ರಾಜ್ಯ

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಹೊಸದಿಲ್ಲಿ: ಕಾಂಗ್ರೆಸ್ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  46 ಅಭ್ಯರ್ಥಿಗಳ ಹೆಸರುಗಳನ್ನೊಳಗೊಂಡ ಈ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಗೊಂಡಿದ್ದು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ […]

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ Read More »

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ 5, 8 ಮತ್ತು 9 ನೇ ತರಗತಿಯ ಪರೀಕ್ಷೆ ವಿಳಂಬದ ಹಿನ್ನಲೆಯಲ್ಲಿ ಈ ಭಾರಿ ಬೇಸಿಗೆವಿಸ್ತರಣೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬಿರು ಬೇಸಿಗೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೀರಿನ ಕೊರತೆ ಕಾಡುತ್ತಿದೆ‌. ಈ ಹಿನ್ನಲೆಯಲ್ಲಿ ಬೇಸಿಗೆ ರಜೆಯನ್ನು ಜೂ.10 ರ ತನಕ ವಿಸ್ತಿರಿಸುವ ನಿರೀಕ್ಷೆಯಿದೆ. ಪ್ರತಿಭಾರಿ ಮೇ 24 ರ ವೇಳೆಗೆ ಶಾಲಾರಂಭ ಮಾಡಲಾಗುತ್ತಿತ್ತು. ರಿವಿಸನ್ ಹಾಗೂ ಶಾಲಾ ತರಗತಿಗಳಿಗೆ ಮಕ್ಕಳನ್ನು ಅಣಿಗೊಳಿಸುವ ಕಾರಣಕ್ಕೆ ಶಾಲಾ ಆರಂಭೋತ್ಸವ, ಶಾಲೆಗೆ ದಾಖಲೀಕರಣದಂತಹ

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ Read More »

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸಹಿತ ಇತರ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತುಮಕೂರಿನ ಕೆರೆಯೊಂದರ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಹಾಗೂ ಶಿರ್ಲಾಲು ಗ್ರಾಮದ ಸಿದ್ದಿಕ್ (34)

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ Read More »

ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ !

ತುಮಕೂರು: ಸುಟ್ಟುಹೋದ ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಲ್ಲಿ ಕೆರೆಯೊಂದರ ಬಳಿ ಪತ್ತೆಯಾಗಿದೆ. ಬೆಳ್ತಂಡಗಡಿ ತಾಲೂಕಿನ ಟಿ.ಬಿ.ಕ್ರಾಸ್ ಬಳಿಯ ನಿವಾಸಿಗಳಾದ ಆಟೋ ಚಾಲಕ ಸಾಹುಲ್ (45), ಮದ್ದಡ್ಕ ನಿವಾಸಿ ಇಸಾಕ್‍ (56) ಹಾಗೂ ಶಿರ್ಲಾಲ್‍ ನಿವಾಸಿ ಇಮ್ತಿಯಾಝ್ (34) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಈ ಮೂವರು ತುಮಕೂರು ಕಡೆಗೆ ಯಾಕೆ ತೆರಳಿದ್ದಾರೆ ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ ! Read More »

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್

ಬೆಂಗಳೂರು: ತಡೆಹಿಡಿಯಲ್ಪಟ್ಟ 5,8, ಹಾಗೂ 9 ನೇ ತರಗತಿಗೆ ನಡೆಸಿದ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ನಡೆಸುವಂತೆ ರಾಜ್ಯ ಹೈಕೋರ್ಟ್ ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್‌ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಎಕ್ಸಾಂಗೆ ಅಸ್ತು ಎಂದಿರುವ ಜತೆಗೇ

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್ Read More »

ಲೋಕಸಭೆ ಚುನಾವಣೆ : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ | ದ.ಕ. ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್

ಹೊಸದಿಲ್ಲಿ: ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ : ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್, ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್, ಕಲಬುರಗಿ – ರಾಧಾಕೃಷ್ಣ, ರಾಯಚೂರು-ಜಿ.ಕುಮಾರನಾಯಕ್, ಬೀದರ್-ಸಾಗರ್ ಖಂಡ್ರೆ, ಕೊಪ್ಪಳ-ರಾಜಶೇಖರ್ ಹಿಟ್ನಾಳ, ಧಾರವಾಡ-ವಿನೋದ್ ಅಸೂಟಿ, ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್, ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್, ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ, ದಕ್ಷಿಣಕನ್ನಡ-ಪದ್ಮರಾಜ್, ಚಿತ್ರದುರ್ಗ-ಬಿ.ಎನ್ ಚಂದ್ರಪ್ಪಮೈಸೂರು ಕೊಡಗು -ಎಂ. ಲಕ್ಷ್ಮಣ್,

