ರಾಜ್ಯ

ನಾಳೆಯಿಂದ ಫೆಡರೇಷನ್ ಆಪ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ನಿಂದ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ಜ. 17ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದೆ. ಕೇಂದ್ರದ ಹಿಟ್ ಆಂಡ್ ರನ್ ಕಾನೂನು ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸಲಿದ್ದು, ಸಾರಿಗೆ ವಲಯದೊಂದಿಗೆ ಚರ್ಚಿಸದೆ ಈ ಕಾನೂನನ್ನು ಪರಿಚಯಿಸಿದೆ ಎಂದು ಆರೋಪಿಸಿದ್ದಾರೆ. ಈಗಾಗಲೇ ಶೇ. 27ರಷ್ಟು ಚಾಲಕರ ಕೊರತೆಯನ್ನು ಎದುರಿಸುತ್ತಿದ್ದು, ಈ ನಡುವೆ ಕಠಿಣ ಕಾನೂನಿನ ಭೀತಿಗೆ ಚಾಲಕ ವೃತ್ತಿಗೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣವಾಗಬಹುದು […]

ನಾಳೆಯಿಂದ ಫೆಡರೇಷನ್ ಆಪ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಶನ್ ನಿಂದ ಮುಷ್ಕರ Read More »

ರಾಜ್ಯದ ಜಿಲ್ಲೆಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿದ ಬಿಜೆಪಿ | ದಕ್ಷಿಣ ಕನ್ನಡ ಸೇರಿದಂತೆ ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಹಾಗೂ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ನೇಮಿಸಲಾಗಿದೆ. ಹೀಗೆ ಪ್ರತಿ ಜಿಲ್ಲೆಗಳಿಗೂ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಎಸ್. ದತ್ತಾತ್ರಿ ಶಿವಮೊಗ್ಗ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೊಕೇಶ್ ಅಂಬೆಕಲ್ಲು ಬೆಂಗಳೂರು ಉತ್ತ,ರ, ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿಯಾಗಿ ಬಿ.ಎಚ್. ವಿಶ್ವನಾಥ್ ದಾವಣಗೆರೆ

ರಾಜ್ಯದ ಜಿಲ್ಲೆಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿದ ಬಿಜೆಪಿ | ದಕ್ಷಿಣ ಕನ್ನಡ ಸೇರಿದಂತೆ ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು? Read More »

ಎನ್.ಪಿ.ಎಸ್. ಸರಕಾರಿ ನೌಕರರು ಇನ್ನು ಓ.ಪಿ.ಎಸ್. ನೌಕರರು!! | ಶೀಘ್ರದಲ್ಲಿ ಹೊರಬೀಳಲಿದೆ ಆದೇಶ

ಪುತ್ತೂರು: ಸರಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ 2006, ಏ.1 ರ ನಂತರ ಕೆಲಸಕ್ಕೆ ಹಾಜರಾಗಿ ಪ್ರಸ್ತುತ ಎನ್.ಪಿ.ಎಸ್. ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಸರಕಾರಿ ನೌಕರರಿಗೆ ಓ.ಪಿ.ಎಸ್. ನೌಕರರೆಂದು ಪರಿಗಣಿಸುವುದಕ್ಕೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲಿ ಆದೇಶ ಹೊರಬೀಳಲಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಜ.10 ರಂದು ಆರ್ಥಿಕ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನು ಭೇಟಿ ಮಾಡಿ 2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್.

ಎನ್.ಪಿ.ಎಸ್. ಸರಕಾರಿ ನೌಕರರು ಇನ್ನು ಓ.ಪಿ.ಎಸ್. ನೌಕರರು!! | ಶೀಘ್ರದಲ್ಲಿ ಹೊರಬೀಳಲಿದೆ ಆದೇಶ Read More »

ನಾಳೆ ರಾಜ್ಯ ಸರಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಚಾಲನೆ | ಸಜ್ಜಾಗಿದೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ‘ಯುವ ನಿಧಿ’ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸಜ್ಜಾಗಿದೆ. ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಜ.12 ಶುಕ್ರವಾರ ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. 85 ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ

ನಾಳೆ ರಾಜ್ಯ ಸರಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಚಾಲನೆ | ಸಜ್ಜಾಗಿದೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ Read More »

ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ !

