ರಾಜ್ಯ

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ

ಸಕಲೇಶಪುರ:ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೊಲ್ಲಹಳ್ಳಿ ಗ್ರಾಮದ ಮಂಜು ಎಂಬವರಿಗೆ ಸೇರಿದ ತೆಂಗಿನಮರದ ಗರಿಗಳನ್ನು ಕತ್ತರಿಸಲು ನವೀನ್ ಎಂಬಾತ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮರವೇರಿದ್ದರು. ತೆಂಗಿನ ಗರಿಗಳನ್ನು ಕತ್ತರಿಸಿ ಕೆಳಗೆ ಇಳಿಯುತ್ತಿರಬೇಕಾದರೆ ಮರದಲ್ಲಿಯೇ ನವೀನ್ ಪ್ರಜ್ಞೆ ತಪ್ಪಿದ್ದಾನೆ. ಇದನ್ನು ಗಮನಿಸಿದ ಮಂಜು ಅವರು ಹಾಗೂ ಸ್ಥಳೀಯರು ಕೂಡಲೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಏಣಿ ಮೂಲಕ ಮರವೇರಿ, ಸೊಂಟಕ್ಕೆ ಹಗ್ಗ ಕಟ್ಟಿ ನವೀನ್‌ನನ್ನು ರಕ್ಷಿಸಿದ್ದಾರೆ.

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ Read More »

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ

ಬೆಂಗಳೂರು: ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್‌ಆರ್‌ ಫಂಡ್ ಬ್ಲ್ಯಾಕ್ ಮನಿಯನ್ನು ಖಾಸಗಿ ಟ್ರಸ್ಟ್‌ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಿಎಸ್‌ಆರ್‌ ಫಂಡ್ ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್‌ಗಳಿಗೆ ನೀಡುವುದಾಗಿ ಕೋಟಿ

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ Read More »

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ

ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್‍ ವಲಯದಲ್ಲಿ ಆತಂಕ ಮೂಡಿದೆ. ವೀರಪ್ಪ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯಿಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯರಿಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯಿಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ Read More »

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಗನ್ ಸಹಿತ ವ್ಯಕ್ತಿಯೊಬ್ಬ ಬಂದು ಸಿಎಂಗೆ ಹಾರ ಹಾಕಿದ ಘಟನೆ ನಡೆದಿದೆ. ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡುತ್ತಿದ್ದರು. ಈ ವೇಳೆ

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ Read More »

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು

ಬೆಂಗಳೂರು: ಉತ್ತರ  ಲೋಕಸಭಾ ಕ್ಷೇತ್ರದ  ಅಭ್ಯರ್ಥಿ ಶೋಭಾ ಕರಂದ್ಲಾಜೆ  ಅವರ ರ್ಯಾಲಿ ನಡೆಯುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಓರ್ವರು ಮೃತಪಟ್ಟ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅಪಘಾತದಿಂದ ಮೃತಪಟ್ಟವರು. ಪ್ರಕಾಶ್ ಇಂದು ಬೆಳಗ್ಗೆ ಹೋಂಡಾ ಆ್ಯಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್‌ ಮಾಡಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದಿದ್ದು, ಅದು ಬೈಕ್‌ಗೆ ತಾಗಿದೆ. ಪರಿಣಾಮ ಪ್ರಕಾಶ್ ಕೆಳಗೆ ಬಿದ್ದಿದ್ದಾರೆ.

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು Read More »

5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆ

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿ 5,8, 9 ಹಾಗೂ 11 ನೇ ತರಗತಿಗಳಿಗೆ ನಡೆಸಿದ ಬೋರ್ಡ್ ಪರೀಕ್ಷೆಗಳ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.. ಕರ್ನಾಟಕ ರಾಜ್ಯವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ತೊಂದರೆ ಉಂಟುಮಾಡುವಂತಿದೆ.  ಹೈಕೋರ್ಟ್ ನ ಆದೇಶವು ಆರ್ ಟಿಇ ಕಾಯ್ದೆಗೆ ಅನುಗುಣವಾಗಿದೆ ಎಂದು ಮೇಲ್ನೋಟಕ್ಕೆ ತೋರುತ್ತಿಲ್ಲ. ನೋಟಿಸ್ ನ್ನು ಎರಡು ವಾರಗಳಲ್ಲಿ ಹಿಂದಿರುಗಿಸಲಾಗುವುದು. ಆದೇಶದ ಕಾರ್ಯಾಚರಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗುವುದು

5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆ Read More »

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಏ.14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಒಂದು ದಿನದಲ್ಲಿ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮುಗಿದ ನಂತರ ಮೋದಿ

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ Read More »

ಲೋಕಸಭಾ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಭೇಟಿ ನೀಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಹೆಗಡೆ ಆಪ್ತರು ಉಪಸ್ಥಿತರಿದ್ದರು.

ಲೋಕಸಭಾ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಲತಾ ಅವರ ಜತೆಗೆ ಹಲವಾರು ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್‍.ಅಶೋಕ್‍, ರಾಜ್ಯ ಬಿಜೆಪಿ ಘಟಕದ

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್ Read More »

ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್‍

ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿ ಹೈಕೋರ್ಟ್‍ ಆದೇಶ ನೀಡಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‍ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಭರತ್ ಪರ ನ್ಯಾಯವಾದಿ ಅರುಣ್ ಶ್ಯಾಮ್‍ ಅವರ ವಾದ ಆಲಿಸಿದ ಹೈಕೋರ್ಟ್‍ ಗಡಿಪಾರು ಆದೇಶವನ್ನು ರದ್ದುಮಾಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ | ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್‍ Read More »

error: Content is protected !!
Scroll to Top