ರಾಜ್ಯ

ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಆ ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ […]

ಕಚೇರಿಗಳು ಶೀಘ್ರ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ Read More »

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ

ರಾಯಚೂರು: ಕಿಡಿಗೇಡಿಗಳು ಟಿಪ್ಪುಸುಲ್ತಾನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪರಿಣಾಮ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮುಸ್ಲಿಂ ಸಮುದಾಯ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ಸಿರವಾರ ಪಟ್ಟಣದ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ ನಲ್ಲಿ ಹಾಕಲಾಗಿದ್ದ ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಆಕ್ರೋಶಗೊಂಡ ಪ್ರತಿಭಟನಾಕಾರರು ಚಪ್ಪಲಿ ಹಾರ ಹಾಕಿದವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದೆ. ಮಾಹಿತಿ ತಿಳಿದ ಪೊಲೀಸರು ಮುಖಂಡರ ಜತೆ

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ Read More »

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ

ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನ ಎನ್.ಸಿ.ಸಿ. ಕೆಡೆಟ್ ಗಳಾದ ಜುವೊ ಫಜಲ್ ಎಸ್. ನದಾಫ್ ಹಾಗೂ ಜುವೊ ಸುಜಲ್ ಶಂಖಲಾ  ಮುಖ್ಯಮಂತ್ರಿಗಳ ಶ್ಲಾಘನಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಎನ್.ಸಿ.ಸಿ.ಯಲ್ಲಿ ಅಸಾಧಾರಣ ಸೇವೆಗಾಗಿ ಅತ್ಯಂತ ಅರ್ಹ ಕೆಡೆಟ್ ಗಳಿಗೆ  ಮುಖ್ಯಮಂತ್ರಿಗಳ ಶ್ಲಾಘನಾ ಪದಕವನ್ನು ನೀಡಲಾಗುತ್ತದೆ. ಕಾಲೇಜಿನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಆಡಳಿತಾಧಿಕಾರಿ ಸಂತೋಷ್ ಶೆಟ್ಟಿ, ಪ್ರಾಂಶುಪಾಲ ನವೀನ್ ಪ್ರಸಾದ್, ಸಹಾಯಕ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಓಂಕಾರ್ ಇಬ್ಬರೂ ಸಾಧಕರನ್ನು ಅಭಿನಂದಿಸಿದ್ದಾರೆ

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ Read More »

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ

ಕೆರಗೋಡು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ತೆರವು ಮಾಡಲಾದ ಹನುಮ ಧ್ವಜವನ್ನು ಮತ್ತೆ ಅದೇ ಜಾಗದಲ್ಲಿ ಮರುಸ್ಥಾಪನೆ ಮಾಡುವ ಶಪಥದೊಂದಿಗೆ ಹಿಂದೂ ಭಕ್ತರ ಬೃಹತ್‌ ಪಾದಯಾತ್ರೆ ಸೋಮವಾರ ಬೆಳಗ್ಗೆ ಕೋದಂಡರಾಮ ದೇವಾಲಯದಿಂದ ಆರಂಭವಾಗಿದೆ. 15 ಕಿ.ಮೀ. ದೂರದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯುವ ಈ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಬಿಜೆಪಿ ನಾಯಕ ಸಿ.ಟಿ. ರವಿ, ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಹಾಗೂ ಕೆಆರ್‌ಆರ್‌ಪಿ

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ Read More »

ಶಾಲಾ ಬಸ್ – ಟ್ರಾಕ್ಟರ್ ನಡುವೆ ಭೀಕರ ಅಪಘಾತ… ನಾಲ್ವರು ಮಕ್ಕಳು ದುರ್ಮರಣ

ಟ್ರಾಕ್ಟರ್ ಮತ್ತು ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಮೃತಪಟ್ಟು ಸುಮಾರು ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದ ಸಮೀಪ ಸಂಭವಿಸಿದೆ. ಮೃತರನ್ನು ಗೋವಿಂದ ಜಂಬಗಿ(13), ಸಾಗರ ಕಡಕೋಳ(17), ಶ್ವೇತಾ ಪಾಟಿಲ್ (16), ಬಸವರಾಜ ಕೊಟಗಿ(17) ಎನ್ನಲಾಗಿದೆ. ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿ ತಡರಾತ್ರಿ ೧೨ ಗಂಟೆಗೆ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಆಲಗೂರು ಕಡೆಯಿಂದ ಕವಟಗಿ ಗ್ರಾಮಕ್ಕೆ ಕರೆದೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ

ಶಾಲಾ ಬಸ್ – ಟ್ರಾಕ್ಟರ್ ನಡುವೆ ಭೀಕರ ಅಪಘಾತ… ನಾಲ್ವರು ಮಕ್ಕಳು ದುರ್ಮರಣ Read More »

ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಆ ಲೋಕಸಭಾ ಚುನಾವಣೆ ಆಗುವವರೆಗೂ ನಾವು ವಿಶ್ರಾಂತಿ ಪಡೆಯುವ, ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಆರಂಭವಾದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಂದು ಕಡೆ ಲೋಕಸಭಾ ಚುನಾವಣೆ ಬರುತ್ತಿದೆ. ಇನ್ನೊಂದೆಡೆ ನೂರಾರು ವರ್ಷಗಳ

ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ Read More »

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ!

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ. ಅಲ್ಲದೇ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ  ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ, ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ. ಮೈಸೂರು: ಡಾ.ಸಿಎನ್

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ! Read More »

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?!

ಅಯೋಧ್ಯೆಯಲ್ಲಿ ನಿರ್ಮಾಣಗೊಂಡ ನೂತನ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೆಂದು ಅಂತಿಮಗೊಂಡ ಮೂರು ಮೂರ್ತಿಗಳಲ್ಲೊಂದನ್ನು ರಾಜ್ಯಕ್ಕೆ ತರಲು ರಾಘವೇಶ್ವರ ಶ್ರೀ ಉತ್ಸಾಹಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ಶಿಲ್ಪಿ ಗಣೇಶ್‌ ಭಟ್‌ ಅವರು ರಚಿಸಿದ ವಿಗ್ರಹ ಇದಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಂಡಿದೆ. ಉಳಿದೆರಡು ವಿಗ್ರಹಗಳನ್ನು ಅಯೋಧ್ಯೆಯಲ್ಲಿ ವೀಕ್ಷಣೆಗೆ ಇಡಲಾಗಿದೆ. ಇದನ್ನು ವೀಕ್ಷಿಸಿದ ಬಳಿಕ ರಾಘವೇಶ್ವರ ಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಚಿಸಿದ ಶ್ರೀರಾಮನ ವಿಗ್ರಹವನ್ನು ರಾಜ್ಯಕ್ಕೆ ತಂದು ಪ್ರತಿಷ್ಠಾಪಿಸಬೇಕೆಂಬ ಅಭಿಲಾಷೆ ನಮಗೂ ಇದೆ.

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?! Read More »

ಯತ್ನಾಳ್ ಫ್ಯಾಕ್ಟರಿ ಬಂದ್’ಗೆ ಆದೇಶ!!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಡೆತನದ ಫ್ಯಾಕ್ಟರಿಯನ್ನು ಬಂದ್ ಮಾಡಲು ರಾಜ್ಯ ಸರಕಾರ ಆದೇಶ ನೀಡಿದೆ. ಕಲಬುರಗಿ ತಾಲೂಕಿನ ಚಿಂಚೊಳ್ಳಿ ತಾಲೂಕಿನಲ್ಲಿ ಕಾರ್ಯಾಚರಿಸುತ್ತಿದ್ದ ಸಕ್ಕರೆ ಕಾರ್ಖಾನೆಯ ಮಾಲಿನ್ಯವನ್ನು ಜಲಾಶಯಕ್ಕೆ ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ್ದು, ವಿದ್ಯುತ್ ಸಂಪರ್ಕ ಕಡಿತ ಮಾಡುವಂತೆ ಸೂಚನೆ ನೀಡಲಾಗಿದೆ.

ಯತ್ನಾಳ್ ಫ್ಯಾಕ್ಟರಿ ಬಂದ್’ಗೆ ಆದೇಶ!! Read More »

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!!

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು, ”ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದ ನೀವೇ ಧನ್ಯರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿ ಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲವನ್ನು ತಮ್ಮ

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!! Read More »

error: Content is protected !!
Scroll to Top