ಲೋಕಸಭೆ ಚುನಾವಣೆ : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ | ದ.ಕ. ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್ Read More »

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕಲು ನಿರಾಕರಿಸಿದ್ದು, ಈ ಕುರಿತು ರಾಜ್ಯ ಸರಕಾರದ ಎದುರು ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂಬ ವರದಿಯನ್ನು ರಾಷ್ಟ್ರೀಯ ದೃಶ್ಯ ಮಾಧ್ಯಮವೊಂದು ಬಿತ್ತರಿಸಿದೆ. ದೇವಾಲಯಗಳಿಗೆ ಮಾತ್ರ ಯಾಕೆ ತೆರಿಗೆ, ಇತರ ಧಾರ್ಮಿಕ ಸಂಸ್ಥೆಗಳಿಗೆ ತೆರಿಗೆ ಯಾಕೆ ವಿಧಿಸಬಾರದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿಗಳ ಮಸೂದೆ-2024 ನ್ನು ಸಿದ್ಧರಾಮಯ್ಯ

ವಿವಾದಾತ್ಮಕ ದೇವಾಲಯಗಳ ತೆರಿಗೆ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರಿಂದ ನಿರಾಕರಣೆ Read More »

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍.

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರುವಂತೆ ಕಾಂಗ್ರೆಸ್ ಪ್ರಮುಖರಿಂದ ಆಹ್ವಾನ ಬಂದದ್ದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ನನಗೆ ಟಿಕೇಟ್ ತಪ್ಪಿದ್ದರಿಂದ ಬಹಳ ನೋವಾಗಿರುವುದು ಸತ್ಯ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಮುಂದೆ ಪ್ರಶ್ಚಾತ್ತಾಪ ಅನುಭವಿಸುತ್ತಾರೆ ಎಂದು ತಿಳಿಸಿದ ಅವರು, ಮುಂದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍. Read More »

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಡಿ.ವಿ.ಸದಾನಂದ ಗೌಡರು ತಮ್ಮ ಮುಂದಿನ ನಡೆ ಕುರಿತು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಅವರ ನಡೆ ನಿಗೂಢವಾಗಿಯೇ ಉಳಿದಿದೆ. ಮುನಿಸಿಕೊಂಡಿರುವ ಸದಾನಂದ ಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ನೀಡಿದೆ. ಇನ್ನೊಂದೆಡೆ ಡಿ.ವಿ.ಸದಾನಂದ ಗೌಡರನ್ನು ಸೆಳೆಯಲು ಕಾಂಗ್ರೆಸ್‌ನಿಂದಲೂ ಪ್ರಯತ್ನ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಡಿ.ವಿ.ಸದಾನಂದ ಗೌಡ ಮಾ.19ರಂದು ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ Read More »

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ !

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಕಾಂಗ್ರೆಸ್‌ ಬರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಈ ಮೂಲಕ ಡಿವಿಎಸ್ ಅವರಿಗೆ ಕಾಂಗ್ರೆಸ್ ಸೇರ್ಪಡೆಗೆ ತಣ್ಣೀರು ಎರಚಿದಂತಾಗಿದೆ. ಸದಾನಂದ ಗೌಡ ಸಹಿತ ಬಿಜೆಪಿಯ ಹಲವು ಅತೃಪ್ತ ನಾಯಕರ ಕಾಂಗ್ರೆಸ್‌ ಸೇರುವ ಯೋಜನೆ ಠುಸ್‌ ಆಗಿದೆ ಎಂದು ಮೂಲವೊಂದು ತಿಳಿಸಿದೆ. ಮೈಸೂರು ಕ್ಷೇತ್ರದಿಂದ ಸದಾನಂದ ಗೌಡರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ವದಂತಿ ದಟ್ಟವಾಗಿ ಹರಡಿತ್ತು. ಈ ಪ್ರಸ್ತಾವಕ್ಕೆ ಒಂದೇ ಮಾತಿನಲ್ಲಿ ಸಿದ್ದರಾಮಯ್ಯ ಆಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ ! Read More »

error: Content is protected !!
Scroll to Top