ರಾಜ್ಯ

ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 6 ಲಕ್ಷಕ್ಕೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೊಟೀಸ್ ಕಳುಹಿಸುತ್ತಿದೆ. ಇದರ ಜೊತೆಗೆ ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳಿಗೂ ತೆರಿಗೆ ಪಾವತಿಸುವಂತೆ ನೋಟಿಸ್ ಕಳುಹಿಸುತ್ತಿದೆ. ನಿಯಮದ ಪ್ರಕಾರ, ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಅಂಗಡಿಗಳು ಮತ್ತು ಸಣ್ಣ ಹೋಟೆಲ್‌ಗಳನ್ನು ‘ವಾಣಿಜ್ಯ’ ಎಂದು ವರ್ಗೀಕರಿಸಬೇಕು, ಅವುಗಳಿಗೆ ವಾಣಿಜ್ಯ ಘಟಕವಾಗಿ ತೆರಿಗೆ ಪಾವತಿಸಬೇಕು ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ತಿ ತೆರಿಗೆ ಸಂಗ್ರಹವನ್ನು ಸುಧಾರಿಸಲು ನಾಗರಿಕ ಸಂಸ್ಥೆ ಎಲ್ಲಾ ಆಯ್ಕೆಗಳನ್ನು ಪ್ರಯತ್ನಿಸುತ್ತಿದೆ. ಇದಲ್ಲದೆ, […]

ಮನೆಗಳಲ್ಲಿರುವ ಅಂಗಡಿಗಳು ಕೂಡ ತೆರಿಗೆ ಪಾವತಿಸಬೇಕು! Read More »

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!!

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ಸಾಮೂಹಿಕ ಅಂತ್ಯಸಂಸ್ಕಾರ:  ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು.  ಪರಿಹಾರ:  ಮೃತ ಯುವಕರ ಕುಟುಂಬದವರು

ಯಶ್ ಅಭಿಮಾನಿಗಳಿಗೆ ಕರೆಂಟ್ ಶಾಕ್: ಪರಿಹಾರ ಘೋಷಿಸಿದ ಸರಕಾರ!! Read More »

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗು, ದ.ಕ. ಗೌಡ ಸಮಾಜ ಇಡೀ ಸಮುದಾಯ, ರಾಜ್ಯ ಒಂದು ಅದ್ಭುತ ಕಾರ್ಯಕ್ರಮ ಸಂಘಟನೆ ಮಾಡುತ್ತಿದೆ. ವಿಶೇಷವಾಗಿ ದ.ಕ., ಕೊಡಗು ಗೌಡ ಸಮಾಜ ಇಡೀ ಸಮುದಾಯ ರಾಜ್ಯಕ್ಕೆ, ದೇಶಕ್ಕೆ ಅಭೂತಪೂರ್ವ

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ Read More »

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜ.7 ಭಾನುವಾರ ಲಗ್ಗೆರೆ ‘ನಮ್ಮನೆ’ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಬೆಳಿಗ್ಗೆ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಉದ್ಘಾಟಿಸಲಿದ್ದು, ಬೆಂಗಳೂರು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಶಾಸಕ ಮುನಿರತ್ನ, ಮಡಿಕೇರಿ

ನಾಳೆ: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ Read More »

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ನಗರದಾದ್ಯಂತ ಇರುವ ಕನ್ನಡ ನಾಮಫಲಕಗಳ ಸ್ಥಿತಿಗತಿ ಕುರಿತು ಜನವರಿ 15 ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುರುವಾರ ಸೂಚನೆ ನೀಡಿದೆ. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯ | ಜ. 15ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ Read More »

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!!

ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ. ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟವರು. ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವಸಂತ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ!! Read More »

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು!

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್‌ ಅಲಿಯಾಸ್‌ ಶ್ರೀಕಾಂತ್‌ ಅಲಿಯಾಸ್‌ ಕಾಂತ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ನಡೆಸಿದರು. ತನಿಖಾಧಿಕಾರಿಯ ಆಕ್ಷೇಪಣೆಯ ಜೊತೆಗೆ ಸರ್ಕಾರಿ ಅಭಿಯೋಜಕಿ ಅವರು ಆಕ್ಷೇಪಣೆ

ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು! Read More »

ಮಗು ಮಾರಾಟ ಪ್ರಕರಣ | ಐವರ ಬಂಧನ

ಹುಟ್ಟಿದ ಮಾರನೇ ದಿನವೇ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರದ ಬ್ಯಾಕರ ಹಳ್ಳಿಯಲ್ಲಿ ಮಗುವನ್ನು ಮಾರಾಟ ಮಾಡಿದ ಆರೋಪದಡಿ ತಾಯಿ ಗಿರಿಜಾ, ಆಶಾಕಾರ್ಯಕರ್ತೆ ಸುಮಿತ್ರ, ಮಗು ಖರೀದಿಸಿದ ಮಹಿಳೆ ಉಷಾ, ಶ್ರೀಕಾಂತ್ ಸುಬ್ರಹ್ಮಣ್ಯ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನ.15ರಂದು ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ತಮಗೆ ಇಬ್ಬರು ಮಕ್ಕಳಿರುವುದರಿಂದ ನ.16ರಂದು ಆಶಾ ಕಾರ್ಯಕರ್ತೆ ಸುಮಿತ್ರ ಅವರ ಮೂಲಕ ಚಿಕ್ಕಮಗಳೂರು ಮೂಲದ ಉಷಾ ಎಂಬುವವರಿಗೆ ಮಗು ಮಾರಾಟ ಮಾಡಿದ್ದರು. ಈ

ಮಗು ಮಾರಾಟ ಪ್ರಕರಣ | ಐವರ ಬಂಧನ Read More »

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ

ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿರುವ ರಾಜ್ಯ ಬಿಜೆಪಿ ಘಟಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ. 39 ಸೆಕೆಂಡುಗಳ ಈ ವಿಡಿಯೋದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಪ್ರವೇಶ ದ್ವಾರದ ಬಳಿ ನಿಂತಿರುವುದನ್ನು ಕಾಣಬಹುದು. ಅಲ್ಲಿಂದ ಅವರನ್ನು ಗರ್ಭಗುಡಿಗೆ ಬರುವಂತೆ ಮನವಿ ಮಾಡಿದರೂ, ಅವರು ಪ್ರವೇಶಿಸಲು ನಿರಾಕರಿಸುತ್ತಾರೆ. ಅವರ

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ Read More »

error: Content is protected !!
Scroll to Top