ರಾಜ್ಯ

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಗಾಳಿ ಮಳೆಗೆ ಕೇಬಲ್ ಒಂದು ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಚ ಘಟನೆ ನಗರದ ಗೋಕುಲ ರಸ್ತೆಯ ಅರ್ಬನ್ ಓಯಸಿಸ್ ಮಾಲ್‌ನ ಸಮೀಪ ನಡೆದಿದೆ. ಮೃತರನ್ನು ತಾಜ್‌ ನಗರ ನಿವಾಸಿ ಮೀಜಾಮುಲ್ಲಾ ಮುಲ್ಲಾ ಮತ್ತು ಫಯಾಜ್ ಭಾಗವಾನ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬೈಕ್ ಮೂಲಕ ಗೋಕುಲ್ ರಸ್ತೆ ವಿಮಾನ ನಿಲ್ದಾಣದಿಂದ ಹೊಸೂರು ಕಡೆ ಬರುತ್ತಿದ್ದರು. ಈ ವೇಳೆ ಗಾಳಿ ಮಳೆಗೆ ಕೇಬಲ್‌ ತುಂಡಾಗಿ ಇವರ ಮೇಲೆ ಬಿದ್ದಿದೆ. ಅದನ್ನು ತಪ್ಪಿಸುವ ಪ್ರಯತ್ನದಲ್ಲಿದ್ದಾಗ […]

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು Read More »

ಆಕ್ಸಿಡೆಂಟ್‌ನಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಮೂಡಬಿದ್ರೆ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ನಡೆದಿದ್ದ ಆ್ಯಕ್ಸಿಡೆಂಟ್ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಚ ಘಟನೆ ನಡೆದಿದೆ. ಪಡುಮಾರ್ನಾಡು ನಿವಾಸಿ ಸಾತ್ವಿಕ್ ‌ಕುಲಾಲ್(21) ಎಂಬವರೇ ‌ಮೃತ ದುರ್ದೈವಿ. ಸಾತ್ವಿಕ್ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅವರಿಗೆ ಕಳೆದ 2025 ರ ಅಕ್ಟೋಬರ್ ತಿಂಗಳಿನಲ್ಲಿ ಬೈಕ್ ಆ್ಯಕ್ಸಿಡೆಂಟ್ ಸಂಭವಿಸಿತ್ತು. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ.

ಆಕ್ಸಿಡೆಂಟ್‌ನಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು Read More »

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ

ಮಂಗಳೂರು: ಅಟೋರಿಕ್ಷಾದಲ್ಲಿ ನಿಷೇಧಿತ ಡ್ರಗ್ಸ್ ಎಂಡಿಎಂಎ ಅನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೈದರ್ ಯಾನೆ ಹೈದರ್ ಆಲಿ, ಚೆಂಬುಗುಡ್ಡೆ ನಿವಾಸಿ ಮೊಹಮ್ಮದ್ ಆಜಾದ್ ಮತ್ತು ಜೈಸನ್ ‌ಮಿನೇಜಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪಂಪ್ವೆಲ್ ಮತ್ತು ಎಕ್ಕೂರು ಪ್ರದೇಶಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಅದರಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳು ಮತ್ತು ಅಟೋ‌ರಿಕ್ಷಾವನ್ನು ಪೊಲೀಸರು ವಶಕ್ಕೆ

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ Read More »

ರಾಜ್ಯಕ್ಕೆ ಹೆಚ್ಚುವರಿಯಾಗಿ ಬರಲಿದೆ 1,000 ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್‌

ಕಮರ್ಷಿಯಲ್ ಗ್ಯಾಸ್ ಬಳಕೆದಾರರು ರಿಜಿಸ್ಟ್ರರ್ ಮಾಡಿಕೊಳ್ಳುವುದು ಕಡ್ಡಾಯ ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಇಂದು ಸಭೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುವರಿಯಾಗಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಕಮರ್ಷಿಯಲ್ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ರಿಜಿಸ್ಟ್ರರ್ ಮಾಡಿಸಬೇಕು. ಗೇಲ್ ಕಂಪನಿಗೆ ರಿಜಿಸ್ಟ್ರರ್

