ರಾಜ್ಯ

ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ!

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಿ ಬರಲು ಯತ್ನ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಮೈಸೂರು ಮೂಲದ ಪರಶುರಾಮ್​ ಕರ ಪತ್ರ ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕೆಪಿಎಸ್’ಸಿ ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಬಂದಿದ್ದ ಪರಶುರಾಮ್ ಅವರನ್ನು ಸಿಎಂ ಬಳಿ ಬಿಡದಿದ್ದಕ್ಕೆ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ಮಾಹಿತಿ ತಿಳಿದು […]

ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ! Read More »

ಮಗನನ್ನೇ ಗುಂಡಿಟ್ಟು ಕೊಂದ ತಂದೆ!!

ವ್ಯಕ್ತಿಯೋರ್ವ ಕೋಪದ ಭರದಲ್ಲಿ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ವಿಷಯವೊಂದಕ್ಕೆ ನರ್ತನ್ ಮತ್ತು ಅವರ ತಂದೆ ಸುರೇಶ್ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ಕೋಪದ ಭರದಲ್ಲಿ ತಂದೆ ಮಗನನ್ನು ಹತೈಗೆದಿದ್ದಾರೆ. ಗುಂಡಿನ ಸದ್ದು ಕೇಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ನರ್ತನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು

ಮಗನನ್ನೇ ಗುಂಡಿಟ್ಟು ಕೊಂದ ತಂದೆ!! Read More »

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ

ಬೆಂಗಳೂರು: ಪಕ್ಷಕ್ಕೆ ಯಾರನ್ನೇ ಕರೆತರುವಾಗ ಅವರ ಪೂರ್ವಾಪರ ವಿಚಾರಿಸಿ ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಶುಕ್ರವಾರ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಖರ್ಗೆ ಅವರು, ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು ಎಂದು ಹೇಳಿದರು. ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ Read More »

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ | ಗಣರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಡಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ | ಗಣರಾಜ್ಯೋತ್ಸವ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ Read More »

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಶೈಲೇಶ್ ಅಂಬೆಕಲ್ಲು ಆಯ್ಕೆ

ಪುತ್ತೂರು: ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್‌ ಅಂಬೆಕಲ್ಲು ಆಯ್ಕೆಯಾಗಿದ್ದಾರೆ. ಸಾಂಘಿಕ ಪ್ರಶಸ್ತಿಗೆ ಪೆರುವಾಜೆಯ ಭಾವೈಕ್ಯ ಯುವಕ ಮಂಡಲ ಆಯ್ಕೆಯಾಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಶೈಲೇಶ್ ಅಂಬೆಕಲ್ಲು ಆಯ್ಕೆ Read More »

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ!

ಬೆಂಗಳೂರು: ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಮಾಹಿತಿ ನೀಡಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆದು, ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು. ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್, ಶೆಟ್ಟರ್ ಅವರು ಬಿಜೆಪಿಯಿಂದ ಸ್ಪರ್ಧಿಸಿ

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ! Read More »

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!??

ಬೆಂಗಳೂರು: ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಮರು ಸೇರ್ಪಡೆ ಮಾಡುವ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಬಿಜೆಪಿಗೆ ಮರು ಸೇರ್ಪಡೆಯಾಗುವ ಬಗ್ಗೆ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಬಗ್ಗೆಯೂ ತೀರ್ಮಾನ ಕೈಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಹರಿದಾಡುತ್ತಿವೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡುವ ಬಗ್ಗೆ ಕೆಲವೇ ಕ್ಷಣದಲ್ಲಿ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಇದರ ನಡುವೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!?? Read More »

ಜ.27 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ | ಮಾಹಿತಿ ನೀಡಿದ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಜ.27 ರಂದು ನಡೆಸಲು ನಿರ್ಧರಿಸಲಾಗಿದೆ. ಬಿಜಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿ, ಲೋಕಸಭೆ ಚುನಾವಣೆ ಇನ್ನೇನು ಬರಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರ ತನಕ ಸಭೆ ಏರ್ಪಡಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಚುನಾವಣಾ ಸಿದ್ಧತೆಗಳು, ಪ್ರಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವ

ಜ.27 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ | ಮಾಹಿತಿ ನೀಡಿದ ಕಾರ್ಯದರ್ಶಿ ಪಿ.ರಾಜೀವ್ Read More »

ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್‍ನವರ ವಿರೋಧ ಇನ್ನೂ ಮುಗಿದಿಲ್ಲ | ಪ್ರಧಾನಿ ನರೇಂದ್ರ ಮೋದಿಯವರನ್ನು ಗರ್ಭಗುಡಿ ಪ್ರವೇಶಿಸಲು ಬಿಡಬಾರದಿತ್ತು | ವಿವಾದಾತ್ಮಕ ಹೇಳಿಕೆ ನೀಡಿದ ವೀರಪ್ಪ ಮೊಯಿಲಿ

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರನ್ನು ಅಯೋಧ್ಯೆ ಶ್ರೀರಾಮ ಮಂದಿರದ ಗರ್ಭ ಗುಡಿ ಪ್ರವೇಶಿಸಲು ಬಿಡಬಾರದಿತ್ತು. ಹೀಗೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಮಾಜಿ ಸಿಎಂ. ವೀರಪ್ಪ ಮೊಯಿಲಿ. ಕಾಂಗ್ರೆಸ್ ಪಕ್ಷದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯೊಂದಲ್ಲಿ ಅವರು ಈ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‍ನವರು ರಾಮಮಂದಿರ ವಿಚಾರದಲ್ಲಿ ವಿರೋಧವನ್ನು ಇನ್ನೂ ಬಿಟ್ಟಿಲ್ಲ ಎಂದು ಸಾಬೀತು ಮಾಡಿದ್ದಾರೆ. ರಾಮ ಮಂದಿರ ಅಪೂರ್ಣ ರಾಮ ಮಂದಿರವಾಗಿದ್ದು, ಕೇವಲ ಶ್ರೀರಾಮ ಪ್ರಾಣ ಪ್ರತಿಷ್ಠೆ ಮಾಡಿದರೆ ಸಾಲದು. ಅಲ್ಲಿ ರಾಮ,

ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್‍ನವರ ವಿರೋಧ ಇನ್ನೂ ಮುಗಿದಿಲ್ಲ | ಪ್ರಧಾನಿ ನರೇಂದ್ರ ಮೋದಿಯವರನ್ನು ಗರ್ಭಗುಡಿ ಪ್ರವೇಶಿಸಲು ಬಿಡಬಾರದಿತ್ತು | ವಿವಾದಾತ್ಮಕ ಹೇಳಿಕೆ ನೀಡಿದ ವೀರಪ್ಪ ಮೊಯಿಲಿ Read More »

ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೇವೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಮುಂದಿನ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆಗೆ ಕುರಿತು ಈಗಾಗಲೇ ಚರ್ಚಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ಎಸ್‍.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಕ್ಷೇತ್ರಗಳ ಕುರಿತು ಚರ್ಚೆಯಾಗಿದೆ. ಸಭೆಯಲ್ಲಿ ಚರ್ಚೆಯಾದ ಅಂಶಗಳನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಶೀಘ್ರ ಅಭ್ಯರ್ಥಿಗಳ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದ ಅವರು, ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮುಂದಿನ

ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೇವೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Read More »

error: Content is protected !!
Scroll to Top