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯ ಮೃತದೇಹ ಪರಿಶೀಲಿಸಿದಾಗ ಬೇರೆ ಪ್ರಾಣಿಗಳೊಂದಿಗೆ ಕಾದಾಡಿರುವ ಗಾಯದ ಗುರುತುಗಳು ಕಂಡು ಬಂದಿದೆ. ಅಂದಾಜು 14 ವರ್ಷದ ಹುಲಿ ನಿತ್ರಾಣದಿಂದ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ತಿತಿಮತಿ ಎಸಿಎಫ್ ಗೋಪಾಲ್, ಪೊನ್ನಂಪೇಟೆ ಆರ್ ಎಫ್‍ಓ ಶಂಕರಪ್ಪ, ಡಿಆ‌ರ್ ಎಫ್‍ಓ ದಿವಾಕರ್, ತಿತಿಮತಿ ವಲಯದ ಡಿಆರ್ ಎಫ್‍ಓ ರವಿಕಿರಣ್, ಚೇತನ್, ಕಲ್ಲಳ್ಳ

ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ ! Read More »

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು!

ಎಟಿಎಂನಿಂದ ಹಣ ತೆಗೆದುಕೊಡುವುದಾಗಿ ನಂಬಿಸಿ ಕಾರ್ಡ್ ಪಡೆದು ಬದಲಾಯಿಸಿ, ಹಣ ಡ್ರಾ ಮಾಡಿ ವಂಚಿಸುವ ಜಾಲವೊಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಜ. 9ರಂದು ಒಂದೇ ದಿನ ಈ ರೀತಿ ವಂಚನೆಗೆ ಒಳಗಾದವರು ನೀಡಿರುವ ದೂರಿನಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಜ. 9ರಂದು ಬೆಳಗ್ಗೆ 10 ಗಂಟೆಗೆ ಶಿರೂರು ಮಾರ್ಕೆಟ್ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಶಿರೂರಿನ ಚೈತ್ರಾ ಎಂಬವರಿಗೆ ಬೆಳಗ್ಗೆ 10:15ಕ್ಕೆ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂನಲ್ಲಿ ಶಿರೂರಿನ ಬಲ್ಕೀಸ್

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು! Read More »

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎರಡು ದಿನಗಳ ಮಟ್ಟಿಗೆ ಹಿಂದೂಡಿದೆ. ಈ ಹಿಂದೆ ಏ.20 ಹಾಗೂ 21 ರಂದು ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಇದೀಗ ಏ.18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ನೀಡಿದೆ. ಏ.21 ರಂದು ಎನ್‍ ಡಿಎ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಜ.10 ರಿಂದ

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ Read More »

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್!

ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಜ. 18ರಿಂದ 28ರವರೆಗೆ ಬೆಂಗಳೂರಿನ ಲಾಲ್‍ ಭಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ‘ವಿಶ್ವಗುರು ಬಸವಣ್ಣ’ ಅವರ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ವಚನ ಸಾಹಿತ್ಯವನ್ನು ಪುಷ್ಪಗಳಲ್ಲಿ ಅರಳಿಸಲು ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸುತ್ತಿದೆ ಎಂದು ಲಾಲ್ಬಾಗ್ನ ಜಂಟಿ ನಿರ್ದೇಶಕ ಎಂ. ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು ವೆಚ್ಚ 2.75 ಕೋಟಿ ರೂ. ಆಗುತ್ತಿದ್ದು, ಪುಷ್ಪ ಪ್ರದರ್ಶನದ ವೆಚ್ಚ, ಪ್ರವೇಶ ಶುಲ್ಕವನ್ನು ಇನ್ನೂ

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್! Read More »

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!!

ಜನವರಿ 26ರಂದು ದಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಕಳೆದ ವರ್ಷವೂ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಮನವಿ ತಿರಸ್ಕರಿಸಿದ ಕೇಂದ್ರ!! Read More »

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

error: Content is protected !!
Scroll to Top