ರಾಜ್ಯ

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಮ್‌ ಅಮಟೆ ತಿಳಿಸಿದ್ದಾರೆ. ಡಿ. 24 ರಿಂದ 26 ರವರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ ವತಿಯಿಂದ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ಅನಸೂಯ ಜಯಂತಿ, ಶೋಭಾಯಾತ್ರೆ ಹಾಗೂ ದತ್ತಪಾದುಕೆ ದರ್ಶನ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಸೂಕ್ತ […]

ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ Read More »

ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ?

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಹಿಜಾಬ್ ನಿಷೇಧ ವಾಪಾಸ್ ಪಡೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಜಾಬ್ ನಿಷೇಧ ವಾಪಾಸು ಪಡೆಯಲಾಗುವುದು ಎಂದು ಹೇಳಿಕೆ ನೀಡಿದ್ದು, ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಗೆ ವಿಧಾನಸಭೆ ಚುನಾವಣೆಯಲ್ಲಿ ಹಿಜಾಬ್ ಪ್ರಮುಖ ಅಸ್ತ್ರವಾಗಿತ್ತು. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್‌ ಕಡೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕ್ರೋಡಿಕರಣವಾಗಿದ್ದವು. ಈ ನಡುವೆ ನಾವು ಅಧಿಕಾರಕ್ಕೆ

ಹಿಜಾಬ್ ನಿಷೇಧ ವಾಪಸ್ | ಬಿಜೆಪಿ ಹಿಂದುತ್ವದ ಅಸ್ತ್ರಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ! | ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆಯೇ ? Read More »

ಒಂದೇ ದಿನ 50 ಪ್ರಕರಣಗಳ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ!

ಬೆಂಗಳೂರು: ಕರ್ನಾಟಕದ ಹೈಕೋರ್ಟ್ ನ ನ್ಯಾಯಾಧೀಶರೊಬ್ಬರು ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿದ್ದಾರೆ. ಒಂದೇ ದಿನದಲ್ಲಿ ನೀಡಲಾಗಿರುವ ಗರಿಷ್ಠ ಪ್ರಕರಣಗಳ ತೀರ್ಪು ಇದಾಗಿದೆ. ನ್ಯಾ. ಎಂ ನಾಗಪ್ರಸನ್ನ ಅವರು ಒಂದೇ ದಿನದ್ಲಲಿ 50 ಪ್ರಕರಣಗಳ ತೀರ್ಪು ನೀಡಿರುವ ನ್ಯಾಯಾಧೀಶರಾಗಿದ್ದಾರೆ. ಈ 50 ಪ್ರಕರಣಗಳ ಪೈಕಿ ಪ್ರಧಾನ ಪೀಠದಲ್ಲಿ ವಿಚಾರಣೆಗೆ ಬಂದಿದ್ದ ಹಾಗೂ ತೀರ್ಪು ಕಾಯ್ದಿರಿಸಿದ್ದ ಪ್ರಕರಣಗಳ 25 ತೀರ್ಪುಗಳಿದ್ದರೆ, ಧಾರವಾಢ ಪೀಠದ 25 ಪ್ರಕರಣಗಳ ತೀರ್ಪಿವೆ. ಧಾರವಾಡ ಪೀಠದ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತಿನಿಧಿಸುತ್ತಿದ್ದ ವಕೀಲರು

ಒಂದೇ ದಿನ 50 ಪ್ರಕರಣಗಳ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ! Read More »

ಕಾಫಿನಾಡಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಆರು ದಿನ ನಿರ್ಬಂಧ | ಯಾಕಾಗಿ ? ಇಲ್ಲಿದೆ ವಿವರ

ಚಿಕ್ಕಮಗಳೂರು: ಇಂದಿನಿಂದ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲ ಪ್ರವಾಸಿ ತಾಣಗಳು ಬಂದ್ ಆಗಲಿವೆ. ಇಂದಿನಿಂದ ರಿಂದ ಡಿ.27 ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿ.24, 25, 26ರಂದು ದತ್ತಪೀಠದಲ್ಲಿ ದತ್ತಜಯಂತಿ  ಸಂಭ್ರಮ ಹಿನ್ನೆಲೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಗಳಿವೆ. ಆದ್ದರಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಪ್ರವಾಸಕ್ಕೆ ನಿರ್ಬಂಧ ಹೇರಿದೆ. ಈ

ಕಾಫಿನಾಡಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಆರು ದಿನ ನಿರ್ಬಂಧ | ಯಾಕಾಗಿ ? ಇಲ್ಲಿದೆ ವಿವರ Read More »

ಅಯೋಧ್ಯೆ ರಾಮಮಂದಿರ ಉದ್ಘಾಟನೆ ನೋಡಲು ರಾಯಚೂರು ಭಕ್ತನ ಪಾದಯಾತ್ರೆ!