ರಾಜ್ಯಕ್ಕೆ ಹೆಚ್ಚುವರಿಯಾಗಿ ಬರಲಿದೆ 1,000 ಕಮರ್ಷಿಯಲ್ ಗ್ಯಾಸ್‌ ಸಿಲಿಂಡರ್‌ Read More »

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ

ಬೆಂಗಳೂರು: ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ. 94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್‌ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಸಂದೀಪ್ ರಾವ್ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ Read More »

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ

ನಿರುದ್ಯೋಗಿಗಳಿಗೆ 25 ಕೋಟಿಗೂ ಅಧಿಕ ಮೊತ್ತ ವಂಚಿಸಿದ್ದ ದಂಪತಿ ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ Read More »

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಟಿಕೆಟ್‌ ಸಿಗದಿರುವುದರಿಂದ ಭುಗಿಲೆದ್ದ ಅಲ್ಪಸಂಖ್ಯಾತರ ಆಕ್ರೋಶ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ನಿರಾಶರಾಗಿರುವ ಮುಸ್ಲಿಮ್‌ ಸಮುದಾಯದವರು ಈಗ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತು ಯುವನಾಯಕರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯನ್ನು

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ Read More »

ಬಸ್‌ ಡಿವೈಡರ್‌ಗೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಚಾಲಕನ ನಿದ್ರೆಯ ಮಂಪರಿನಿಂದ ಸಂಭವಿಸಿದ ಭೀಕರ ಅಪಘಾತ ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚನ್ನಪಟ್ಟಣ ಬಳಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೇರಳಂ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬಸ್‌ ಡಿವೈಡರ್‌ಗೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು Read More »

ಏ.1ರಂದು ತುಮಕೂರಿಗೆ ರಾಷ್ಟ್ರಪತಿ ಆಗಮನ

ಬೆಂಗಳೂರು: ತುಮಕೂರಿನಲ್ಲಿ ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ ರಾಜಭವನದಲ್ಲಿ ತಂಗಲಿದ್ದಾರೆ. ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಮಾಹಿತಿ

ಏ.1ರಂದು ತುಮಕೂರಿಗೆ ರಾಷ್ಟ್ರಪತಿ ಆಗಮನ Read More »

ಶಾಮನೂರು ಮೊಮ್ಮಗ ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ

ಮುಸ್ಲಿಮರ ಬೇಡಿಕೆಗೆ ಸಿಗದ ಮನ್ನಣೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್​​ಗೆ ದೊಡ್ಡ ತಲೆನೋವಾಗಿದ್ದ ದಾವಣಗೆರೆ ದಕ್ಷಿಣ ಟಿಕೆಟ್​​ ಗೊಂದಲ ಕೊನೆಗೂ ಬಗೆಹರಿದಿದೆ. ಶಾಮನೂರ ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರ್​​​​​ಗೆ ಕಾಂಗ್ರೆಸ್ ಹೈಕಮಾಂಡ್​​ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ. ದಾವಣಗೆರೆ ಟಿಕೆಟ್‌ಗಾಗಿ ಮುಸ್ಲಿಮ್‌ ಸಮುದಾಯದವರು ಪಟ್ಟುಹಿಡಿದಿದ್ದರು. ಸಚಿವ ಜಮೀರ್‌ ಅಹ್ಮದ್‌ಖಾನ್‌ ಅಖಾಡಕ್ಕಿಳಿದು ಟಿಕೆಟ್‌ ಮುಸ್ಲಿಮರಿಗೆ ಟಿಕೆಟ್‌ ಕೊಡದಿದ್ದರೆ ರಾಜೀನಾಮೆ ನೀಡುವ ಧಮಕಿ

ಶಾಮನೂರು ಮೊಮ್ಮಗ ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ Read More »

error: Content is protected !!
Scroll to Top