ರಾಜ್ಯ

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ. ಎನ್ ಐ ಎ ಅಧಿಕಾರಿಗಳು ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5, ಉತ್ತರಪ್ರದೇಶದ 1 ಕಡೆ ಸೇರಿದಂತೆ 18 ಕಡೆಗಳಲ್ಲಿ ಎನ್ ಐ ಎ ತಂಡಗಳು ದಾಳಿ ನಡೆಸಿತ್ತು. ಈ ಹಿಂದೆ […]

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ Read More »

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ |

ಬೆಂಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಚುನಾವಣಾಧಿಕಾರಿಯ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಚುನಾವಣಾಧಿಕಾರಿ ಮೂಲಕ ನಾಮಪತ್ರ ಸಲ್ಲಿಸಬಹುದು. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ | Read More »

ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍

ಪುತ್ತೂರು: ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‍ ಅವರನ್ನು ನೇಮಕ ಮಾಡಲಾಗಿದ್ದು, ಈ ಮೂಲಕ ಕಟೀಲ್‍ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಇದರ ಜತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಣಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್‍ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯಾಗಿ ನಿರ್ಮಲ್ ಕುಮಾರ್ ಸುಲಾನಾ

ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍ Read More »

ತಿರುಪತಿ ದೇಗುಲದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ | ಚುನಾವಣೆ- ಅವ್ಯವಹಾರ ಲಿಂಕ್ ಆರೋಪ

ತಿರುಪತಿ: ತಿರುಪತಿ ದೇಗುಲದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಸರಕಾರದ ಅನುಮತಿ ಇಲ್ಲದೆ ಕೋಟ್ಯಂತರ ರೂಪಾಯಿ ಎಂಜಿನಿಯರಿಂಗ್ ಕಾಮಗಾರಿ ಆರ್ಡರ್ ಗಳನ್ನು ನೀಡಲಾಗಿದೆ ಎಂದು ಆರೋಪ ಕೇಳಿ ಬರುತ್ತಿದೆ. ತೆಲುಗು ದೇಶಂ ಪಾರ್ಟಿ ವಕ್ತಾರ ನೀಲಾಯಪಾಲೆಂ ವಿಜಯ್ ಕುಮಾರ್, ದೇವಸ್ಥಾನದ ಟ್ರಸ್ಟ್ ಬೋರ್ಡ್ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ ಧರ್ಮಾ ರೆಡ್ಡಿ ವಿರುದ್ಧ ಈ ಗಂಭೀರ ಆರೋಪ ಮಾಡಲಾಗಿದೆ. ಕರುಣಾಕರ್ ರೆಡ್ಡಿ ಮತ್ತು ಧರ್ಮಾ ರೆಡ್ಡಿ ಉಸ್ತುವಾರಿಯಲ್ಲಿ

ತಿರುಪತಿ ದೇಗುಲದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ | ಚುನಾವಣೆ- ಅವ್ಯವಹಾರ ಲಿಂಕ್ ಆರೋಪ Read More »

ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ಆದಾಯ ಮೀರಿದ ಸಂಪತ್ತು ಗಳಿಸಿರುವ ಮಾಹಿತಿಯಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 13 ಜಿಲ್ಲೆಗಳಲ್ಲಿ 60 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಮನೆ ಸೇರಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮುಂಜಾನೆಯೇ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಂಗನಾಥ್ ಅವರಿಗೆ ಸೇರಿದ ಸದಾಶಿವನಗರ ಹಾಗೂ ಯಲಹಂಕ ಮನೆ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು

ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ Read More »

ಕೋಟ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ

ಬೆಂಗಳೂರು: ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಶ್ರೀಗಳು ಅವರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಠದ ಇತರ ಸ್ವಾಮೀಜಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ Read More »

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯಾದಂತ ಮತದಾನ ನಡೆಯುವ ದಿನವಾದ ಏ.26 ಹಾಗೂ ಮೇ 7 ರಂದು ಮತದಾನ ಮಾಡಲು ನೌಕರರಿಗೆ ಅನುಕೂಲವಾಗುವಂತೆ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ವೇತನ ಸಹಿತ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಏ.26 ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮತದಾನದ ದಿನ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳಡಿಯಲ್ಲಿ ವೇತನ ಸಹಿತ

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ Read More »

ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು

ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಾದವರು ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಸ್ಪೋಟದ ಪ್ರಧಾನ ಆರೋಪಿಗಳಾದ ಮಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಜತೆ ನಿರಂತದ ಸಂಪರ್ಕದಲ್ಲಿದ್ದು, ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಜತೆ ಶಂಕಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ

ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು Read More »

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ  ಮೂಲಕ ಲೋಕಸಭೆ ಚುನಾವಣೆ ಮೊದಲು ಬಿಜೆಪಿಗೆ ಬರುವ ಮೂಲಕ ಬಲ ತುಂಬಿದ್ದಾರೆ. ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ Read More »

ಇನ್ನು ಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ ಹೆಸರು “ಶಿವಶಕ್ತಿ’ | ಪ್ರಧಾನಿ ಘೋಷಿಸಿದ 7 ತಿಂಗಳ ಬಳಿಕ ಅನುಮೋದನೆ

ಬೆಂಗಳೂರು: ಇನ್ನುಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ್ನು ‘ಶಿವ ಶಕ್ತಿ’ ಎಂಬ ಹೆಸರಿನಿಂದ ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಇದೀಗ ಏಳು ತಿಂಗಳ ನಂತರ ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ಮಾರ್ಚ್ 19 ರಂದು ಈ ಹೆಸರನ್ನು ಅನುಮೋದಿಸಿದೆ. ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುವ ಗೆಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ  “ಐಎಯು ವರ್ಕಿಂಗ್ ಗ್ರೂಪ್ ಫಾರ್ ಪ್ಲಾನೆಟರಿ ಸಿಸ್ಟಮ್ ನಾಮಕರಣವು ಚಂದ್ರಯಾನ-3 ರ ವಿಕ್ರಮ್

ಇನ್ನು ಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ ಹೆಸರು “ಶಿವಶಕ್ತಿ’ | ಪ್ರಧಾನಿ ಘೋಷಿಸಿದ 7 ತಿಂಗಳ ಬಳಿಕ ಅನುಮೋದನೆ Read More »

error: Content is protected !!
Scroll to Top