ರಾಯಚೂರು: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಕೋಟಿ ಕೋಟಿ ಭಕ್ತರು ಶ್ರೀರಾಮನ ಜನ್ಮಭೂಮಿಗೆ ತೆರಳಲು ಸನ್ನದ್ಧರಾಗಿರುವ ಸಮಯದಲ್ಲೇ, ರಾಯಚೂರಿನ ಶ್ರೀರಾಮಭಕ್ತನೊಬ್ಬ ಕಾಲ್ನಡಿಗೆಯಲ್ಲೇ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ್ದಾನೆ. ನಗರದ ಮಡ್ಡಿಪೇಟೆ ಬಡಾವಣೆ ಯುವಕ ವಿನೋದ್‌ ರೆಡ್ಡಿ ರಾಯಚೂರಿನಿಂದ ಅಯೋಧ್ಯೆಗೆ ಒಬ್ಬಂಟಿಯಾಗಿ ಪಾದಯಾತ್ರೆ ಕೈಗೊಂಡಿದ್ದಾನೆ. 8ನೇ ತರಗತಿ ಓದಿರುವ ವಿನೋದ್‌ ರೆಡ್ಡಿಯದು ಬಡ ಕುಟುಂಬ. ಸಣ್ಣ ವಯಸ್ಸಿನಿಂದಲೇ ಹಿಂದೂ ಧರ್ಮ, ಅಧ್ಯಾತ್ಮದತ್ತ ಆಸಕ್ತಿ ಬೆಳೆಸಿಕೊಂಡಿದ್ದು, ಈತ ಶ್ರೀರಾಮನ ಪರಮ ಭಕ್ತ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ನೋಡಲು ರಾಯಚೂರು ಭಕ್ತನ ಪಾದಯಾತ್ರೆ! Read More »

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ | ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆ

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ  ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ  ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಪಟ್ಟಿ ಅಧ್ಯಕ್ಷರಾಗಿ ಸಂಜಯ್‌ ಕುಮಾರ್‌ ಸಿಂಗ್‌, ಹಿರಿಯ ಉಪಾಧ್ಯಕ್ಷರಾಗಿ ದೇವೇಂದರ್‌,    ಉಪಾಧ್ಯಕ್ಷರಾಗಿ ಅಸಿತ್‌ ಕುಮಾರ್‌ ಸಹ, ಜಯಪ್ರಕಾಶ್‌, ಕಾರ್‍ತರ್‌ ಸಿಂಗ್‌, ಎನ್‌.ಫೋನಿ, ಪ್ರಧಾನ ಕಾರ್ಯದರ್ಶಿಯಾಗಿ

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ | ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆ Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಒತ್ತಾಯ..

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದ್ದು, ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಒತ್ತಾಯ.. Read More »

ಇನ್ನು ಮುಂದೆ ರಾತ್ರಿ 9 ಗಂಟೆ ವರೆಗೂ ಪ್ರವಾಸಿಗರಿಗೆ ಮೈಸೂರು ಅರಮನೆ ಭೇಟಿಗೆ ಅವಕಾಶ | ಜಿಲ್ಲಾಡಳಿತದಿಂದ ಚಿಂತನೆ

ಮೈಸೂರು: ದಸರಾ ಸಂಭ್ರಮವನ್ನು ಮೀರಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮತ್ತು ಬ್ರಾಂಡ್ ಮೈಸೂರನ್ನು ಪ್ರಚಾರ ಮಾಡಲು ಉತ್ಸುಕವಾಗಿರುವ ರಾಜ್ಯ ಸರ್ಕಾರವು ಸಂಜೆ ಪ್ರವಾಸಿಗರಿಗೆ ಮೈಸೂರು ಅರಮನೆಯನ್ನು ತೆರೆಯಲು ಚಿಂತಿಸಿದ್ದು, ಇನ್ನು ಮುಂದೆ ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿಯು ರಾತ್ರಿ 9 ರವರೆಗೆ ಮೈಸೂರು ಅರಮನೆ ಪ್ರವಾಸಿಗರಿಗಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಿದೆ. ಅರಮನೆ ನಗರಿ ಮೈಸೂರಿನಲ್ಲಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವಕ್ಕೆ ವೇದಿಕೆ ಸಿದ್ಧವಾಗಿದೆ. ಇದರ ನಡುವೆ ಮೈಸೂರು ಅರಮನೆಯು ಪ್ರಪಂಚದಾದ್ಯಂತ

ಇನ್ನು ಮುಂದೆ ರಾತ್ರಿ 9 ಗಂಟೆ ವರೆಗೂ ಪ್ರವಾಸಿಗರಿಗೆ ಮೈಸೂರು ಅರಮನೆ ಭೇಟಿಗೆ ಅವಕಾಶ | ಜಿಲ್ಲಾಡಳಿತದಿಂದ ಚಿಂತನೆ Read More »

ಹೆಸರಾಂತ ನಟಿ ಹೇಮಾ ಚೌಧುರಿ ಅಸ್ವಸ್ಥ | ಆಸ್ಪತ್ರೆಗೆ ದಾಖಲು

ಕನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧುರಿ ಅನಾರೋಗ್ಯಕ್ಕೊಳಗಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೇಮಾ ಅವರ ಮಗ ಐರ್ಲೆಂಡ್‌ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇತ್ತೀಚೆಗೆ

ಹೆಸರಾಂತ ನಟಿ ಹೇಮಾ ಚೌಧುರಿ ಅಸ್ವಸ್ಥ | ಆಸ್ಪತ್ರೆಗೆ ದಾಖಲು Read More »

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು

ಮೈಸೂರು:  ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಭಯಗೊಂಡ ಮಹಿಳೆ ಹಾಗೂ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ (28) ಹಾಗೂ ಮುರಳಿ (20) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು Read More »

error: Content is protected !!
Scroll to Top