ರಾಜ್ಯ

ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್, ಬಿಜೆಪಿ ಮುಖಂಡರು ಭೇಟಿ

ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿಗಳು ಸಹಿತ ಬಿಜೆಪಿ-ಜೆಡಿಎಸ್ ರಾಜ್ಯ ಮುಖಂಡರುಗಳು ಭೇಟಿ ನೀಡಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ  ಡಾ. ಅಶ್ವಥ್ ನಾರಾಯಣ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶೋಭಾ ಕರಂದ್ಲಾಜೆ, ಸೋಮಣ್ಣ, ಡಾ. ಕೆ ಸುಧಾಕರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, […]

ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್, ಬಿಜೆಪಿ ಮುಖಂಡರು ಭೇಟಿ Read More »

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕ‌ರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಇರುವುದರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ Read More »

ಹೆತ್ತ ತಾಯಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ

ಬೆಂಗಳೂರು: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಗಾದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ. ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು

ಹೆತ್ತ ತಾಯಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ l ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ

ಬೆಂಗಳೂರು : ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ  ವೆಬ್ ಸೈಟ್ karresults.nic.in ಮತ್ತು pue.kar.ni c ಮೂಲಕ ದ್ವಿತೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ l ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ Read More »

ಭಾವನಿಂದ ಭಾಮೈದನ ಹತ್ಯೆ

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಭಾವನಿಂದ ಭಾಮೈದನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವೆಂಕಟೇಶಪುರದಲ್ಲಿ ನಡೆದಿದೆ. ಕಿರಣ್ ಕುಮಾರ್ (32) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಚಾಕುವಿನಿಂದ ಇರಿದು ಭಾಮೈದನನ್ನು ಭಾವ ಲಕ್ಷ್ಮಣ ಎನ್ನುವವರು ಭೀಕರವಾಗಿ ಹತ್ಯೆಗೈದಿದ್ದಾರೆ. ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇದೇ ವಿಚಾರಕ್ಕೆ ಇಂದು ಭಾವ ಹಾಗೂ ಭಾಮೈದನ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕಿರಣ್ ಕುಮಾರ್ ಬೆನ್ನಿಗೆ ಲಕ್ಷ್ಮಣ ಚಾಕು ಇರಿದಿದ್ದಾನೆ. ಗಂಭೀರವಾಗಿ

ಭಾವನಿಂದ ಭಾಮೈದನ ಹತ್ಯೆ Read More »

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1 ರಿಂದ ಮಾ.22 ರ ತನಕ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು

ಬೆಂಗಳೂರು: ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದು, ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಒತ್ತಾಯಿಸಿದೆ. ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ. ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ

ಶಾಖದ ಹೊಡೆತದ ರಕ್ಷಣೆಗೆ ಅರ್ಧ ದಿನ ರಜೆ – ಪೌರಕಾರ್ಮಿಕರು ಆಗ್ರಹಿಸಿದ್ದರು Read More »

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿಗೆ ಹಾರ ಹಾಕಿದ ಘಟನೆಯಲ್ಲಿ ಪಿಸ್ತೂಲು ಹಿಡಿದುಕೊಂಡ ಸೆಕ್ಯೂರಿಟಿ ವೈಫಲ್ಯ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಜೊತೆನೂ ಗನ್ ಮ್ಯಾನ್‌ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ್ದಾರೆ. ರಿಯಾಜ್ ಬಳಿ

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ Read More »

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ

ಸಕಲೇಶಪುರ:ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೊಲ್ಲಹಳ್ಳಿ ಗ್ರಾಮದ ಮಂಜು ಎಂಬವರಿಗೆ ಸೇರಿದ ತೆಂಗಿನಮರದ ಗರಿಗಳನ್ನು ಕತ್ತರಿಸಲು ನವೀನ್ ಎಂಬಾತ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮರವೇರಿದ್ದರು. ತೆಂಗಿನ ಗರಿಗಳನ್ನು ಕತ್ತರಿಸಿ ಕೆಳಗೆ ಇಳಿಯುತ್ತಿರಬೇಕಾದರೆ ಮರದಲ್ಲಿಯೇ ನವೀನ್ ಪ್ರಜ್ಞೆ ತಪ್ಪಿದ್ದಾನೆ. ಇದನ್ನು ಗಮನಿಸಿದ ಮಂಜು ಅವರು ಹಾಗೂ ಸ್ಥಳೀಯರು ಕೂಡಲೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಏಣಿ ಮೂಲಕ ಮರವೇರಿ, ಸೊಂಟಕ್ಕೆ ಹಗ್ಗ ಕಟ್ಟಿ ನವೀನ್‌ನನ್ನು ರಕ್ಷಿಸಿದ್ದಾರೆ.

ಗರಿಕತ್ತರಿಸಲು ತೆಂಗಿನಮರ ಏರಿದ ಯುವಕ ಪ್ರಜ್ಞೆ ತಪ್ಪಿ ಪಾರಾದ ಘಟನೆ Read More »

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ

ಬೆಂಗಳೂರು: ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್‌ಆರ್‌ ಫಂಡ್ ಬ್ಲ್ಯಾಕ್ ಮನಿಯನ್ನು ಖಾಸಗಿ ಟ್ರಸ್ಟ್‌ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಿಎಸ್‌ಆರ್‌ ಫಂಡ್ ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್‌ಗಳಿಗೆ ನೀಡುವುದಾಗಿ ಕೋಟಿ

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ Read More »

error: Content is protected !!
Scroll to Top