿಂಗಳಿಗೊಮ್ಮೆ ಅಥವಾ ವಾರದಲ್ಲಿ ಒಂದಾದರೂ ಬರುವುದಿಲ್ಲ. ಸ್ಟಾರ್ ನಟರು ಪ್ಯಾನ್ ಇಂಡಿಯಾ ರಿಲೀಸ್ ಗಾಗಿ ವರ್ಷದಲ್ಲಿ ಅಥವಾ ಎರಡು ವರ್ಷಕ್ಕೊಂದು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಆ ಸಿನಿಮಾಗಳು ರಿಲೀಸ್ ಆದ ವೇಳೆ ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳೇ

ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್ Read More »

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದೇ ವಾಪಸ್ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್, ಲುಫ್ತಾನ್ಸಾ ಏರ್ಲೈನ್ಸ್ ಮೂಲಕ ಪ್ರಜ್ವಲ್ ಭಾರತಕ್ಕೆ

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ Read More »

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ

ಬೆಂಗಳೂರು : ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ Read More »

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ

ಬೆಂಗಳೂರು: ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನ 5 ದಿನ ಬಿರುಗಾಳಿ, ಗುಡುಗು ಸಮೇತ ಮಳೆ ಆಗಲಿದೆ. ಈ ವರೆಗೆ ಧಾರವಾಡದಲ್ಲಿ 8cm ಮಳೆ, ದಕ್ಷಿಣ ಕನ್ನಡದಲ್ಲಿ 6 cm ಮಳೆ, ಬೆಳಗಾವಿ, ಚಿಕ್ಕಮಗಳೂರು 5 cm ಮಳೆ ಆಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ Read More »

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಬೆಂಗಳೂರು: ಹೈಕೋರ್ಟ್ ಮಹಿಳಾ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಮೃತಪಟ್ಟ ವಕೀಲೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್‌ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್‌ನಲ್ಲಿ ವಾಸವಿದ್ದರು. ಅವರ ಪತಿ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಪಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದರೂ ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ! Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ

ಕೊಡಗು:  ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು

ಕೊಡಗು: ಕ್ರಿಕೆಟ್ ಪಂದ್ಯಾಟದ ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ಕೊಡಗಿನ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ್ (34) ವಿದ್ಯುತ್ ಶಾಕ್‍ ನಿಂದ ಮೃತಪಟ್ಟ ಯುವಕ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾಟಕ್ಕೆಂದು ಯುವಕರ ತಂಡ ಶುಕ್ರವಾರ ರಾತ್ರಿ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆರಿಫ್ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಈ ವೇಳೆ

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಹತ್ತನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ತನ್ನೊಂದಿಗೆ ನಿಶ್ಚಿತಾರ್ಥ ಮು೦ದೂಡಲಾದ ಹಿನ್ನಲೆಯಲ್ಲಿ ಕೋಪಗೊಂಡು ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ Read More »

error: Content is protected !!
Scroll to Top