ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ
ಬಳ್ಳಾರಿ : ಬಳ್ಳಾರಿ ನಗರದ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಎಸಿ ಸ್ಪೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 6 ಮಂದಿ ಗಾಯಗೊಂಡು ಓರ್ವ ಸ್ಥಿತಿ ಗಂಭೀರವಾಗಿದೆ. ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]
ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ Read More »










